ರಾಹುಲ್‌, ಪಾಂಡ್ಯ ಸ್ಥಾನಕ್ಕೆ ಗಿಲ್‌, ವಿಜಯ್‌ ಶಂಕರ್‌​​​​​​​


Team Udayavani, Jan 14, 2019, 12:30 AM IST

vijay-shankar-shubman-gill.jpg

ಹೊಸದಿಲ್ಲಿ: “ಟೆಲಿವಿಷನ್‌ ಶೋ’ ಮೂಲಕ ವಿವಾದಕ್ಕೆ ಸಿಲುಕಿ ಅಮಾನತಿಗೊಳಗಾಗಿರುವ ಹಾರ್ದಿಕ್‌ ಪಾಂಡ್ಯ ಮತ್ತು ಕೆ.ಎಲ್‌. ರಾಹುಲ್‌ ಬದಲು ಶುಭಮನ್‌ ಗಿಲ್‌ ಮತ್ತು ವಿಜಯ್‌ ಶಂಕರ್‌ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಇವರಲ್ಲಿ ವಿಜಯ್‌ ಶಂಕರ್‌ ಕೂಡಲೇ ಆಸ್ಟ್ರೇಲಿಯಕ್ಕೆ ತೆರಳಲಿದ್ದು, ಉಳಿದೆರಡು ಏಕದಿನ ಪಂದ್ಯಗಳ ಆಯ್ಕೆಗೆ ಲಭ್ಯರಾಗಲಿದ್ದಾರೆ. ಆದರೆ ಶುಭಮನ್‌ ಗಿಲ್‌ ನ್ಯೂಜಿಲ್ಯಾಂಡ್‌ ಪ್ರವಾಸದ ವೇಳೆಯಷ್ಟೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ನ್ಯೂಜಿಲ್ಯಾಂಡ್‌ನ‌ಲ್ಲಿ ಭಾರತ 5 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ.

ಪಂಜಾಬ್‌ನ 19ರ ಹರೆಯದ ಶುಭಮನ್‌ ಗಿಲ್‌ ಅಗ್ರ ಕ್ರಮಾಂಕದ ಉದಯೋನ್ಮುಖ ಬ್ಯಾಟ್ಸ್‌ಮನ್‌ ಆಗಿದ್ದು, ಕಳೆದ ವರ್ಷ ಭಾರತದ ಅಂಡರ್‌-19 ವಿಶ್ವಕಪ್‌ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸರಣಿಶ್ರೇಷ್ಠ ಗೌರವಕ್ಕೂ ಪಾತ್ರರಾಗಿದ್ದರು. ಪ್ರಸಕ್ತ ಋತುವಿನಲ್ಲಿ ಪಂಜಾನ್‌ ಪರ ರಣಜಿ ಆಡಿದ ಗಿಲ್‌ ಮೊದಲ ಸಲ ಐಪಿಎಲ್‌ನಲ್ಲೂ ಆಡುವ ಅವಕಾಶ ಪಡೆದಿದ್ದಾರೆ. ಅವರು ಪ್ರತಿನಿಧಿಸಲಿರುವ ತಂಡ ಕೋಲ್ಕತಾ ನೈಟ್‌ರೈಡರ್.

ಶಂಕರ್‌, ಉತ್ತಮ ಫಿನಿಶರ್‌
ತಮಿಳುನಾಡಿನ 27ರ ಹರೆಯದ ಆಲ್‌ರೌಂಡರ್‌ ವಿಜಯ್‌ ಶಂಕರ್‌ ಉತ್ತಮ ಫಿನಿಶರ್‌ ಆಗಿ ಗುರುತಿಸಲ್ಪಟ್ಟಿದ್ದಾರೆ. ಭಾರತ “ಎ’ ತಂಡದೊಂದಿಗೆ ನ್ಯೂಜಿಲ್ಯಾಂಡ್‌ ಪ್ರವಾಸ ಕೈಗೊಂಡದ್ದು ತನಗೆ ಲಾಭವಾಗಿ ಪರಿಣಮಿಸಲಿದೆ ಎಂಬುದು ಅವರ ಅಭಿಪ್ರಾಯ. ತನ್ನ ಯಶಸ್ಸಿನಲ್ಲಿ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಪಾಲು ಮಹತ್ವದ್ದಾಗಿದ್ದು, ನ್ಯೂಜಿಲ್ಯಾಂಡ್‌ ಪ್ರವಾಸದ ವೇಳೆ ತನ್ನನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸುವ ಮೂಲಕ ಆತ್ಮವಿಶ್ವಾಸ ತುಂಬಿದರು ಎಂದು ಪ್ರತಿಕ್ರಿಯಿಸಿದ್ದಾರೆ.

“300 ಪ್ಲಸ್‌ ರನ್‌ ಚೇಸ್‌ ಮಾಡುವಾಗಲೊಮ್ಮೆ ಬಹಳ ಬೇಗ ಕ್ರೀಸ್‌ ಇಳಿದ ನಾನು 87 ರನ್‌ ಬಾರಿಸಿದೆ. ಮತ್ತೂಂದು ಪಂದ್ಯದಲ್ಲಿ 60 ರನ್‌ ಹೊಡೆದಿದ್ದೆ. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಯುವಾಗ ತಂಡದ ಗೆಲುವಿಗೆ 150-160 ರನ್ನುಗಳ ಅಗತ್ಯವಿರುತ್ತಿತ್ತು. ಇದರಿಂದ ಒತ್ತಡ ನಿಭಾಯಿಸುವುದನ್ನು ಕಲಿಯಲು ಸಾಧ್ಯವಾಯಿತು’ ಎಂಬುದಾಗಿ ಭಾರತ ಪರ 5 ಟಿ20 ಪಂದ್ಯಗಳನ್ನು ಆಡಿರುವ ವಿಜಯ್‌ ಶಂಕರ್‌ ಹೇಳಿದರು.

ಹಾರ್ದಿಕ್‌ ಪಾಂಡ್ಯ ಅವರನ್ನು ಆಸ್ಟ್ರೇಲಿಯದ ಟೆಸ್ಟ್‌ ಸರಣಿ ನಡುವೆ ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಯಾವುದೇ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿರಲಿಲ್ಲ. ರಾಹುಲ್‌ ಟೆಸ್ಟ್‌ನಲ್ಲಿ ಲಭಿಸಿದ ಅವಕಾಶಗಳನ್ನು ಬಳಸಿಕೊಳ್ಳಲು ಸಂಪೂರ್ಣ ವಿಫ‌ಲರಾಗಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.