ಬಾಲ್ಯ ವಿವಾಹ ತಡೆಗೆ ಅಧಿಕಾರಿಗಳ ಸಹಕಾರ ಅಗತ್ಯ: ಕಟ್ಟೋಳಿ


Team Udayavani, Jan 11, 2019, 10:19 AM IST

ray-4.jpg

ದೇವದುರ್ಗ: ಬಾಲ್ಯವಿವಾಹವು ನಾಗರಿಕ ಸಮಾಜಕ್ಕಂಟಿದ ಪಿಡುಗು. ಇದರ ತಡೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್‌ ಶಿವಶರಣಪ್ಪ ಕಟ್ಟೋಳಿ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್‌, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಡಾನ್‌ ಬೋಸ್ಕೋ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ದೇವದುರ್ಗ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಬಾಲ್ಯವಿವಾಹ ತಡೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರತಿಯೊಬ್ಬ ಮಗುವಿಗೂ ಹಕ್ಕುಗಳಿವೆ. ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಎಲ್ಲ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಬಸನಗೌಡ ದೇಸಾಯಿ ಮಾತನಾಡಿ, ಬಾಲವಿವಾಹ ತಡೆಗೆ ಸಮಾಜದಲ್ಲಿ ಜಾಗೃತಿ ಜೊತೆಗೆ ಕಾನೂನಿನ ಚೌಕಟ್ಟುಗಳು ಕೂಡ ಕಠಿಣವಾಗಬೇಕು. ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವು ಮೂಡಿಸುವ ಮೂಲಕ ಬಾಲ್ಯವಿವಾಹವನ್ನು ಸುಲಭವಾಗಿ ತಡೆಗಟ್ಟಬಹುದು ಎಂದರು.

ಪಿಎಸ್‌ಐ ಎಲ್‌.ಬಿ.ಅಗ್ನಿ ಮಾತನಾಡಿ, ಕಾನೂನು ಪರಿಪಾಲಕರಾದ ನಾವು ನಮ್ಮ ಮನೆಯಿಂದಲೇ ಬಾಲ್ಯವಿವಾಹ ಪಿಡುಗು ಹೋಗಲಾಡಿಸಲು ಮುಂದಾಗಬೇಕು. ಇಂತಹ ವಿಚಾರದಲ್ಲಿ ಅಧಿಕಾರಿಗಳು ಮೀನ-ಮೇಷ ಎಣಿಸದೆ, ಮಕ್ಕಳ ಭವಿಷ್ಯತ್ತಿಗೆ ಮುಳ್ಳಾಗುವ ಇಂತಹ ಸಮಾಜ ಕಂಟಕವಾದ ಬಾಲ್ಯವಿವಾಹವನ್ನು ಬೇರು ಸಹಿತ ಕೀಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸವರಾಜ ಬ್ಯಾಗವಾಟ ಮಾತನಾಡಿ, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ, ವೈದ್ಯಕೀಯ ಉದಾಹರಣೆಗಳ ಸಮೇತ ವಿವರಿಸಿದರು. ಮಕ್ಕಳ ಹಕ್ಕು ರಕ್ಷಣೆ ನಮ್ಮೆಲ್ಲರ ಹೊಣೆ. ಆದ್ದರಿಂದ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಹಾಗೂ ಕಾನೂನು ಪರಿವೀಕ್ಷಣಾಧಿಕಾರಿ ಜಿ.ವೀರಭದ್ರಪ್ಪ ಮಾತನಾಡಿ, ಬಾಲ್ಯವಿವಾಹವು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿ ಎಳೆ ತಾಯಂದಿರ ಮರಣ, ಶಿಶು ಮರಣ, ಅಪೌಷ್ಟಿಕತೆಯನ್ನು ಉಂಟು ಮಾಡುತ್ತದೆ. ಬಾಲ್ಯದಲ್ಲೇ ಮದುವೆ ಮಾಡುವುದರಿಂದ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಜವಾಬ್ದಾರಿ ಹೊರುವಂತೆ ಮಾಡುತ್ತದೆ ಎಂದರು. ಡಾನ್‌ ಬೋಸ್ಕೋ ಸಂಸ್ಥೆಯ ಸಿದ್ಧಲಿಂಗಪ್ಪ ಕಾಕರಗಲ್‌, ಡಾನ್‌ ಬೋಸ್ಕೋ ಸೇವಾ ಸಂಸ್ಥೆಯ ಫಾ| ಕುರಿಯಾಕೋಸ್‌, ಸಾಂಸ್ಥಿಕ ರಕ್ಷಣಾ ಅಧಿಕಾರಿ ಹನುಮೇಶ ಜಗ್ಲಿ, ಅಸಾಂಸ್ಥಿಕ ರಕ್ಷಣಾಧಿಕಾರಿ ಕಿರಲಿಂಗಪ್ಪ, ಸಮಾಜ ಕಲ್ಯಾಣಾಧಿಕಾರಿ ಫಕ್ಕೀರಪ್ಪ, ಅಕ್ಷರ ದಾಸೋಹ ಅಧಿಕಾರಿ ಬಂದೋಲಿ ಸಾಬ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಲತಾ, ಲಕ್ಷ್ಮೀ ರಾಠೊಡ, ನಿರ್ಮಲಾ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.