ಸಂಕ್ರಾಂತಿಗೆ “ಯಜಮಾನ’ ಗಿಫ್ಟ್
Team Udayavani, Jan 11, 2019, 6:11 AM IST
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುಂಬರುವ ಚಿತ್ರ “ಯಜಮಾನ’ ತೆರೆಗೆ ಬರುವ ಸನ್ನಾಹದಲ್ಲಿದೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳ ಅಂತಿಮ ಹಂತದಲ್ಲಿರುವ “ಯಜಮಾನ’ ಚಿತ್ರದ ಪ್ರಮೋಷನ್ ಕೆಲಸಗಳಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿರುವ ಚಿತ್ರತಂಡ, ಇದೇ ಸಂಕ್ರಾಂತಿ ಹಬ್ಬದಂದು “ಯಜಮಾನ’ನ ಮೊದಲ ಹಾಡನ್ನು ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.
ಈ ಮೂಲಕ ಸಂಕ್ರಾಂತಿ ಹಬ್ಬದ ಸಡಗರದ ನಡುವೆಯೇ “ಯಜಮಾನ’ನ ಪ್ರಮೋಷನ್ ಕೆಲಸಗಳು ಶುರುವಾಗಲಿವೆ. ಕಳೆದ ಡಿಸೆಂಬರ್ ಅಂತ್ಯಕ್ಕೆ “ಯಜಮಾನ’ ಚಿತ್ರದ ಬಹುಭಾಗದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ, ಬಾಕಿಯಿದ್ದ ಹಾಡಿನ ಚಿತ್ರೀಕರಣವನ್ನೂ ಜನವರಿ ಮೊದಲ ವಾರ ಪೂರ್ಣಗೊಳಿಸಿದೆ. ಹೀಗಾಗ ಸಂಕ್ರಾಂತಿ ವೇಳೆಗೆ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದರೆ, ಚಿತ್ರವನ್ನು ಮುಂಬರುವ ಫೆಬ್ರವರಿ ಅಂತ್ಯಕ್ಕೆ ತೆರೆಗೆ ತರಬಹುದು ಎಂಬುದು ಚಿತ್ರತಂಡದ ಲೆಕ್ಕಾಚಾರ.
ಅಂದಹಾಗೆ, “ಯಜಮಾನ’ ದರ್ಶನ್ ಮತ್ತು ವಿ. ಹರಿಕೃಷ್ಣ ಕಾಂಬಿನೇಷನ್ನ 25ನೇ ಚಿತ್ರವಾಗಿದ್ದು, ಚಿತ್ರದ ಹಾಡುಗಳು ಹಿಂದೆಂದಿಗಿಂತಲೂ ವಿಭಿನ್ನವಾಗಿರಲಿವೆ ಎಂದು ದರ್ಶನ್ ಮತ್ತು ವಿ. ಹರಿಕೃಷ್ಣ ಇಬ್ಬರೂ ವಿಶ್ವಾಸ ವ್ಯಕ್ತಪಡಿಸಿರುವುದರಿಂದ, ಅಭಿಮಾನಿಗಳಿಗೂ “ಯಜಮಾನ’ನ ಹಾಡುಗಳ ಮೇಲೆ ನಿರೀಕ್ಷೆ, ಕುತೂಹಲ ಹೆಚ್ಚಾಗಿಯೇ ಇದೆ. ಇನ್ನು ಜ. 15ರ ಸಂಕ್ರಾಂತಿಗೆ “ಯಜಮಾನ’ ಚಿತ್ರದ “ಶಿವನಂದಿ…’ ಎಂಬ ಮೊದಲ ಮೊದಲ ಹಾಡು ಬಿಡುಗಡೆಯಾಗಲಿದ್ದು, ಬಹದ್ದೂರ್ ಚೇತನ್ ಸಾಹಿತ್ಯವಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತವಿದೆ.
ಡಿ-ಬೀಟ್ಸ್ ಯೂ ಟ್ಯೂಬ್ ಚಾನಲ್ನಲ್ಲಿ ಈ ಹಾಡು ಬಿಡುಗಡೆಯಾಗಲಿದೆ. ಸಂಕ್ರಾಂತಿ ಬಳಿಕ ಪ್ರತಿ ಎರಡು-ಮೂರು ದಿನಗಳ ಅಂತರದಲ್ಲಿ ಬಾಕಿ ಇರುವ ಹಾಡಿಗಳನ್ನು ಒಂದೊಂದಾಗಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆಯಂತೆ ಚಿತ್ರತಂಡ. “ಯಜಮಾನ’ ಚಿತ್ರಕ್ಕೆ ಪಿ. ಕುಮಾರ್ ಮತ್ತು ವಿ. ಹರಿಕೃಷ್ಣ ಅವರ ಜಂಟಿ ನಿರ್ದೇಶನವಿದ್ದು, ಶೈಲಜಾ ನಾಗ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಾಯಕ ದರ್ಶನ್ ಅವರಿಗೆ ನಾಯಕಿಯರಾಗಿ ರಶ್ಮಿಕಾ ಮಂದಣ್ಣ ಮತ್ತು ತಾನ್ಯಾ ಹೋಪ್ ಜೋಡಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!