ಕೆಮಿಸ್ಟ್ರಿ ವರ್ಕೌಟ್‌ ಆಯ್ತು: ಕರಿಯಪ್ಪನ ಹಾಡಿಗೆ ಮೆಚ್ಚುಗೆ 


Team Udayavani, Jan 11, 2019, 6:10 AM IST

chemistry-kariyappa.jpg

ಕನ್ನಡದಲ್ಲಿ ಈಗಾಗಲೇ ತರಹೇವಾರಿ ಶೀರ್ಷಿಕೆ ಇರುವಂತಹ ಚಿತ್ರಗಳು ಬಂದಿವೆ. ಆ ಸಾಲಿಗೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಎಂಬ ಚಿತ್ರವೂ ಒಂದು. ಈ ಚಿತ್ರ ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣಗೊಂಡು, ಬಿಡುಗಡೆಗೆ ಸಜ್ಜಾಗಿದೆ. ಅಷ್ಟೇ ಅಲ್ಲ, ಚಿತ್ರದ ಮೊದಲ ಹಾಡು ಕೂಡ ಹೊರಬಂದಿದೆ. ಹೌದು, ಸಂಗೀತ ನಿರ್ದೇಶಕ ನವೀನ್‌ ಸಜ್ಜು ಹಾಡಿರುವ “ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು, ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು…’ ಎಂಬ ಹಾಡು ಹೊರಬಂದಿದ್ದು, ಈಗಾಗಲೇ ಹಾಡಿಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

“ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ನಿರ್ದೇಶಕ ಕುಮಾರ್‌ ಅವರೇ ಈ ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಆರವ್‌ ರಿಶಿಕ್‌ ಚಿತ್ರಕ್ಕೆ ಸಂಗೀತ ನೀಡಿದ್ದು, ಕುಮಾರ್‌ ಬರೆದ ಹಾಡಿಗೆ ವಿಶೇಷ ಧ್ವನಿ ಬೇಕು ಎಂಬ ಕಾರಣಕ್ಕೆ, ನವೀನ್‌ ಸಜ್ಜು ಅವರಿಂದ ಹಾಡು ಹಾಡಿಸಲಾಗಿದೆ. ಈಗಾಗಲೇ ನವೀನ್‌ ಸಜ್ಜು ಅವರು ಹಾಡಿದ “ಎಣ್ಣೆ ನಮ್ದು ಊಟ ನಿಮ್ದು’ ಹಾಡು ಸಿಕ್ಕಾಪಟ್ಟೆ ಸದ್ದು ಮಾಡಿದ್ದು ಎಲ್ಲರಿಗೂ ಗೊತ್ತು. ನವೀನ್‌ ಸಜ್ಜು ಅವರೇ ಈ ಹಾಡನ್ನೂ ಹಾಡಬೇಕು ಎಂಬ ಕಾರಣದಿಂದ ನಿರ್ದೇಶಕರು ಅವರಿಂದ ಹಾಡನ್ನು ಹಾಡಿದ್ದಾರೆ.

ಎಂ ಸಿರಿ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಡಾ.ಮಂಜುನಾಥ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಶೂಟಿಂಗ್‌ ಮುಗಿಸಿದ್ದು, ಇದೀಗ  ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನಂದ್‌ ಆಡಿಯೋ ಸಂಸ್ಥೆ ಚಿತ್ರದ ಲಿರಿಕಲ್‌ ಆಡಿಯೋ ಬಿಡುಗಡೆ ಮಾಡಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲವ್‌ ಪ್ಯಾಥೋ ಸಾಂಗ್‌ ಇದಾಗಿದ್ದು, ಟಪ್ಪಾಂಗುಚ್ಚಿ ಶೈಲಿಯಲ್ಲೂ ಹಾಡು ಮೂಡಿ ಬಂದಿದೆ. ಯುವ ನಿರ್ದೇಶಕ ಕುಮಾರ್‌ ನಿರ್ದೇಶನದ ಚಿತ್ರದ ಪ್ರಮುಖ ಪಾತ್ರದಲ್ಲಿ “ಕಿರಿಕ್‌ ಪಾರ್ಟಿ’ ಚಂದನ್‌ ಆಚಾರ್‌,

ಯುವ ನಾಯಕಿ ಸಂಜನಾ ಆನಂದ್‌, ತಬಲಾ ನಾಣಿ, ಸುಚೇಂದ್ರ ಪ್ರಸಾದ್‌ ಡಾ.ಮಂಜುನಾಥ್‌, ಮೈಕೋ ನಾಗರಾಜ್‌, ರಾಕ್‌’ಲೈನ್‌ ಸುಧಾಕರ್‌ ನಟಿಸಿದ್ದಾರೆ. ಸದ್ಯಕ್ಕೆ “ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು’ ಹಾಡು ಒಳ್ಳೆಯ ಮೆಚ್ಚುಗೆ ಪಡೆದಿರುವುದರಿಂದ ಸಂಕ್ರಾಂತಿ ಹಬ್ಬದ ದಿನದಂದ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ. ಈ ಚಿತ್ರಕ್ಕೆ ಸುಜಯ್‌ ಕುಮಾರ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.  ಶಿವಸೇನ ಅವರು ಛಾಯಾಗ್ರಹಣ ಮಾಡಿದ್ದಾರೆ. ವೆಂಕಿ ಅವರ ಸಂಕಲನವಿದೆ. ಲಕ್ಷ್ಮಿತ್‌ ವಿನಯ್‌ ನೃತ್ಯ ನಿರ್ದೇಶನ ಮಾಡಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.