ಹಿಂದುಳಿದ‌ ವರ್ಗಕ್ಕೆ ಮೀಸಲು-ಬಿಜೆಪಿ ಸಂಭ್ರಮಾಚರಣೆ


Team Udayavani, Jan 12, 2019, 11:38 AM IST

bid-4.jpg

ವಿಜಯಪುರ: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದೇಶ್ವರ ದೇವಸ್ಥಾನದ ಎದುರು ಸಿಹಿ ಹಂಚಿ ಸಂಭ್ರಮ ಅಚರಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ದೇಶದಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಇಚ್ಛಾಶಕ್ತಿ ಕೊರತೆ ಪರಿಣಾಮ ಹಲವು ವರ್ಷಗಳಿಂದ ದೇಶದ ಅರ್ಥಿಕ ಹಿಂದುಳಿದ ವರ್ಗಗಳ ಬಡ ಯುವಕರು ಮೀಸಲಾತಿ ಸೌಲಭ್ಯ ಇಲ್ಲದೇ ಆವಕಾಶ ವಂಚಿತರಾಗುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಹಿಂದುಳಿದ ವರ್ಗಗಳ ಜನರ ಸಂಕಷ್ಟ ಅರಿತು ಪ್ರಸಕ್ತ ಸಂಸತ್‌ ಅಧಿವೇಶನದಲ್ಲೇ ಹಿಂದುಳಿದ ವರ್ಗಗಳಿಗೆ ಶೇ. 10 ಮೀಸಲಾತಿ ಮಸೂದೆ ಮಂಡಿಸಿ ಆನುಮೋದನೆ ಪಡೆಯುವ ಮೂಲಕ ಐತಿಹಾಸಿಕ ಹೆಜ್ಜೆ ಇರಿಸಿದ್ದಾರೆ. ಅ ಮೂಲಕ ಪ್ರಧಾನಿ ಮೋದಿ ಅವರು ದೇಶದ ಜನರ ಆಭಿನಂದನೆಗೆ ಪಾತ್ರರಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ವಾಲಿ ಮಾತನಾಡಿ, 1947ರ ನಂತರ ದೇಶದಲ್ಲಿ ಬಹುಪಾಲು ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸಿದ್ದರೂ ಸ್ವಾತಂತ್ರ್ಯ ನಂತರದ 72 ವರ್ಷಗಳಾದರು ಅರ್ಥಿಕ ಹಿಂದುಳಿದ ವರ್ಗಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ. ತಮ್ಮ ಓಟ್ ಬ್ಯಾಂಕ್‌ ರಾಜಕಾರಣಕ್ಕಾಗಿ ಕೆಲವು ಜಾತಿಗಳಿಗೆ ಮಾತ್ರ ಮೀಸಲಾತಿ ನೀಡಿ ತುಷ್ಟೀಕರಣ ರಾಜಕಾರಣ ಮಾಡುತ್ತಿತ್ತು. ಅ ಮೂಲಕ ಕಾಂಗ್ರೆಸ್‌ ಪಕ್ಷ ದೇಶದಲ್ಲಿ ಸಮಾಜ, ಜಾತಿಗಳನ್ನು ಒಡೆದಾಳುವ ನೀತಿ ಅನುಸರಿಸುತ್ತಿತ್ತು.

ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಈಗ ಇರುವ ಮೀಸಲಾತಿ ಪದ್ಧತಿ ಮತ್ತು ಜಾತಿ ಸಮೀಕರಣ ಬದಲಿಸದೆ, ಈಗಿರುವ ಯಾವ ಮೀಸಲು ಸಮುದಾಯಕ್ಕೂ ಆನ್ಯಾಯವಾಗದಂತೆ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿ ಇತಿಹಾಸ ಬರೆದಿದ್ದಾರೆ ಎಂದು ಬಣ್ಣಿಸಿದರು.

ಯಾವ ಜಾತಿ ಹಾಗೂ ರಾಜಕೀಯ ಪಕ್ಷಗಳು ವಿರೋಧ ಮಾಡದ ಮೀಸಲಾತಿ ಪದ್ಧತಿ ಇದಾಗಿದ್ದು, ಲೋಕಸಭೆ, ರಾಜ್ಯಸಭೆ ಎರಡರಲ್ಲೂ ಅಂಗೀಕಾರ ಪಡೆದಿದೆ. ಇದರಿಂದ ದೇಶದ ಬಹುಪಾಲು ಜನರಿಗೆ ಸಂತಸವಾಗಿದ್ದು, ಸಾಮಾನ್ಯ ವರ್ಗದಲ್ಲಿ ಬರುವ ಅರ್ಥಿಕ ಹಿಂದುಳಿದ ಜಾತಿಗಳಿಗೆ ಯುವ ಸಮೂಹಕ್ಕೆ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ಪಡೆಯುವಲ್ಲಿ ಅನುಕೂಲವಾಗಲಿದೆ. ಐತಿಹಾಸಿಕವಾದ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ದೇಶದ ಜನರ ಹಲವು ದಶಕಗಳ ಕನಸು ನನಸಾಗಿದ್ದಾರೆ ಎಂದು ಶ್ಲಾ ಸಿದರು.

ಯುವ ಮೋರ್ಚಾ ಪದಾಧಿಕಾರಿಗಳಾದ ಕಾಂತು ಶಿಂಧೆ, ಮಹೇಳ ಒಡೆಯರ್‌, ರಾಜು ಹುನ್ನೂರ, ಸಚೀನ ಪಾಟೀಲ, ಪ್ರಶಾಂತ ಅಗಸರ, ಅನೀಲ ಉಪ್ಪಾರ, ಬಸಯ್ನಾ ಗೊಳಸಂಗಿಮಠ, ಕೃಷ್ಣಾ ಗುನ್ನಾಳಕರ, ಗುರುರಾಜ ರಾವ್‌, ಸತೀಶ ಪೀರನಾಯಕ್‌, ವಿನಾಯಕ ದಹಿಂದೆ, ಶಿವಾಜಿ ಪಾಟೀಲ, ಸನ್ನಿ ಗವಿಮಠ, ಶರಣು ಲಾಳಸಂಗಿ, ಶರತಸಿಂಗ್‌ ರಜಪೂತ, ವಿಜಯ ಹಿರೇಮಠ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.