ಚಿನ್ನಾಭರಣ ಕದ್ದ ಮನೆ ಕೆಲಸದಾಕೆ ಬಂಧನ


Team Udayavani, Jan 11, 2019, 6:40 AM IST

chinnabgharana.jpg

ಬೆಂಗಳೂರು: ಮನೆ ಮಾಲೀಕರ ನಂಬಿಕೆ ಗಳಿಸಿ ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದಲ್ಲದೆ, ಅವುಗಳನ್ನು ಅಡಮಾನ ಇಟ್ಟು ಮಕ್ಕಳ ಶಾಲಾ ಶುಲ್ಕ ಪಾವತಿಸಿ, ಪ್ರವಾಸಿ ತಾಣಗಳನ್ನು ಸುತ್ತಿದ ಮನೆಕೆಲಸದಾಕೆ, ಜೀವನ್‌ ಭೀಮಾನಗರ ಪೊಲೀಸರ ಬಲೆಗೆ ಬಿದಿದ್ದಾಳೆ.

ಬೈಯಪ್ಪನಹಳ್ಳಿ ನಿವಾಸಿ ರಾಜೇಶ್ವರಿ (37) (ಹೆಸರು ಬದಲಾಯಿಸಲಾಗಿದೆ) ಬಂಧಿತೆ. ಈಕೆಯಿಂದ 300 ಗ್ರಾಂ. ತೂಕದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಆರೋಪಿಯು ನ್ಯೂ ತಿಪ್ಪಸಂದ್ರದ ನಿವಾಸಿ ಜಾನಕಿ ಎಂಬುವವರ ಮನೆಯಲ್ಲಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಳು.

ನ್ಯೂ ತಿಪ್ಪಸಂದ್ರದ ನಿವಾಸಿ ಜಾನಕಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಐದು ವರ್ಷಗಳಿಂದ ರಾಜೇಶ್ವರಿ, ಜಾನಕಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಮಧ್ಯೆ 2018 ಜೂನ್‌ 3ರಂದು ಬ್ಯಾಂಕಿನ ಲಾಕರ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಜಾನಕಿ ಅವರು ಮನೆಗೆ ತಂದು ತಮ್ಮ ಕೊಠಡಿಯ ಬೀರುವಿನಲ್ಲಿ ಇರಿಸಿದ್ದರು.

ಚಿಕಿತ್ಸೆಗಾಗಿ ಆಗಾಗ ಆಸ್ಪತ್ರೆಗೆ ಹೋಗುತ್ತಿದ್ದರಿಂದ ಮನೆಯ ಬಾಗಿಲಿಗೆ ಬೀಗ ಹಾಕಿ ಕೀಲಿ ಕೈ ಅನ್ನು ಪಕ್ಕದ ಬಾಡಿಗೆದಾರರ ಕೈಲಿ ಕೊಟ್ಟು ಹೋಗುತ್ತಿದ್ದರು. ಮನೆ ಕೆಲಸಕ್ಕೆಂದು ಬರುತ್ತಿದ್ದ ರಾಜೇಶ್ವರಿ ಕೀಲಿ ಪಡೆದು ಬೀಗ ತೆಗೆದು ಮನೆಯನ್ನು ಸ್ವತ್ಛ ಮಾಡಿ ಹೋಗುತ್ತಿದ್ದಳು.

ಆರೋಗ್ಯ ಸರಿ ಇಲ್ಲದ ಕಾರಣ ಜಾನಕಿ ಅವರು ಮನೆಯಲ್ಲಿದ್ದ ಚಿನ್ನಾಭರಣಗಳ ಬಗ್ಗೆ ಹೆಚ್ಚು ಗಮನ ಹರಿಸಿರಿಲಿಲ್ಲ. ಈ ಮಧ್ಯೆ ಜ.1ರಂದು ಮಧ್ಯಾಹ್ನ ಬೀರು ಪರಿಶೀಲಿಸಿದಾಗ ಚಿನ್ನಾಭರಣ ಕಳುವಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಜಾನಕಿ ಅವರು,

ರಾಜೇಶ್ವರಿ ಮತ್ತು ಇತರೆ ಮನೆ ಕೆಲಸದವರನ್ನು ವಿಚಾರಿಸಿದರೂ ಪ್ರಯೋಜನವಾಗಿಲ್ಲ. ಬಳಿಕ ಕೆಲಸಗಾರರ ಮೇಲೆ ಅನುಮಾನಗೊಂಡು ಜ.2ರಂದು ಜೀವನ್‌ ಭೀಮಾನಗರ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ಆರಂಭಿಸಿ,  ರಾಜೇಶ್ವರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಕದ್ದ ಹಣದಲ್ಲಿ ಪ್ರವಾಸ: “ಕಳವು ಮಾಡಿದ ಚಿನ್ನಾಭರಣಗಳನ್ನು ಫೈನಾನ್ಸ್‌ ಒಂದರಲ್ಲಿ ಅಡಮಾನ ಇಟ್ಟಿದ್ದು, ಮೂವರು ಮಕ್ಕಳ ಶಾಲಾ ಶುಲ್ಕ ಪಾವತಿಸಿದ್ದೇನೆ. ಜತೆಗೆ ಮನೆಗೆ ಬೇಕಾದ ಫ್ರೀಜ್‌, ವಾಷಿಂಗ್‌ ಮಷೀನ್‌, ಎಲ್‌ಇಡಿ ಟಿವಿ ಸೇರಿ ಇತರೆ ದಿನ ಉಪಯೋಗಿ ವಸ್ತುಗಳನ್ನು ಖರೀದಿಸಿದ್ದೇನೆ ಹಾಗೂ ಆಂಧ್ರಪ್ರದೇಶ, ತಂಜಾವೂರು ಹಾಗೂ ತಮಿಳುನಾಡಿನಲ್ಲಿರುವ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳಿಗೆ ಕುಟುಂಬ ಸಮೇತ ಹೋಗಿ, ಹಣ ವ್ಯಯಿಸಿದ್ದೇನೆ,” ಎಂದು ರಾಜೇಶ್ವರಿ ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲಸಕ್ಕೆ ಬರುತ್ತಿದ್ದ ರಾಜೇಶ್ವರಿ: 2-3 ತಿಂಗಳ ಹಿಂದೆಯೇ ಕೃತ್ಯವೆಸಗಿದ್ದ ಆರೋಪಿ ರಾಜೇಶ್ವರಿ, ಯಾರಿಗೂ ತಿಳಿಯದಂತೆ ಚಿನ್ನಾಭರಣಗಳನ್ನು ಅಡಮಾನ ಇಟ್ಟು ಐಷಾರಾಮಿ ಜೀವನ ನಡೆಸುತ್ತಿದ್ದಳು. ಆದರೂ ತಾನು ಒಡವೆ ಕದ್ದಿರುವ ವಿಚಾರ ಯಾರಿಗೂ ತಿಳಿಯಬಾರದು ಎಂದು ಪ್ರತಿನಿತ್ಯ ಕೆಲಸಕ್ಕೆ ಬರುತ್ತಿದ್ದಳು. ಹೀಗಾಗಿ ಜಾನಕಿ ಅವರಿಗೆ ಆಕೆಯ ಮೇಲೆ ಅನುಮಾನ ಬಂದಿರಲಿಲ್ಲ. ಈ ಮಧ್ಯೆ ಬೀರು ಪರಿಶೀಲಿಸಿದಾಗ ಕಳವು ಆಗಿರುವುದು ಬೆಳಕಿಗೆ ಬಂದಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.