ವಿತರಣೆಯಾಗದೆ ತುಕ್ಕು ಹಿಡಿಯುತ್ತಿವೆ ಸೈಕಲ್‌ಗ‌ಳು


Team Udayavani, Jan 13, 2019, 4:42 AM IST

13-january-2.jpg

ಸುಳ್ಯ : ಶಾಲಾ ಪ್ರಾರಂಭದಲ್ಲೇ ಸರಕಾರದಿಂದ ಮಕ್ಕಳಿಗೆ ವಿತರಣೆ ಯಾಗ ಬೇಕಿದ್ದ ಸೈಕಲ್‌ಗ‌ಳು ಆರೇಳು ತಿಂಗಳು ಕಳೆದರೂ ಶಾಲೆಯಲ್ಲೇ ಬಾಕಿಯಾಗಿದ್ದು, ತುಕ್ಕು ಹಿಡಿಯುವ ಹಂತಕ್ಕೆ ಬಂದಿವೆ.

ನಮಗೇಕೆ ಸೈಕಲ್‌ ಕೊಟ್ಟಿಲ್ಲವೆಂದು 8ನೇ ತರಗತಿಯ ಮಕ್ಕಳು ಪ್ರಶ್ನೆ ಮಾಡತೊಡಗಿದ್ದಾರೆ. ಸುಳ್ಯ ತಾಲೂಕಿನ ಹಲವು ಪ್ರೌಢಶಾಲೆಗಳಿಗೆ ಬಂದಿರುವ ಸೈಕಲ್‌ಗ‌ಳು ಶಾಲೆಯ ಮೂಲೆ, ಮೈದಾನಗಳಲ್ಲಿ ರಾಶಿಯಾಗಿ ಬಿದ್ದಂತೆ ಕಂಡುಬರುತ್ತಲಿವೆ.

ಮಕ್ಕಳನ್ನು ಸರಕಾರಿ ಶಾಲೆಗಳತ್ತ ಆಕರ್ಷಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಸರಕಾರ ಮಕ್ಕಳಿಗೆ ಸೈಕಲ್‌ ಯೋಜನೆಯನ್ನು ಜಾರಿಗೆ ತಂದಿತ್ತು. ಕಳೆದ ಸಾಲಿನವರೆಗೆ ಜೂನ್‌, ಜುಲೈನಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್‌ಗ‌ಳನ್ನು ನೀಡುತ್ತಾ ಬರಲಾಗಿತ್ತು. ಈ ಬಾರಿ ವಿತರಿಸಬೇಕಾಗಿರುವ ಸೈಕಲ್‌ಗ‌ಳನ್ನು ಸೋಣಂಗೇರಿ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯ ಮೈದಾನದಲ್ಲಿ ಸಂಗ್ರಹಿಸಿಡಲಾಗಿದೆ. ತಾಲೂಕಿನ ವಿವಿಧ ಸರಕಾರಿ ಶಾಲೆಗಳ ಮಕ್ಕಳಿಗೆ ಪೂರೈಕೆ ಮಾಡಲು ತಂದಿರಿಸಿರುವ 882 ಸೈಕಲ್‌ಗ‌ಳು ಅನಾಥ ಸ್ಥಿತಿಯಲ್ಲಿವೆ.

ಸರಕಾರ ಸೈಕಲ್‌ ಪೂರೈಕೆ ಯೋಜ ನೆಯ ಗುತ್ತಿಗೆಯನ್ನು ಖಾಸಗಿ ಕಂಪೆನಿಗೆ ನೀಡಿದೆ. ಸೋಣಂಗೇರಿ ಹಿ.ಪ್ರಾ. ಶಾಲೆಯ ಮೈದಾನದಲ್ಲಿ ಸೈಕಲ್‌ಗ‌ಳ ಬಿಡಿಭಾಗಗಳನ್ನು ತಂದು ಹಾಕಿ ಜೋಡಿಸಲಾಗಿತ್ತು. ಜೋಡಣೆ ಮುಗಿದು ಒಂದೂವರೆ ತಿಂಗಳು ಕಳೆದಿದರೂ ವಿದ್ಯಾರ್ಥಿಗಳಿಗೆ ವಿತರಣೆ ಯಾಗಿಲ್ಲ. ಉಪಯೋಗವಾಗದ ಕಾರಣ ಬಿಡಿಭಾಗಗಳು ತುಕ್ಕು ಹಿಡಿಯಲಾರಂಭಿಸಿವೆ.

ವರದಿಗೆ ಸರಕಾರ ಸೂಚನೆ
ಪ್ರಸಕ್ತ ವರ್ಷದಲ್ಲಿ ರಾಜ್ಯದ ಕೆಲವೆಡೆ ವಿತರಿಸಿದ ಸೈಕಲ್‌ಗ‌ಳು ದೋಷ ಪೂರಿತ ಹಾಗೂ ಕಳಪೆ ಗುಣಮಟ್ಟದವಾಗಿದ್ದ ಬಗ್ಗೆ ಇಲಾಖೆಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಗುಣಮಟ್ಟ ಪರಿಶೀಲಿಸಿದ ಬಳಿಕವೇ ಸೈಕಲ್‌ಗ‌ಳನ್ನು ವಿತರಿಸಬೇಕು ಎಂದು ಸರಕಾರ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಆದೇಶ ನೀಡಿತ್ತು. ಇದರಿಂದಾಗಿ ತಾಲೂಕಿನಲ್ಲಿ ಸೈಕಲ್‌ ವಿತರಣೆಯನ್ನು ತಡೆಹಿಡಿಯಲಾಗಿದೆ. ಸರಕಾರದ ಆದೇಶದಂತೆ ಇಲಾಖೆಯ ತಂಡವು ಜಿಲ್ಲೆಯ ಕೆಲವು ಶಾಲೆಗೆ ತೆರಳಿ ಸೈಕಲ್‌ಗ‌ಳ ಗುಣಮಟ್ಟ ಪರಿಶೀಲಿಸಿ ಮೇಲಧಿಕಾರಿಗಳಿಗೆ ವರದಿ ನೀಡಿದೆ. ಸರಕಾರದ ಆದೇಶ ಬಂದ ಕೂಡಲೇ ಸೈಕಲ್‌ಗ‌ಳ ವಿತರಣೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕನಸು ಕಾಣುತ್ತಿದ್ದಾರೆ ಮಕ್ಕಳು
ಸರಕಾರ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿ ಸೈಕಲ್‌ಗ‌ಳು ಸಿದ್ಧಗೊಂಡಿದ್ದರೂ ಕಳಪೆ ಗುಣಮಟ್ಟವಿದೆ ಎನ್ನುವ ಕಾರಣಕ್ಕೆ ಪರಿಶೀಲನೆಗೆ ಒಳಪಡಿಸಿ ಮಕ್ಕಳಿಗೆ ನೀಡಬೇಕು ಎಂದು ಸರಕಾರ ಸೂಚಿಸಿದ್ದು ಉತ್ತಮವೇ. ಆದರೆ ಈ ಕೆಲಸಕ್ಕೆ ತಿಂಗಳುಗಟ್ಟಲೆ ಕಾಲ ತೆಗೆದುಕೊಂಡಿರುವುದೇ ಸಮಸ್ಯೆಗೆ ಮೂಲ ಕಾರಣ. ತತ್‌ಕ್ಷಣ ವರದಿ ಪಡೆದು ಕಳಪೆಯಾಗಿದ್ದಲ್ಲಿ ಖಾಸಗಿ ಕಂಪೆನಿ ವಿರುದ್ಧ ಕ್ರಮ ಜರಗಿಸಿ ಬೇರೆ ಕಂಪೆನಿಯ ಮೂಲಕ ಮಕ್ಕಳಿಗೆ ಸೈಕಲ್‌ ವಿತರಿಸಬೇಕಿತ್ತು. ಗುಣಮಟ್ಟ ಪರಿಶೀಲನೆಯ ಒಂದೇ ಕಾರಣಕ್ಕೆ ಮಕ್ಕಳು ಕಣ್ಣ ಮುಂದೆಯೇ ಇರುವ ಸೈಕಲ್‌ಗ‌ಳನ್ನು ಓಡಿಸುವಂತಿಲ್ಲ. ಸವಾರಿಯ ಕನಸು ಸಾಕಾರವಾಗುತ್ತಿಲ್ಲ. ಈ ಕುರಿತು ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕಿದೆ. ಸ್ಥಳೀಯ ಶಾಸಕರೂ ಸರಕಾರಕ್ಕೆ ಒತ್ತಡ ಹೇರಬೇಕಿದೆ.

ಆದೇಶ ಬಂದ ಕೂಡಲೇ ವಿತರಣೆ
ಸೈಕಲ್‌ಗ‌ಳ ಜೋಡಣೆಯ ಎಲ್ಲ ಕೆಲಸಗಳು ಮುಗಿದಿವೆ. ಗುಣಮಟ್ಟದ ಕುರಿತು ದೂರುಗಳಿರುವ ಕಾರಣ ಜಿಲ್ಲೆಯಲ್ಲಿ ಸೈಕಲ್‌ಗ‌ಳನ್ನು ಮಕ್ಕಳಿಗೆ ವಿತರಿಸಿಲ್ಲ. ಮೇಲಧಿಕಾರಿಗಳ ಆದೇಶ ಇರುವುದರಿಂದ ಸದ್ಯ ತಡೆಹಿಡಿಯಲಾಗಿದ್ದು, ವಿತರಣೆಗೆ ಆದೇಶ ಬಂದ ಕೂಡಲೇ ಸೈಕಲ್‌ಗ‌ಳನ್ನು ಮಕ್ಕಳಿಗೆ ವಿತರಿಸಲಾಗುವುದು. ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಸೈಕಲ್‌ ವಿತರಿಸಲಾಗಿದೆ.
 – ಲಕ್ಷ್ಮೀಶ ರೈ,
 ದೈಹಿಕ ಶಿಕ್ಷಣ ಪರಿವೀಕ್ಷಕರು, ಸುಳ್ಯ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.