ಹೊಸ ಕೈಗಾರಿಕಾ ನೀತಿಯಲ್ಲಿ ಹೈ.ಕಕ್ಕೆ ಆದ್ಯತೆ ನೀಡಲು ಒತ್ತಾಯ


Team Udayavani, Jan 12, 2019, 5:40 AM IST

gul-5.jpg

ಕಲಬುರಗಿ: ಹೈದ್ರಾಬಾದ-ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮ ಮತ್ತು ನಿರುದೋಗ್ಯ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮುಂಬರುವ ಹೊಸ ಕೈಗಾರಿಕಾ ನೀತಿಯಲ್ಲಿ ರಾಜ್ಯ ಸರ್ಕಾರ ಈ ಪ್ರದೇಶಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ, ವಿಶೇಷ ವಾಣಿಜ್ಯ ವಲಯ ಸ್ಥಾಪಿಸಬೇಕೆಂದು ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಅಮರನಾಥ ಸಿ. ಪಾಟೀಲ ಮನವಿ ಮಾಡಿದರು.

ಎಚ್ಕೆಸಿಸಿಐ ಸಭಾಂಗಣದಲ್ಲಿ ಶುಕ್ರವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ, ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕೆ-ಲ್ಯಾಂಪ್‌, ಗುಲಬರ್ಗಾ ದಾಲ್‌ ಮಿಲ್ಲರ್ಸ್‌ ಅಸೋಸಿಯೇಷನ್‌ ಮತ್ತು ಗುಲಬರ್ಗಾ ಕೈಗಾರಿಕಾ ಪ್ರದೇಶ ಉತ್ಪಾದಕರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೈಗಾರಿಕಾ ನೀತಿ 2014-19 ಮತ್ತು ಉದ್ದೇಶಿತ ಹೊಸ ಕೈಗಾರಿಕಾ ನೀತಿ ಹಾಗೂ ಸುಗಮ ವಾಣಿಜ್ಯ ವ್ಯವಹಾರ ನಡೆಸುವಿಕೆಗಾಗಿ ಸಲಹೆಗಳ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನೆರೆಯ ತೆಲಂಗಾಣದಲ್ಲಿ 66ಕ್ಕೂ ಹೆಚ್ಚು ವಿಶೇಷ ವಾಣಿಜ್ಯ ವಲಯಗಳು ಇವೆ. ಆದರೆ, ನಮ್ಮ ರಾಜ್ಯದಲ್ಲಿ ಕೆಲವೇ ಕೆಲವು ವಿಶೇಷ ವಾಣಿಜ್ಯ ವಲಯಗಳು ಇವೆ. ಹೈ.ಕ ಭಾಗಕ್ಕೆ 371ನೇ (ಜೆ) ಕಲಂ ಅಡಿ ವಿಶೇಷ ಸ್ಥಾನಮಾನ ಲಭಿಸಿದ್ದರೂ ಅದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಕ್ಕೆ ಮಾತ್ರ ಸೀಮಿತವಾಗಿದೆ. 371ನೇ (ಜೆ) ಕಲಂನಲ್ಲಿ ಕೈಗಾರಿಕೆಗೆ ಯಾವ ರೀತಿಯ ಪ್ರಾಶಸ್ತ್ಯ ಸಿಗುತ್ತಿದೆ ಎನ್ನುವ ಕುರಿತು ಚರ್ಚೆ ನಡೆಯಬೇಕು. ಜತೆಗೆ ಹೈ.ಕ ಭಾಗದಲ್ಲಿ ಕೇವಲ ಸಿಮೆಂಟ್, ಶಾಖೋತ್ಪನ್ನ ಕೇಂದ್ರಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡದೆ, ಪರಿಸರ ಸ್ನೇಹಿ ಕೈಗಾರಿಕೆಗಳ ಸ್ಥಾಪನೆಗೂ ಸರ್ಕಾರ ಗಮನ ಹರಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಉಪಾಧ್ಯಕ್ಷ ಆರ್‌. ರಾಜು ಮಾತನಾಡಿ, 1983ರಲ್ಲಿ ಕೈಗಾರಿಕಾ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕವಾಗಿದೆ. ಇದರಿಂದ ಕೈಗಾರಿಕೆಯಲ್ಲಿ 77ನೇ ಸ್ಥಾನದಲ್ಲಿದ್ದ ಕರ್ನಾಟಕ 2016ರ ವೇಳೆಗೆ 8ನೇ ಸ್ಥಾನಕ್ಕೆ ಜಿಗಿಯಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಒಂದನೇ ಸ್ಥಾನಕ್ಕೇರುವ ಅವಕಾಶಗಳಿವೆ. ಆದ್ದರಿಂದ ಈಗಿರುವ ಕೈಗಾರಿಕಾ ನೀತಿಯಲ್ಲಿನ ಕೆಲ ನ್ಯೂನತೆ ಸರಿಪಡಿಸಿಕೊಂಡು ಹೊಸ ಕೈಗಾರಿಕಾ ನೀತಿ ಸಿದ್ಧ ಪಡಿಸಬೇಕು ಎಂದರು.

ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗ್ರಾಮದ ಉದ್ದಿಮೆಗಳ (ಎಂಎಸ್‌ಎಂಇ)ಅಪರ ನಿರ್ದೇಶಕ, ಎಂಎಸ್‌ಎಫ್‌ಸಿ ಸದಸ್ಯ ಕಾರ್ಯದರ್ಶಿ ಎಚ್.ಎಂ. ಶ್ರೀನಿವಾಸ, ಕೈಗಾರಿಕಾ ನೀತಿ 2014-19 ಹಾಗೂ ಎಂಎಸ್‌ಎಂಇ ವಿಳಂಬ ಪಾವತಿ ಕಾಯ್ದೆ-2006 ಕಾಯ್ದೆ ಕುರಿತು ಮಾಹಿತಿ ನೀಡಿದರು.

ಹೈ.ಕ ಭಾಗದಲ್ಲಿ ಸಣ್ಣ ಕೈಗಾರಿಕೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರು ಜಿಲ್ಲೆಗಳಲ್ಲಿ 11 ತಾಲೂಕುಗಳನ್ನು ಅತಿ ಹಿಂದುಳಿದ ಹಾಗೂ 20 ತಾಲೂಕುಗಳನ್ನು ಅತ್ಯಂತ ಹಿಂದುಳಿದ ತಾಲೂಕುಗಳೆಂದು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ. ಬಂಡವಾಳ ಹೂಡಿಕೆ ಸಹಾಯಧನ, ಮುದ್ರಾಂಕ ಶುಲ್ಕದಿಂದ ವಿನಾಯಿತಿ, ರಿಯಾಯ್ತಿ ನೋಂದಣಿ ಶುಲ್ಕ, ಭೂಪರಿವರ್ತನಾ ಶುಲ್ಕದ ಮರುಪಾವತಿ, ತ್ಯಾಜ್ಯ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಹಾಯಧನ, ಸೂಕ್ಷ್ಮ ಘಟಕಗಳಿಗೆ ಬಡ್ಡಿ ಸಹಾಯಧನ ಹಾಗೂ ವಿದ್ಯುತ್‌ ದರದ ಮೇಲಿನ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದಲಿಂಗಯ್ಯ ಪೂಜಾರಿ, ಕೆಎಸ್‌ಎಫ್‌ಸಿ ಸಹಾಯಕ ಪ್ರಧಾನ ವ್ಯವಸ್ಥಾಪಕ ಡಾ| ಗಣಪತಿ ರಾಠೊಡ, ಸಿ.ಎನ್‌. ಮಂಜಪ್ಪ, ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕಿ ಸುರೇಖಾ ಮನೋಲಿ, ಗುಲಬರ್ಗಾ ದಾಲ್‌ ಮಿಲ್ಲರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ| ಚಿದಂಬರರಾವ್‌ ಪಾಟೀಲ, ಎಚ್ಕೆಸಿಸಿಐ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ ಮತ್ತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಇದ್ದರು.

ಸಣ್ಣ ಕೈಗಾರಿಕೋದ್ಯಮಗಳ ಉತ್ತೇಜನ ಮತ್ತು ಅಭಿವೃದ್ಧಿಗೆ ಸಕಲ ನೆರವು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಖನೀಜ್‌ ಫಾತೀಮಾ, ಶಾಸಕಿ, ಉತ್ತರ ಕ್ಷೇತ್ರ

ದಾಲ್‌ಮಿಲ್‌ಗ‌ಳ ಪುನಶ್ಚೇತನಕ್ಕೆ ಜಿಲ್ಲಾಡಳಿತ ವರದಿ ಸಲ್ಲಿಸಿ ಒಂದು ವರ್ಷ ಕಳೆಯುತ್ತಿದೆ. ಆದರೆ, ಸರ್ಕಾರದ ನಿರ್ಲಕ್ಷ್ಯದಿಂದ ವರದಿ ಧೂಳು ಹಿಡಿಯುತ್ತಿದೆ.

ಡಾ| ಚಿದಂಬರರಾವ್‌ ಪಾಟೀಲ, ಅಧ್ಯಕ್ಷ, ಗುಲಬರ್ಗಾ ದಾಲ್‌ ಮಿಲ್ಲರ್ಸ್‌ ಅಸೋಸಿಯೇಷನ್‌ 

2019-24ರ ಹೊಸ ಕೈಗಾರಿಕಾ ನೀತಿಯಲ್ಲಿ ಹೈ.ಕ ಭಾಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ಸರ್ಕಾರಕ್ಕೆ ಎಚ್ಕೆಸಿಸಿಐ ಮನವಿ ಮಾಡಿದೆ. ಅದರ ಪ್ರಮುಖಾಂಶಗಳು.

ಹೈ.ಕ ಭಾಗದಲ್ಲಿ ವಿಶೇಷ ವಾಣಿಜ್ಯ ವಲಯ ಸ್ಥಾಪಿಸಬೇಕು.
ಕಲಬುರಗಿಯಲ್ಲಿ ಎರಡು ಸಾವಿರ ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್‌ ಅಭಿವೃದ್ಧಿ ಪಡಿಸಬೇಕು.
2014ರಲ್ಲಿ ಮಂಜೂರಾದ ಕಲಬುರಗಿಯ ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪನ್ನಗಳ ವಲಯ (ನಿಮ್‌್ಜ ) ಸ್ಥಾಪಿಸಬೇಕು.
ದಾಲ್‌ ಮಿಲ್‌ಗ‌ಳನ್ನು ಕೃಷಿ ಆಧಾರಿತ ಕೈಗಾರಿಕೆ ಎಂದು ಸ್ಪಷ್ಟಪಡಿಸಬೇಕು.
ಕಲಬುರಗಿ ಹಾಗೂ ಜೇವರ್ಗಿಯಲ್ಲಿ ಫುಡ್‌ ಪಾರ್ಕ್‌ ತ್ವರಿತವಾಗಿ ಪ್ರಾರಂಭಿಸಬೇಕು.
ಎನ್‌ಪಿಎ ಕೈಗಾರಿಕೆ ಮರು ವ್ಯಾಖ್ಯಾನಿಸಬೇಕು.
ಕೆ-ಲ್ಯಾಂಪ್‌ಗೆ ವಿಶೇಷ ಪ್ರಾತಿನಿಧ್ಯ ನೀಡಬೇಕು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.