ಶ್ವಾನ ಪ್ರದರ್ಶನದಲ್ಲಿ ವಿಜೇತರಿಗೆ ಮೋಸ


Team Udayavani, Jan 11, 2019, 7:07 AM IST

dvg-5.jpg

ದಾವಣಗೆರೆ: ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಕಳೆದ 6ರಂದು ನಡೆದ ರಾಜ್ಯ ಮಟ್ಟದ ಶ್ವಾನ ಪ್ರದರ್ಶನದಲ್ಲಿ ಪ್ರಥಮ ಸ್ಥಾನಗಳಿಸಿದ ಶ್ವಾನಗಳ ಮಾಲೀಕರಿಗೆ ನಗದು ಬಹುಮಾನ ನೀಡಲು ಅಧಿಕಾರಿಗಳು, ಸಂಘಟಕರು ಚೌಕಾಸಿ…ಗೆ ಇಳಿದಿದ್ದಾರೆ!.

ರಾಜ್ಯ ಮಟ್ಟದ ಪಶು ಮೇಳ-2019ರ ಅಂಗವಾಗಿ ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ಜಾತಿ, ತಳಿವಾರು ಶ್ವಾನ ಪ್ರದರ್ಶನ ಏರ್ಪಡಿಸಲಾಗಿತ್ತು. ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರೇ ಚಾಲನೆ ನೀಡಿದ್ದರು. ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿ, ವಿಜೇತರಾದ ದಾವಣಗೆರೆಯ ಶ್ವಾನಗಳ ಮಾಲೀಕರಿಗೆ ಬಹುಮಾನದ ಮೊತ್ತ ನೀಡಲು ಅಧಿಕಾರಿಗಳು ಹೊಸ ರಾಗ ತೆಗೆದಿದ್ದಾರೆ.

ಶ್ವಾನ ಪ್ರದರ್ಶನದಲ್ಲಿ ವಿಜೇತರಿಗೆ ಪಶುಸಂಗೋಪನಾ ಇಲಾಖೆ ಸಚಿವ ವೆಂಕಟರಾವ್‌ ನಾಡಗೌಡ ಪ್ರಮಾಣ ಪತ್ರ ವಿತರಿಸಿದ್ದರು. ನಗದು ಬಹುಮಾನವನ್ನ ನಂತರ ನೀಡುವುದಾಗಿ ಅಧಿಕಾರಿಗಳು, ಸಂಘಟಕರು ಹೇಳಿದ್ದರಿಂದ ಶ್ವಾನದ ಮಾಲೀಕರು ಒಲ್ಲದ ಮನಸ್ಸಿನಿಂದಲೇ ಬರೀ ಪ್ರಮಾಣ ಪತ್ರ ಪಡೆದಿದ್ದರು. ಘೋಷಣೆ ಮಾಡಿರುವಂತೆ ಅಧಿಕಾರಿಗಳು ಹಾಗೂ ಸಂಘಟಕರನ್ನು ನಗದು ಬಹುಮಾನ ಬಗ್ಗೆ ಕೇಳಿದರೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಂದ ಅನುಮತಿ ದೊರೆತಿಲ್ಲ. ಬೇಕಾದರೆ 1 ಸಾವಿರ ರೂ. ಕೊಡುತ್ತೇವೆ ಎಂಬುದಾಗಿ ಚೌಕಾಸಿಗೆ ಇಳಿದಿದ್ದಾರೆ!.

ಪ್ರತಿ ತಳಿವಾರು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದ ಶ್ವಾನಕ್ಕೆ 5 ಸಾವಿರ ನಗದು ಘೋಷಿಸಲಾಗಿತ್ತು. ಫೋನ್‌ ಮಾಡಿ ಸ್ಪರ್ಧೆಯಲ್ಲಿ ಭಾಗವಹಿಸಲು ಕೋರಲಾಗಿತ್ತು. ಮೊಬೈಲ್‌ನಲ್ಲೂ ಶ್ವಾನಗಳ ಮಾಲೀಕರೊಂದಿಗೆ ನಗದು ಬಹುಮಾನ ಇತ್ಯಾದಿ ವಿಚಾರಗಳ ಚಾಟ್ ಮಾಡಲಾಗಿತ್ತು. ಈಗ ಅದೇ ಅಧಿಕಾರಿಗಳು, ಸಂಘಟಕರು ತಮಗೂ ಹಾಗೂ ನಗದು ಬಹುಮಾನಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಮಾತನಾಡುತ್ತಿದ್ದಾರೆ. ಏನೋ ಒಂದು ಸಾವಿರ ಕೊಡುತ್ತೇವೆ ಎಂಬುದಾಗಿ ಹೇಳುತ್ತಿದ್ದಾರೆ ಎಂದು ಎಂದು ದಾವಣಗೆರೆ ಪೆಟ್ ಲವರ್ಸ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಸಚಿನ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯ ಮಟ್ಟದ ಪಶು ಮೇಳದಲ್ಲಿನ ಶ್ವಾನ ಪ್ರದರ್ಶನಕ್ಕಾಗಿಯೇ 12 ಲಕ್ಷ ಮೀಸಲಿಡಲಾಗಿದೆ. ಪ್ರದರ್ಶನದಲ್ಲಿ ಗೆದ್ದ ಮೇಲೆ ಅಧಿಕಾರಿಗಳಿಗೆ ನಗದು ಬಹುಮಾನ ಕೇಳಿದರೆ ಇಲ್ಲದ್ದನ್ನೆಲ್ಲಾ ಹೇಳುತ್ತಾರೆ. ಬೇಕಾದರೆ 1 ಸಾವಿರ ರೂ. ಕೊಡುತ್ತೇವೆ. ಕೆಲವಕ್ಕೆ ಬಹುಮಾನ ಘೋಷಿಸಿಯೇ ಇರಲಿಲ್ಲ ಎನ್ನುತ್ತಾರೆ ಎಂದು ತಿಳಿಸಿದರು.

ಮನುಷ್ಯರಿಗೆ ಮೋಸ ಮಾಡುತ್ತಿದ್ದ, ಸುಳ್ಳು ಹೇಳುತ್ತಿದ್ದ ಘಟನೆಗಳೀಗ ಮೂಕ ಪ್ರಾಣಿಗಳ ವಿಚಾರದಲ್ಲೂ ನಡೆಯುತ್ತಿದೆ. ಕ್ಯಾಷ್‌ ನಾಳೆ ಕೊಡುತ್ತೇವೆ ಎಂದಾಗಲೇ ಅನುಮಾನ ಇತ್ತು. ಸರ್ಕಾರವೇ ಶ್ವಾನ ಪ್ರದರ್ಶನ ಆಯೋಜಿಸಿರುವಾಗ ಮೋಸ ಆಗುವುದಿಲ್ಲ. ಹೇಳಿದಂತೆ ಅಧಿಕಾರಿಗಳು ಹಣ ಕೊಡುತ್ತಾರೆ ಅಂದುಕೊಂಡಿದ್ದೆವು. ಈಗ ಹಣ ಕೇಳಿದರೆ ಏನೇನೋ ಹೇಳುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಚಿನ್‌ ಅವರ ಫ್ರೆಂಚ್ ಬುಲ್‌ ಡಾಗ್‌, ಆನೆ ಸಿದ್ದು ಅವರ ಡಾಬರ್‌ಮನ್‌ ಎರಡೂ ಶ್ವಾನ ಪ್ರಥಮ ಸ್ಥಾನ ಪಡೆದಿವೆ. ಇನ್ನು ಚಾಂಪಿಯನ್‌ ಲೈನ್‌ ಆಫ್‌ನಲ್ಲಿ ಆನೆ ಸಿದ್ದು ಅವರ ಶ್ವಾನ 5 ಸಾವಿರ ರೂಪಾಯಿ ಗೆದ್ದಿದೆ. ಆದರೆ, ಕೈಗೆ ಒಂದು ಪೈಸೆಯೂ ಬಂದಿಲ್ಲ. ಹಣ ಕೊಡುವುದಕ್ಕಿಂತಲೂ ಮೂಕ ಪ್ರಾಣಿಗಳ ವಿಚಾರದಲ್ಲಿ ಸುಳ್ಳು ಹೇಳುವ ಅಧಿಕಾರಿಗಳು ಮತ್ತು ಸಂಘಟಕರ ಬಗ್ಗೆ ಜಿಲ್ಲಾಡಳಿತದ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಟಾಪ್ ನ್ಯೂಸ್

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

Channagiri; ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣ; ಚನ್ನಗಿರಿಯಲ್ಲಿ ಬಿಗಿ ಬಂದೋಬಸ್ತ್

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

ಈ ಬಾರಿಯೂ ಶಾಲಾ ಶಿಕ್ಷಣ ಇಲಾಖೆಗೆ ಅತಿಥಿ ಶಿಕ್ಷಕರೇ ಗತಿ!

1-eewqewqeqwe

Davanagere; ಪೊಲೀಸ್ ಕಸ್ಟಡಿಯಲ್ಲಿದ್ದ ಅರೋಪಿ ಸಾವು: ಭಾರೀ ಹಿಂಸಾಚಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.