ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಸಹಕಾರ ಅಗತ್ಯ: ಕಂಬಾರ
Team Udayavani, Jan 12, 2019, 12:16 PM IST
ಕಕ್ಕೇರಾ: ಶೈಕ್ಷಣಿಕ ಪ್ರಗತಿ ಹೊಂದಲು ಶಿಕ್ಷಕರೊಂದಿಗೆ ಸಮುದಾಯದ ಸಹಕಾರ ಅವಶ್ಯವಾಗಿದೆ ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಮೌನೇಶ ಕಂಬಾರ ಹೇಳಿದರು.
ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಿಸಿ ಮಾತನಾಡಿದ ಅವರು, ಈ ಹಿಂದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಬಿಸಿಯೂಟ ಸೇವಿಸಬೇಕಾಗಿತ್ತು. ಸದ್ಯ ಪ್ರತ್ಯೇಕವಾಗಿ ಉರ್ದು ಶಾಲೆಗೆ ಬಿಸಿಯೂಟಕ್ಕೆ ಬೇಕಾಗುವ ಅಗತ್ಯ ಸೌಕರ್ಯ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಬಿಸಿಯೂಟಕ್ಕೆ ಯಾವುದೇ ಸಮಸ್ಯೆ ಆಗದು ಎಂದು ತಿಳಿಸಿದರು.
ಆರು ವರ್ಷದ ಪ್ರತಿಯೊಬ್ಬ ಮಕ್ಕಳನ್ನು ಪಾಲಕರು ಶಾಲೆಗೆ ಸೇರಿಸಿದಾಗ ಶಿಕ್ಷಣ ಸಂಬಂಧಿಸಿದ ಯೋಜನೆಗಳು ಸಾರ್ಥಕವಾಗಲಿವೆ. ಮಕ್ಕಳ ಸಂಖ್ಯೆ ದಾಖಲಾತಿ ಹೆಚ್ಚಿಸಿ ಶಿಕ್ಷಣ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ಬಸವರಾಜ ಆರೇಶಂಕರ, ಗುಂಡಪ್ಪ ಸೊಲ್ಲಾಪುರ, ಬಿಆರ್ಪಿ ಕಾಂತೇಶ ಹಲಗಿಮನಿ, ಸಿಆರ್ಪಿಗಳಾದ ರವಿ ಕೋಟ್ಯಾಳ್, ಸಿಕಂದರ್, ನಾಗನಾಥ, ಬಸವರಾಜ ಗುತ್ತೇದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ