ಜಾನುವಾರು ಬೇನೆಗೆ ರೈತ ತತ್ತರ


Team Udayavani, Jan 12, 2019, 11:31 AM IST

12-january-22.jpg

ಚಿಕ್ಕೋಡಿ: ಜಾನುವಾರುಗಳಿಗೆ ವ್ಯಾಪಕವಾಗಿ ಹರಡಿರುವ ಕಾಲು-ಬಾಯಿ ಬೇನೆ ಮಹಾಮಾರಿ ರೋಗಕ್ಕೆ ತಾಲೂಕಿನ ಮುಗಳಿ ಗ್ರಾಮದ ರೈತರು ತತ್ತರಿಸಿ ಹೋಗಿದ್ದು, ಗ್ರಾಮದ ಹತ್ತಾರು ಕುಟುಂಬಗಳ ನೂರಕ್ಕೂ ಹೆಚ್ಚಿನ ರಾಸುಗಳು ರೋಗಕ್ಕೆ ಬಲಿಯಾಗಿವೆ.

ಕಳೆದ ಒಂದು ತಿಂಗಳಿಂದ ರೋಗ ಗಡಿ ಜಿಲ್ಲೆಗೆ ಹರಡಿದ್ದು, ಮುಗಳಿ ಗ್ರಾಮವೊಂದರಲ್ಲಿಯೇ ನೂರಕ್ಕೂ ಹೆಚ್ಚಿನ ಜಾನುವಾರಗಳು ರೋಗಕ್ಕೆ ತುತ್ತಾಗಿದ್ದು, ಸರ್ಕಾರವೇ ದನಕರುಗಳ ಸಾವಿಗೆ ಕಾರಣವಾಗಿದೆಂದು ಗ್ರಾಮಸ್ಥರು ಪಶು ಸಂಗೋಪನಾ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಪಶು ಆಸ್ಪತ್ರೆ ಇಲ್ಲದೇ ಇರುವುದಕ್ಕೆ ಇಷ್ಟೊಂದು ಜಾನುವಾರಗಳು ಸಾವಿನ ಕದ ತಟ್ಟಿದ್ದು, ಇನ್ನೂ ಹಲವು ದನಕರುಗಳು ಸೂಕ್ತ ಚಿಕಿತ್ಸೆ ಇಲ್ಲದೇ ಒದ್ದಾಡುತ್ತಿವೆ ಎಂದು ಗ್ರಾಮದ ರೈತರು ದೂರಿದರು.

ತೀವ್ರ ಬರಗಾಲ ಪೀಡಿತ ಪ್ರದೇಶವಾಗಿರುವ ಗ್ರಾಮದಲ್ಲಿ ಕಳೆದ ಐದಾರು ವರ್ಷಗಳಿಂದ ಸಮರ್ಪಕ ಮಳೆ ಆಗಿಲ್ಲ, ಇದರಿಂದ ಬರಗಾಲಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಹಾಮಾರಿ ಕಾಲು-ಬಾಯಿ ಬೇನೆ ವಕ್ಕರಿಸಿ ರೈತರ ಹೊಟ್ಟೆಗೆ ಬರೆ ಎಳೆದಂತಾಗಿದೆ. ಚಿಕ್ಕೋಡಿ ತಾಲೂಕಿನಲ್ಲಿಯೇ ಅತಿ ಹೆಚ್ಚಾಗಿ ಹೈನುಗಾರಿಕೆ ಹೊಂದಿರುವ ಮುಗಳಿ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕಿಂತ ಅಧಿಕ ಜಾನುವಾರುಗಳು ಇದ್ದು, ಇಲ್ಲಿ ಪಶು ಆಸ್ಪತ್ರೆ ಇದ್ದರೆ ರೋಗ ಗುಣಪಡಿಸಬಹುದಾಗಿತ್ತು. ಆದರೆ ಸರ್ಕಾರ ಮಾತ್ರ ಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಮೀನಮೇಷ ಮಾಡುತ್ತಿದೆ ಎಂದು ರೈತ ರಾಜು ಹರಗನ್ನವರ ಆರೋಪಿಸಿದರು.

ರೋಗದ ಲಕ್ಷಣ ಕಂಡ ತಕ್ಷಣಾ ರೋಗಗ್ರಸ್ತ ಪ್ರಾಣಿಯನ್ನು ಇತರ ಜಾನುವಾರುಗಳಿಂದ ಬೇರ್ಪಡಿಸಬೇಕು. ಅಲ್ಲದೇ ನಿತ್ಯ ಕೊಟ್ಟಿಗೆಯನ್ನು ಶುಚಿಗೊಳಿಸಿ ಕಟ್ಟುವುದರಿಂದ ಇತರ ಪ್ರಾಣಿಗಳಿಗೆ ಕಾಯಿಲೆ ಹರಡದಂತೆ ತಡೆಯಬಹುದಾಗಿದೆ. ರೋಗಗ್ರಸ್ತ ಪ್ರಾಣಿಯಿಂದ ಈ ಅಂಟು ರೋಗವು ಬೇಗನೆ ಇತರೆಡೆಗೆ ವ್ಯಾಪಿಸುವುದರಿಂದ ಈ ರಾಸುಗಳನ್ನು ಮಾರಾಟ ಮಾಡಬಾರದು. ಕಾಯಿಲೆಗೆ ತುತ್ತಾದ ಜಾನುವಾರಿನ ಕಾಲು ಬಾಯಿ ಹುಣ್ಣನ್ನು ಸ್ವಲ್ಪ ಅಡುಗೆ ಸೋಡ ದ್ರಾವಣದಿಂದ ಶುಚಿಗೊಳಿಸುವುದು. ಮೃದು ಆಹಾರ ನೀಡುವುದು. ವಿಟಮಿನ್‌ ಲಸಿಕೆ ಕೊಡಿಸುವ ಮೂಲಕ ಆರೈಕೆ ಮಾಡಬೇಕು ಎನ್ನುತ್ತಾರೆ ಪಶು ವೈದ್ಯರು.

ರೋಗದ ಲಕ್ಷಣ
ಕಾಲು ಮತ್ತು ಬಾಯಿ ಜ್ವರಕ್ಕೆ ತುತ್ತಾದ ಜಾನುವಾರಗಳಲ್ಲಿ ಅತಿಯಾದ ಜ್ವರ, ಬಾಯಿಯಲ್ಲಿ ನೀರ್ಗುಳ್ಳೆ, ಜೊಲ್ಲು ಸುರಿಸುವುದು. ಕಾಲು ಕುಂಟುವುದು ಹಾಗೂ ಕೆಚ್ಚಲಿನ ಮೇಲೆ ಗುಳ್ಳೆಗಳು ಮೂಡುವುದು ಸೇರಿದಂತೆ ಹಲವು ಲಕ್ಷಣಗಳು ಕಂಡು ಬರುತ್ತವೆ.

ಪ್ರತಿ ವರ್ಷ ಜಾನುವಾರುಗಳಿಗೆ ಈ ರೋಗ ಕಾಣಿಸಿಕೊಳ್ಳುತ್ತದೆ. ರೋಗ ಬರದಂತೆ ಪಶುಸಂಗೋಪನಾ ಇಲಾಖೆ ಪ್ರತಿ ಗ್ರಾಮದಲ್ಲಿ ಜಾಗೃತಿ ಮೂಡಿಸಿ ಲಸಿಕೆ ಕೊಡಿಸಿದೆ. ರೋಗಕ್ಕೆ ತುತ್ತಾಗಿರುವ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಚಳಿ ಹೆಚ್ಚಾಗಿ ಇರುವುದರಿಂದ ಶೇ 30ರಷ್ಟು ಕರುಗಳ ಸಾವಿನ ಪ್ರಮಾಣ ಹೆಚ್ಚಿತ್ತದೆ. ಮುಗಳಿ ಗ್ರಾಮದಲ್ಲಿ ಪಶು ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
•ಡಾ. ಸದಾಶಿವ ಉಪ್ಪಾರ,
ತಾಲೂಕು ಆರೋಗ್ಯಾಧಿಕಾರಿ,
ಪಶು ಸಂಗೋಪನಾ ಇಲಾಖೆ ಚಿಕ್ಕೋಡಿ

ಜಾನುವಾರುಗಳನ್ನೇ ನಂಬಿಕೊಂಡಿರುವ ನಮ್ಮ ಬದುಕು ಮೂರಾಬಟ್ಟೆಯಾಗಿದೆ. ಕಾಲುಬಾಯಿ ಬೇನೆ ರೋಗಕ್ಕೆ ನಮ್ಮ ಜಾನುವಾರುಗಳು ಮೃತಪಟ್ಟಿವೆ. ಸರ್ಕಾರ ಗ್ರಾಮದಲ್ಲಿ ಪಶು ಆಸ್ಪತ್ರೆ ಆರಂಭಿಸಿ ವೈದ್ಯರ ನೇಮಕ ಮಾಡಬೇಕು.
•ಗಣಪತಿ ಬಡಿಗೇರ,
ಮುಗಳಿ ಗ್ರಾಮದ ರೈತ.
ಮಹಾದೇವ ಪೂಜೇರಿ

ಟಾಪ್ ನ್ಯೂಸ್

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.