ಭಗವಾನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jan 11, 2019, 5:32 AM IST
ಕಲಬುರಗಿ: ಶ್ರೀರಾಮನ ಬಗ್ಗೆ ವಿವಾದಾತ್ಮಕ ಹಾಗೂ ಅವಹೇಳನಕಾರಿ ಪದ ಬಳಸಿ ಕೃತಿ ರಚಿಸಿರುವ ಸಾಹಿತಿ ಕೆ.ಎಸ್. ಭಗವಾನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೇಜಾವರ ಶ್ರೀ ಸೇನೆ ಹಾಗೂ ಶ್ರೀ ರಾಮಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಾಹಿತಿ ಭಗವಾನ ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದರೂ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳದೇ ಅವರಿಗೆ ಭದ್ರತೆಯೊದಗಿಸುತ್ತಿದೆ ಎಂದು ಪೇಜಾವರ ಶ್ರೀ ಸೇನೆ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ಆರೋಪಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಾಹಿತಿ ಭಗವಾನ ಬೇಕಿದ್ದರೆ ಅವರನ್ನು ತಮ್ಮ ಬಳಿಯಲ್ಲೇ ಇಟ್ಟುಕೊಳ್ಳಲಿ. ಅದನ್ನು ಬಿಟ್ಟು ಸಾರ್ವಜನಿಕ ವೇದಿಕೆಗಳಲ್ಲಿ ಶ್ರೀರಾಮನ ಬಗ್ಗೆ ಬಾಯಿಗೆ ಬಂದಂತೆ ಮಾತಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಭಗವಾನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರ ಕೃತಿ ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಆಗ್ರಹಿಸಿದರು. ಭಗವಾನ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್.ಪಾಟೀಲ ನರಿಬೋಳ, ದಿವ್ಯಾಹಾಗರಗಿ, ಮಲ್ಲಿಕಾರ್ಜುನ ಸಾರವಾಡ, ಲಕ್ಷ್ಮೀಕಾಂತ ಸ್ವಾದಿ, ರವಿ ಪಾಟೀಲ ದೇಗಾಂವ, ಸಂಗಮೇಶ ಶೆಳ್ಳಗಿ, ಮಮತಾ ಡೊಳ್ಳೆ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್