ಸಂಘಟಿತರಾಗಿ ಸರ್ಕಾರಿ ಸೌಲಭ್ಯ ಪಡೆಯಿರಿ: ಮಾದೇಶ


Team Udayavani, Jan 11, 2019, 6:28 AM IST

gul-11.jpg

ಚಿತ್ತಾಪುರ: ಕೊರಮ ಸಮಾಜದವರೆಲ್ಲ ಒಗ್ಗೂಡಿದಾಗ ಮಾತ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅಖೀಲ ಕರ್ನಾಟಕ ಕೊರಮ ಸಮಾಜದ ರಾಜ್ಯ ಘಟಕ ಅಧ್ಯಕ್ಷ ಜಿ. ಮಾದೇಶ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಕೊರಮ (ಭಜಂತ್ರಿ) ಸಮಾಜದಿಂದ ಕಾಯಕಯೋಗಿ ನೂಲಿಯ ಚಂದಯ್ಯನವರ 911ನೇ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಕೊರಮ ಸಮಾಜ ತಾಲೂಕು ಮಟ್ಟದ ಪ್ರಥಮ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರಮ ಸಮಾಜ ರಾಜಕೀಯ ಅಧಿಕಾರ, ಸಾಮಾಜಿಕ ನ್ಯಾಯ ಸೌಲಭ್ಯ ಪಡೆಯಲು ಸಮಾಜದ ಮುಖಂಡರು ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು.

ಶತಮಾನದಿಂದ ಸಮಾಜದ ಕೆಲಸವನ್ನು ಶ್ರದ್ಧೆ, ನಿಷ್ಠೆಯಿಂದ ಮಾಡುತ್ತಿರುವ ಕೊರಮ ಸಮಾಜ ಶೋಷಣೆಗೆ ಒಳಗಾಗಿದೆ. ಸರ್ಕಾರಿ ಸವಲತ್ತುಗಳಿಂದ ವಂಚಿತಗೊಂಡಿದೆ. ರಾಜಕೀಯ ಅಧಿಕಾರ ಇಲ್ಲದ ಕಾರಣ ಸರ್ಕಾರದಲ್ಲಿ ಧ್ವನಿ ಇಲ್ಲದ ಸಮಾಜವಾಗಿದೆ. ಸಮಾಜಕ್ಕೆ ರಾಜಕೀಯ ನ್ಯಾಯ ಒದಗಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯಕ್ತಿಯ ಹುಟ್ಟಿನಿಂದ ಸಾವಿನವರೆಗೆ ಬೇಕಾದ ಸೌಲಭ್ಯ ಸೇವೆಯನ್ನು ಸಮಾಜ ನೀಡುತ್ತಿದೆ. ಆದರೆ ಕೊರಮ ಸಮಾಜವನ್ನು ಪ್ರೀತಿಯಿಂದ ಕಾಣದ ದೃಷ್ಟಿಕೋನ ಬದಲಲಾಗಬೇಕಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ದಿಗ್ಗಾಂವ ಹಿರೇಮಠದ ಶ್ರೀ ಸಿದ್ದವೀರ ಶಿವಾಚಾರ್ಯರು, ಯಳಸಂಗಿಯ ಸಿದ್ದಾರೂಢ ಮಠದ ಪರಮಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ, ಎಐಬಿಎಸ್‌ ರಾಜ್ಯಾಧ್ಯಕ್ಷ ಸುಭಾಷ ರಾಠೊಡ, ಕೊರಮ ಸಮಾಜದ ಬೆಳಗಾವಿ ಜಿಲ್ಲಾಧ್ಯಕ್ಷ ರಾಮೋಜಿ ಭಜಂತ್ರಿ, ಜಿಲ್ಲಾಧ್ಯಕ್ಷ ಗಿರೀಶ ಭಜಂತ್ರಿ, ಅಖೀಲ ಕರ್ನಾಟಕ ಅಲೆಮಾರಿ ಜನಾಂಗದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಮಾನ್ಪಡೆ ಮಾತನಾಡಿದರು.

ಮಾಜಿ ಶಾಸಕ ವಾಲ್ಮೀಕಿ ನಾಯಕ ಉದ್ಘಾಟಿಸಿದರು. ತೆಂಗಿನನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಂಜಪ್ಪ ಕಡೂರ ಅವರು ನೂಲಿ ಚಂದಯ್ಯನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಪುರಸಭೆ ಸದಸ್ಯರಾದ ನಾಗರಾಜ ಭಂಕಲಗಿ, ವಿನೋದ ಗುತ್ತೇದಾರ, ಧರ್ಮಣ್ಣ ದೊಡ್ಡಮನಿ, ಶಾಂತಮಲ್ಲಪ್ಪ ಚಾಳೀಕಾರ, ಗೋವಿಂದರಾಜ ಭಜಂತ್ರಿ, ಹಣಮಂತ ಭಜಂತ್ರಿ, ಭಾಗೇಶ ಭಜಂತ್ರಿ, ಜಕ್ಕಣಾಚಾರಿ ಗಣಾಪುರ, ಹೊನ್ನಪ್ಪ ಮಾನ್ಪಡೆ, ಖಂಡಪ್ಪ ಭಜಂತ್ರಿ, ಸಾಬಣ್ಣ ಭಜಂತ್ರಿ, ಬಿಚ್ಚಪ್ಪ ಭಜಂತ್ರಿ ಇದ್ದರು.

ಕೊರಮ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಭಜಂತ್ರಿ ಹಲಕರ್ಟಿ ಪ್ರಾಸ್ತಾವಿಕ ಮಾತನಾಡಿದರು. ಪ್ರಕಾಶ ಭಜಂತ್ರಿ ಸ್ವಾಗತಿಸಿದರು, ಶಿಕ್ಷಕ ಈರಣ್ಣ ಚವಡಾಪುರ ನಿರೂಪಿಸಿದರು, ನೂಲಿಯ ಚಂದಯ್ಯನವರ 911ನೇ ಜಯಂತ್ಯುತ್ಸವ ನಿಮಿತ್ತ ಪಟ್ಟಣದ ನಾಗಾವಿ ವೃತ್ತದಿಂದ ಸಮಾರಂಭದ ವೇದಿಕೆವರೆಗೆ ಕಳಸ, ಕುಂಭ ಸಕಲ ಮಂಗಳ ವಾದ್ಯಮೇಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.