ಅಪ್ಪ ಮಕ್ಕಳ ಪಕ್ಷವಲ್ಲ,ನನಗೆ ಯಾರೂ ಶತ್ರುಗಳಿಲ್ಲ;ಹಾಸನದಲ್ಲಿ ಎಚ್ಡಿಡಿ
Team Udayavani, Jan 13, 2019, 11:19 AM IST
ಹಾಸನ: ನಮ್ಮದು ಅಪ್ಪ ಮಕ್ಕಳ ಪಕ್ಷವಲ್ಲ, ಕುಟುಂಬ ರಾಜಕಾರಣ ಎನ್ನುತ್ತಾರೆ, ನಾನು ಬೇರೆಯವರಿಗೂ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು ನಮ್ಮದು ಕುಟುಂಬ ರಾಜಕಾರಣ ಎಂದು ಟೀಕಿಸುತ್ತಾರೆ. ನಾನು ವಿಶ್ವನಾಥ್ ಅವರನ್ನು ಅಧ್ಯಕ್ಷನನ್ನಾಗಿ ಮಾಡಿದ್ದೇನೆ. ಅದಕ್ಕೆ ಮುಂಚೆ ಕೃಷ್ಣಪ್ಪ,ಸಿದ್ದರಾಮಯ್ಯ ಇಬ್ರಾಹಿಂ ಮಿರಾಜುದ್ದೀನ್ ಪಟೇಲ್ರನ್ನು ಅಧ್ಯಕ್ಷರನ್ನಾಗಿ ಮಾಡಲಿಲ್ಲವೆ ಎಂದು ಪ್ರಶ್ನಿಸಿದರು.
ಯಾರು ಅನ್ಯತಾ ಭಾವಿಸಬೇಡಿ. ಪಕ್ಷ ನನ್ನ ಮನೆಗೆ ಸೇರಿದ್ದಲ್ಲ ಎಲ್ಲರಿಗೂ ಸೇರಿದ್ದು, ಅಧಿಕಾರಕ್ಕೆ ಬಂದ್ರೆ ಏನೂ ಮಾಡುತ್ತೇವೆ ಅಂದುಕೊಳ್ಳುವುದು ಬೇಡ ಎಂದರು.
56 ವರ್ಷಗಳ ಕಾಲ ಹಾಸನದ ಜನರು ನನ್ನನ್ನು ರಾಜಕೀಯವಾಗಿ ಬೆಳೆಸಿದ್ದೀರಿ. ನನಗೆ ಯಾರೂ ಶತ್ರುಗಳಿಲ್ಲ, ಯಾವ ಸಮುದಾಯಕ್ಕೂ ಅನ್ಯಾಯ ಮಾಡಿದವನಲ್ಲ ಎಂದರು.
ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ಬಳಿಕ ಏನು ಮಾಡಿದ್ದಾರೆ ಎಂದು ಹೇಳಬೇಕಾದ ಹೊಣೆಗಾರಿಕೆ ನನ್ನ ಮೇಲಿದೆ.36 ಜನರನ್ನು ಕಟ್ಟಿಕೊಂಡು ಮುಖ್ಯಮಂತ್ರಿ ಆದ ಅವರ ನೋವೇನು ಎನ್ನುವುದು ನನಗೆ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?