ರಾಜ್ಯಕ್ಕೂ ಕಾಲಿಟ್ಟ ಜುಂದ್‌-ಅಲ್‌ -ಅಕ್ಸಾ


Team Udayavani, Jan 11, 2019, 12:30 AM IST

terrorist-ss.jpg

ಬೆಂಗಳೂರು: ಸಿರಿಯಾದ ಜುಂದ್‌ -ಅಲ್‌ – ಅಕ್ಸಾ  ಅಥವಾ ಅಲ್‌- ನುಸ್ರಾ – ಫ್ರಂಟ್‌ ಉಗ್ರಸಂಘಟನೆ ಸೇರಿದ್ದಾರೆ ಎನ್ನಲಾದ ಕೇರಳ ಹಾಗೂ ರಾಜ್ಯದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಭದ್ರತಾ ತನಿಖಾ ದಳ( ಎನ್‌ಐಎ) ತನಿಖೆ ಚುರುಕುಗೊಳಿಸಿದ ಬೆನ್ನಲ್ಲೇ, ರಾಜ್ಯದಲ್ಲಿ ಉಗ್ರ ಸಂಘಟನೆ ಬೇರುಗಳಿರುವುದಕ್ಕೆ ಪುಷ್ಠಿ ದೊರೆತಂತಾಗಿದೆ.

ಉದ್ಯೋಗ ಸಲುವಾಗಿ ಕತಾರ್‌ ಸೇರಿದ ಯುವಕರು ಬಳಿಕ ಐಸಿಸ್‌ ಹಾಗೂ ಜುಂದ್‌ ಅಲ್‌ ಅಕ್ಸಾ ಸಂಘಟನೆಯಲ್ಲಿ ಸಕ್ರಿಯವಾಗಿರುವ ಹಲವರ ಸಂಪರ್ಕಕ್ಕೆ ಬಂದಿದ್ದು, ಅಂತಿಮವಾಗಿ 2013ರಲ್ಲಿ ಸಿರಿಯಾ ಪ್ರವೇಶಿಸಿ  ಜುಂದ್‌ ಅಲ್‌ ಅಕ್ಸಾ ಸಂಘಟನೆಗೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಯವಕರ ಹೆಸರನ್ನು ಎನ್‌ಐಎ ಬಹಿರಂಗಪಡಿಸದಿದ್ದರೂ, ಕರಾವಳಿ ಭಾಗದ ಕೆಲವು ಯುವಕರೇ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

2016ರಲ್ಲಿ ಐಸಿಸ್‌ ಸಂಘಟನೆ ಸೇರಲು ಸಜ್ಜಾಗಿದ್ದ ಆರು ಮಂದಿ ಆರೋಪಿಗಳನ್ನು ಎನ್‌ಐಎ ಬಂಧಿಸಿದ ಬಳಿಕ ಮತ್ತೂಮ್ಮೆ, ಕತಾರ್‌ನಲ್ಲಿದ್ದುಕೊಂಡೇ ರಾಜ್ಯದ ಹಲವು ಯುವಕರನ್ನು ಉಗ್ರಸಂಘಟನೆಗೆ ಸೇರಲು ಪ್ರೇರೇಪಿಸಿದ ಅಂಶ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ, ಆರೋಪಿ ಯುವಕರ ಹಿನ್ನೆಲೆ ಅವರ ಬೆಂಬಲಿಗರು, ರಾಜ್ಯದಲ್ಲಿ ಉಗ್ರ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದರೇ ಎಂಬ ಶಂಕೆ ವ್ಯಕ್ತವಾಗಿದೆ. ಜತೆಗೆ ಆರೋಪಿತ ಯುವಕರು ಬಳಸುತ್ತಿದ್ದ ಫೇಸ್‌ಬುಕ್‌, ವ್ಯಾಟ್ಸಾಪ್‌ ಗ್ರೂಪ್‌ಗ್ಳ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

ಮತ್ತೂಂದೆಡೆ ಎನ್‌ಐಎ ತನಿಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಲೇ ಎಚ್ಚೆತ್ತುಕೊಂಡಿರುವ ರಾಜ್ಯ ಪೊಲೀಸ್‌ ಇಲಾಖೆಯೂ ರಾಜ್ಯದಲ್ಲಿರಬಹುದಾದ ಉಗ್ರರ ಸ್ಲಿàಪರ್‌ಸೆಲ್‌ಗ‌ಳ ಬಗ್ಗೆ ಆಂತರಿಕ ತನಿಖೆ ಆರಂಭಿಸಿದೆ. ಜತೆಗೆ, ಈ ಹಿಂದೆ ಬಂಧನವಾಗಿದ್ದ ಉಗ್ರರನ್ನು ವಿಚಾರಣೆಗೊಳಪಡಿಸಲಿದೆ ಎಂದು ತಿಳಿದು ಬಂದಿದೆ.

ಇತರೆ ಉಗ್ರರ ಜತೆ ನಂಟು?
ದುಬೈನಲ್ಲಿದ್ದು ಐಸಿಸ್‌ ಉಗ್ರ ಸಂಘಟನೆ ಪರ ಫೇಸ್‌ಬುಕ್‌, ವ್ಯಾಟ್ಸಾಪ್‌, ಟ್ವಿಟರ್‌ ಸೇರಿದಂತೆ ವ್ಯಾಪಕ ಪ್ರಚಾರ ನಡೆಸಿ ಸಾವಿರಾರು ಮಂದಿ ಯುವಕರನ್ನು ಐಸಿಸ್‌ ಸೇರಲು ಪ್ರೇರೆಪಿಸಿದ ಆರೋಪದಲ್ಲಿ 2016ರಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಭಟ್ಕಳದ ಅದ್ನಾನ್‌ ಹಸ್ಸನ್‌ ಜತೆ ಜುಂದ್‌ ಅಲ್‌ ಅಕ್ಸಾ ಸಂಘಟನೆ ಸೇರಿರುವ ಯುವಕರಿಗೆ ನಂಟಿರುವ ಸಾಧ್ಯತೆಯಿದೆ.

ದುಬೈನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅದ್ನಾನ್‌, ಸೌದಿಅರೆಬಿಯಾ, ಫಿಲಿಡೆಲ್ಫಿಯಾ, ಶ್ರೀಲಂಕಾ ಸೇರಿ ವಿವಿಧ ದೇಶಗಳ ಸಾವಿರಾರು ಯುವಕರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ. ಆತ ರಚಿಸಿದ್ದ ವ್ಯಾಟ್ಸಾಪ್‌ ಗ್ರೂಪ್‌ನಲ್ಲಿ ಕರ್ನಾಟಕದ ಹಲವು ಯುವಕರು ಇರುವ ಶಂಕೆಯನ್ನು ಎನ್‌ಐಎ ವ್ಯಕ್ತಪಡಿಸಿತ್ತು. ಅದೇ ಯುವಕರು ಮತ್ತೂಂದು ಜುಂದ್‌ ಅಲ್‌ ಅಕ್ಸಾ ಸೇರಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ವಿದೇಶಿ ಯುವಕರೇ ಟಾರ್ಗೆಟ್‌ 
ಐಸಿಸ್‌ ಉಗ್ರ ಸಂಘಟನೆಗೆ ಪರ್ಯಾಯವಾಗಿ ಸಲಾಫಿ ಜಿಹಾದಿಗಳು ಕಟ್ಟಿಕೊಂಡ ಸಂಘಟನೆ  ಜುಂದ್‌- ಅಲ್‌- ಅಕ್ಸಾ ಸಿರಿಯಾ ನಾಗರಿಕ ಯುದ್ಧದ ವೇಳೆ ಬೆಳಕಿಗೆ ಬಂದಿತ್ತು. ಈ ಹಿಂದೆ ಇದೇ ಸಂಘಟನೆಯನ್ನು ಶರಿಯತ್‌ ಅಲ್‌ ಕೈದಾ ಎಂದು ಕರೆಯಲಾಗುತ್ತಿದ್ದು,ಅದರ ಅಂಗ ಸಂಸ್ಥೆಯಾಗಿ ಅಲ್‌- ನುಸ್ರಾ – ಫ್ರಂಟ್‌ ಕಾರ್ಯನಿರ್ವಹಿಸುತ್ತಿತ್ತು. ಸಿರಿಯಾದಲ್ಲಿ ಷರಿಯತ್‌ ಕಾನೂನು ಜಾರಿಗೊಳಿಸುವ ಗುರಿ ಸಂಘಟನೆಯದ್ದಾಗಿತ್ತು. ಈ ಸಂಘಟನೆ ವಿದೇಶಗಳ ಯುವಕರನ್ನು ಪ್ರಭಾವಿಸಿ ಅವರನ್ನು ತನ್ನ ಗುಂಪಿಗೆ ಸೇರಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. 

– ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.