ಅಪೂರ್ಣ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ


Team Udayavani, Jan 12, 2019, 9:08 AM IST

bell-3.jpg

ಹೊಸಪೇಟೆ: ಆಮೆಗತಿಯಲ್ಲಿ ಸಾಗಿರುವ ಎಡಿಬಿ ಕಾಮಗಾರಿ ಪೂರ್ಣವಾಗದೇ ನಾಗರಿಕರು ತೀವ್ರ ತೊಂದರೆಗೀಡಾಗಿದ್ದು, ಶೀಘ್ರವೇ ವಿವಿಧ ಕಡೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಅಧ್ಯಕ್ಷ ಗುಜ್ಜಲ ನಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಎಡಿಬಿ ಕಾಮಗಾರಿ ವಿಳಂಬವಾದ ಬಗ್ಗೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದು ಕೊಂಡರು. ಸದ್ಯದಲ್ಲಿ ಸದಸ್ಯರ ಅವಧಿ ಪೂರ್ಣಗೊಳ್ಳುತ್ತಾ ಬಂದರೂ ಎಡಿಬಿ ಯೋಜನೆಯ ಕಾಮಗಾರಿಗಳು ಪೂರ್ಣಗೊಳ್ಳುತ್ತಿಲ್ಲ.

ನಗರದ ಎಲ್ಲೆಡೆ ಕಡೆ ಏಕಕಾಲದಲ್ಲಿ ಕಾಮಗಾರಿಗಳನ್ನು ಆರಂಭಿಸಿ, ನಾಗರಿಕರು ರಸ್ತೆಯಲ್ಲಿ ಸಂಚಾರ ಮಾಡದ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ. ಜನರು ಸದಸ್ಯರನ್ನು ಛೀಮಾರಿ ಹಾಕುತ್ತಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳ್ಳಿಸಲಬೇಕು ಎಂದು ಆಗ್ರಹಿಸಿದರು.

ಫಾರಂ ನಂಬರ್‌-3 ದೊರೆಯದೇ ಬಡವರು ಸರಕಾರದ‌ ಯೋಜನಗಳನ್ನು ಪಡೆಯಲು ಪರದಾಟುವಂತಾಗಿದೆ. ಎಂ.ಆರ್‌.90 ಇಲ್ಲದವರಿಗೆ ಫಾರಂ-3 ನೀಡುತ್ತಿಲ್ಲ. ನಗರದಲ್ಲಿ ಬಹುತೇಕ ಬಡವರಿಗೆ ನಗರಸಭೆಯು 1991ರಲ್ಲಿ ನೀಡಿರುವ , ಎಂ.ಆರ್‌.90 ದಾಖಲೆಯ ಸಂಖ್ಯೆ ಇರುವುದಿಲ್ಲ. ಕಾರಣ ಕೊಪ್ಪಳ ನಗರಸಭೆಯಲ್ಲಿ ಹಳೇ ದಾಖಲಾಯಿತಿಯನ್ನು ಆಧ‌ರಿಸಿ ಫಾರಂ-3ಯನ್ನು ನೀಡಲಾಗುತ್ತದೆ. ಅದರಂತೆ ಇಲ್ಲಿಯೂ ಪಾರಂ-3 ನೀಡಲು ಕ್ರಮ ವಹಿಸಬೇಕು ಎಂದು ನಗರಸಭೆಯ ಸದಸ್ಯ ಡಿ.ವೇಣುಗೋಪಾಲ ಒತ್ತಾಯಿಸಿದರು. ಬಡವ‌ರಿಗೆ ಆಶ್ರಯ ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಅವಕಾಶ ಇದ್ದರೂ ಫಾರಂ-3 ದೊರೆಯದೆ ಫ‌ಲಾನುಭವಿಗಳ ವಂಚಿತರಾಗುತ್ತಿದ್ದರೆ, ಹಳೆ ದಾಖಲಾಯಿತಿ ಆಧಾರಸಿ ಸಾರ್ವಜನಿಕರಿಗೆ ಫಾರಂ-3 ನೀಡಬೇಕು ಎಂದು ಒತ್ತಾಯಿಸಿದರು.

ಉಪಾಧ್ಯಕ್ಷೆ ಸುಮಂಗಳಮ್ಮ, ಲೆಕ್ಕಾಧಿಕಾರಿ ಶಂಭುಲಿಂಗ, ವ್ಯವಸ್ಥಾಪಕ ಮಂಜುನಾಥ್‌, ಸದಸ್ಯರಾದ ಟಿ.ಚಿದಾನಂದ, ಕೆ.ಮಲ್ಲಪ್ಪ, ಚಂದ್ರಕಾಂತ ಕಾಮತ್‌, ರೂಪೇಶ್‌ಕುಮಾರ್‌, ಮಲ್ಲಪ್ಪ, ಚಂದ್ರಕಾಂತ್‌ ಕಾಮತ್‌ ಬಸವರಾಜ, ಮಲ್ಲಿಕಾರ್ಜನ, ಕೆ.ಗೌಸ್‌, ಬಡೆವಲಿ, ರಾಮಚಂದ್ರ ಗೌಡ್‌, ರಾಮಾಂಜಿನಿ, ಕಣ್ಣಿ ಉಮಾದೇವಿ, ನಾಗಲಕ್ಷ್ಮೀ, ಬಸವರಾಜ, ನೂರ್‌ಜಾನ್‌, ರಾಮಕೃಷ್ಣ, ಇಡ್ಲಿ ಚನ್ನಮ್ಮ, ಧನುಲಕ್ಷ್ಮಿ, ಎಸ್‌.ಬಸವರಾಜ, ಬೆಲ್ಲದ್‌ ರೋಫ್ ಸೇರಿದಂತೆ ಇನ್ನಿತರೆ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.