ಮಂಗನ ಕಾಯಿಲೆ ಭೀತಿಗೆ ಮನೆ ಖಾಲಿ,ಖಾಲಿ;ಕಂಡ್ಲೂರಿನಲ್ಲಿ ಮಂಗನ ಶವ ಪತ್ತೆ
Team Udayavani, Jan 11, 2019, 12:46 PM IST
ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಂಡು ಬಂದಿದ್ದ ಮಂಗನ ಕಾಯಿಲೆ ಇದೀಗ ಉಡುಪಿ ಜಿಲ್ಲೆಗೂ ಹಬ್ಬತೊಡಗಿದೆ. ಹೊಸಂಗಡಿ, ಕಂಡ್ಲೂರಿನಲ್ಲಿ ಮಂಗನ ಶವ ಪತ್ತೆಯಾಗಿದ್ದು, ಮತ್ತೊಂದೆಡೆ ಉಜಿರೆಯಲ್ಲೂ ಮಂಗನ ಶವ ಪತ್ತೆಯಾಗಿದ್ದು, ಇದು ಕಾಳಗದಿಂದ ಸತ್ತಿರಬಹುದೆಂದು ವೈದ್ಯರು ತಿಳಿಸಿದ್ದಾರೆ.
ಮಂಗನ ಕಾಯಿಲೆ ಭೀತಿಗೆ ಮನೆ ಬಿಟ್ಟ ಗ್ರಾಮಸ್ಥರು:
ಸಾಗರದ ಅರಳಗೋಡು ಗ್ರಾಮದಲ್ಲಿ ಮಂಗನ ಕಾಯಿಲೆ ಭೀತಿಯಿಂದಾಗಿ ಗ್ರಾಮಸ್ಥರು ಮನೆ ಖಾಲಿ ಮಾಡಿ ಬೇರೆಡೆಗೆ ತೆರಳಿದ್ದಾರೆ. ಅಷ್ಟೇ ಅಲ್ಲ ಕಳೆದ ಒಂದು ವಾರದಿಂದ ಶಾಲೆಗೂ ವಿದ್ಯಾರ್ಥಿಗಳು ತೆರಳಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.
ಮಂಗನ ಕಾಯಿಲೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಭೀತಿಯಿಂದಾಗಿ ಪೋಷಕರು ಮಕ್ಕಳನ್ನು ಬೇರೆ ಊರಿಗೆ ಕಳುಹಿಸಿಕೊಟ್ಟಿರುವುದಾಗಿ ವರದಿ ವಿವರಿಸಿದೆ. ಮಂಗನ ಕಾಯಿಲೆ ಭೀತಿಯಿಂದಾಗಿ ಗ್ರಾಮಸ್ಥರು ಕೂಲಿ ಕೆಲಸಕ್ಕೂ ಹೋಗುತ್ತಿಲ್ಲ ಎಂದು ವರದಿ ಹೇಳಿದೆ.
ಈಗಾಗಲೇ ಮಂಗನ ಕಾಯಿಲೆಗೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮಂಗನ ಕಾಯಿಲೆಗೆ ತುತ್ತಾದ 35 ಮಂದಿ ಶಿವಮೊಗ್ಗ ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!