ಎಪಿಎಂಸಿ ಜಾಗದಲ್ಲೇ ತಾಲೂಕು ಕಚೇರಿ ನಿರ್ಮಿಸಿ


Team Udayavani, Jan 13, 2019, 11:48 AM IST

13-january-23.jpg

ಅಳ್ನಾವರ: ಹೊಸ ತಾಲೂಕು ಕಚೇರಿಯನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ನಿರ್ಮಿಸಬೇಕು. ಈ ಜಾಗೆಯನ್ನು ಹಂಚಿಕೆ ಮಾಡಲು ಹೊರಟಿರುವ ಎಪಿಎಂಸಿ ಕ್ರಮ ತಡೆಯಬೇಕು ಎಂದು ಆಗ್ರಹಿಸಿ ಸ್ಥಳೀಯ ಮುಖಂಡರ ನಿಯೋಗ ಧಾರವಾಡಕ್ಕೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧಿಕಾರಿಗಳು ಈಚೆಗೆ ಪಟ್ಟಣಕ್ಕೆ ಆಗಮಿಸಿ ಎಪಿಎಂಸಿ ಜಾಗೆಯನ್ನು ಪರಿಶೀಲಿಸಿದ ನಂತರ ಈ ಜಾಗೆ ಸೂಕ್ತ ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸರ್ವೇ ಕೂಡಾ ನಡೆದಿದೆ. ಇದಾದ ನಂತರ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ಇದೇ ಜಾಗೆಯನ್ನು ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲು ಹೊರಟಿರುವ ಕ್ರಮ ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಎಪಿಎಂಸಿ ಆವರಣ ಸುಮಾರು 16 ಎಕರೆ ವಿಶಾಲವಾದ ಜಾಗೆ ಹೊಂದಿದೆ. ಇದು ಉಪ ಮಾರುಕಟ್ಟೆ ಪ್ರಾಂಗಣವಾದ್ದರಿಂದ ಹೆಚ್ಚಿನ ವಹಿವಾಟು ಇಲ್ಲದೆ ಸಾಕಷ್ಟು ಜಾಗೆ ನಿರುಪಯುಕ್ತವಾಗಿದೆ. ಅದರಲ್ಲಿ ತಾಲೂಕು ಆಡಳಿತ ಭವನಕ್ಕೆ ಕೇವಲ 3.12 ಏಕರೆ ಜಾಗೆಯನ್ನು ಮಾತ್ರ ಗುರುತಿಸಲಾಗಿದೆ. ಕಚೇರಿ ಕೆಲಸಕ್ಕೆ ಆಗಮಿಸುವ ಜನರಿಗೆ ಈ ಜಾಗೆ ಅನುಕೂಲಕರವಾಗಿದೆ. ಇಲ್ಲಿಯೇ ತಾಲೂಕು ಕಚೇರಿ ನಿರ್ಮಿಸಬೇಕು ಎಂದು ವಿನಂತಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಅವರು ನಿಯೋಗದ ಮನವಿ ಸ್ವೀಕರಿಸಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ಮುಖಂಡರು ಪತ್ರಿಕೆಗೆ ತಿಳಿಸಿದ್ದಾರೆ.

ಸಭೆ: ಈ ಕುರಿತು ಚರ್ಚಿಸಲು ಬೆಳಗ್ಗೆ ಮುಖಂಡರ ಸಭೆಯನ್ನು ಸ್ಥಳೀಯ ಅಂಜುಮನ್‌ ಏ ಇಸ್ಲಾಂ ಸಂಸ್ಥೆಯ ಶಾದಿ ಮಹಲ್‌ದಲ್ಲಿ ಕರೆಯಲಾಗಿತ್ತು. ಹಲವು ಮುಖಂಡರು ಮಾತನಾಡಿ, ನಾಲ್ಕು ದಶಕಗಳ ಹೋರಾಟದ ಫಲವಾಗಿ ದೊರೆತ ತಾಲೂಕು ಕೇಂದ್ರ ಜನರಿಗೆ ಅನುಕೂಲವಾದ ಸ್ಥಳದಲ್ಲಿ ಆಗಲಿ ಎಂದರು. ಈ ಕುರಿತು ಪಪಂ ಸಾಮಾನ್ಯ ಸಭೆಯಲ್ಲಿ ಸರ್ವ ಸಮ್ಮತದ ಠರಾವು ಪಾಸ್‌ ಮಾಡಿ ಜಿಲ್ಲಾಡಳಿತಕ್ಕೆ ಕಳುಹಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು. ಜಿಲ್ಲಾಧಿಕಾರಿಯನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಣಯಿಸಲಾಗಿತ್ತು.

ಎಂ.ಸಿ. ಹಿರೇಮಠ, ಫಹೀಮ್‌ ಕಾಂಟ್ರಾಕ್ಟರ, ಶಿವಾನಂದ ಹೊಸಕೇರಿ, ಎಸ್‌.ಬಿ. ಪಾಟೀಲ, ನಾರಾಯಣ ಗಡಕರ, ಕೃಷ್ಣ ಅಷ್ಟೇಕರ, ಬಸವರಾಜ ತೇಗೂರ, ಛಗನಲಾಲ ಪಟೇಲ, ಡಾ| ಬಸವರಾಜ ಮೂಡಬಾಗಿಲ್‌, ನದೀಮ ಕಾಂಟ್ರಾಕ್ಟರ್‌, ಅಮೂಲ ಗುಂಜೀಕರ, ನಾರಾಯಣ ಮೋರೆ, ಅನ್ವರಖಾನ ಬಾಗೇವಾಡಿ, ಕಿರಣ ಗಡಕರ, ಜೈಲಾನಿ ಸುದರ್ಜಿ, ಮಂಜುಳಾ ಮೇದಾರ, ನಾಗರತ್ನಾ ವಾಘಮೋಡೆ, ರಾಜೇಶ ಬೈಕೇರಿಕರ, ವೀರೇಶ ಲಿಂಗನಮಠ, ನಾಗರತ್ನಾ ಜಮಖಂಡಿ, ಅನ್ನಪೂರ್ಣಾ ಹಿರೇಮಠ, ಸಂತೋಷ ಬಡಿಗೇರ, ಸುವರ್ಣಾ ಕಡಕೋಳ, ಜಾವಿದ್‌ ತೊಲಗಿ, ಪ್ರವೀಣ ಪವಾರ, ಬಾಳು ಜಾಧವ, ಎಚ್.ಒ ಪಾಲಕರ, ವಿನಾಯಕ ಕುರುಬರ, ಪರಶುರಾಮ ಬೇಕನೆಕರ, ಪರಮೇಶ್ವರ ತೇಗೂರ, ನಬಿಸಾಬ ಮುಜಾವರ, ಮುಬಾರಕ ಅವರಾದಿ, ಹನುಮಂತ ಶಿಂಧೆ, ಇನಾಯಿತುಲ್ಲಾ ತೊಲಗಿ, ಮಹ್ಮದ್‌ಶಫೀಕ್‌ ಖತೀಬ ಇದ್ದರು.

ಟಾಪ್ ನ್ಯೂಸ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.