ಕುಸಿಯುವ ಭೀತಿಯಲ್ಲಿ ಶಿಥಿಲಗೊಂಡ ನೀರಿನ ಟ್ಯಾಂಕ್
Team Udayavani, Jan 11, 2019, 8:10 PM IST
ಕೋಟೇಶ್ವರ: ರಾ.ಹೆದ್ದಾರಿ 66 ರಿಂದ ಕವಲೊಡೆದು ಸಾಗುವ ಬೀಜಾಡಿ ವೈ ಜಂಕ್ಷನ್ನಲ್ಲಿ ಹೆದ್ದಾರಿಗೆ ತಾಗಿಕೊಂಡಂತೆ 33 ವರ್ಷ ಹಳೆಯ ಶಿಥಿಲಗೊಂಡ ನೀರಿನ ಟ್ಯಾಂಕ್ ಇದ್ದು ಕುಸಿಯುವ ಭೀತಿ ಎದುರಿಸುತ್ತಿದೆ. ಪಕ್ಕದಲ್ಲಿಯೇ ಅನೇಕ ಕುಟುಂಬಗಳು ವಾಸವಾಗಿದ್ದು ಬಿರುಕು ಬಿಟ್ಟಿರುವ ಟ್ಯಾಂಕ್ ಕುಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಇಂತಹ ಸಮಸ್ಯೆಯಿದ್ದರೂ, ಇದನ್ನು ನೆಲಸಮಗೊಳಿಸಲು ಮಾತ್ರ ಇಲಾಖೆ ಮೀನಮೇಷ ಎಣಿಸುತ್ತಿರುವುದು ಇಲ್ಲಿನ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
ತೆರವಿಗೆ ರೂ.2.50 ಲಕ್ಷ ವೆಚ್ಚ :
ತೆರವಿನ ಕಾರ್ಯಕ್ಕೆ ಕನಿಷ್ಟ 2.50 ಲಕ್ಷ ವೆಚ್ಚವಾಗಲಿದೆ. ಗೋಪಾಡಿ ಗ್ರಾ.ಪಂ.ನಲ್ಲಿ ಆರ್ಥಿಕ ಸಮಸ್ಯೆ ಇರುವುದರಿಂದ ಅಷ್ಟೊಂದು ಹಣ ಹೊಂದಾಣಿಕೆ ಮಾಡಲುಅಸಾಧ್ಯವಾಗಿದೆ. ಆದ್ದರಿಂದ ಸ್ಥಳೀಯರು ಟ್ಯಾಂಕ್ ತೆರವುಗೊಳಿಸುವಂತೆ ಪಂಚಾಯತ್ರಾಜ್ ಎಂಜಿನಿಯರಿಂಗ್ ಉಪ ವಿಭಾಗ ಬೈಂದೂರು ಸಹಿತ, ಗೋಪಾಡಿ ಗ್ರಾ.ಪಂ., ತಹಶೀಲ್ದಾರರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಆಶ್ವಾಸನೆ ನೀಡಿದ್ದಾರೆ
ಅನುದಾನದ ಕೊರತೆಯಿಂದ ವಾಟರ್ ಟ್ಯಾಂಕ್ ತೆರವು ಕಾರ್ಯಕ್ಕೆ ಹಿಂದೇಟು ಹಾಕಲಾಗಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳು, ಇಲಾಖೆಗಳನ್ನು ಸಂಪರ್ಕಿಸಲಾಗಿದೆ. ಜಿ.ಪಂ. ಸಿ.ಇ.ಒ. ಕ್ರಮ ಕೈಗೊಳ್ಳುವ ಅಶ್ವಾಸನೆ ನೀಡಿದ್ದಾರೆ.
– ಗಣೇಶ ಪಿ., ಪಿ.ಡಿ.ಒ ಗೋಪಾಡಿ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ