ದ್ವಿಚಕ್ರ ವಾಹನ ಕಳವು: ಮೂವರ ಸೆರೆ: 1.5 ಲ. ರೂ. ಮೌಲ್ಯದ ಸೊತ್ತು ವಶ


Team Udayavani, Jan 14, 2019, 5:01 AM IST

bike.jpg

ಮಂಗಳೂರು: ಮಂಗಳೂರು ನಗರ ಹಾಗೂ ಇತರ ಜಿಲ್ಲೆಗಳಿಂದ ದ್ವಿಚಕ್ರ ವಾಹನ ಕಳವು ಆರೋಪದಲ್ಲಿ ಮೂವರನ್ನು ನಗರ ಸಿಸಿಬಿ ಪೊಲೀಸರು ರವಿವಾರ ಬಂಧಿಸಿ, 5 ದ್ವಿಚಕ್ರ ವಾಹನ ಮತ್ತು ಮೂರು ಮೊಬೈಲ್‌  ಸಹಿತ 1,58,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗ್ರೆ ಕಸಬಾ ನಿವಾಸಿಗಳಾದ ಸಯ್ಯದ್‌ ಅಫ್ರಿದ್‌ (19), ಮಹಮ್ಮದ್‌ ಸಫಾನ್‌(19) ಮತ್ತು ಮಹಮ್ಮದ್‌ ಗೌಸ್‌ (20) ಬಂಧಿತರು.

ಜ.13ರಂದು  ಬಂದರು ಪೊಲೀಸ್‌ ಠಾಣಾ ವ್ಯಾಪ್ತಿಯ ಬಂದರ್‌ ಪೋರ್ಟ್‌ ರಸ್ತೆಯ ಸುಲಭ್‌ ಶೌಚಾಲಯದ ಬಳಿಯಲ್ಲಿ  ಕೆಲವರು ನಂಬರ್‌ ಪ್ಲೇಟ್‌ ಅಳವಡಿಸದ ದ್ವಿಚಕ್ರ ವಾಹನಗಳಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ  ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.

ಆರೋಪಿಗಳಲ್ಲಿ ಐದು ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. 2018ರ ಆಗಸ್ಟ್‌ನಲ್ಲಿ  ನಗರದ ಜೋಡುಮಠ ರಸ್ತೆಯ ಯುನೈಟೆಡ್‌ ಫ್ಲಾಝಾ ಪಾರ್ಕಿಂಗ್‌ ಸ್ಥಳದಿಂದ ಕಳವುಗೈದ ಸುಝುಕಿ ಆ್ಯಕ್ಸಸ್‌ ಸ್ಕೂಟರ್‌, 2018ರ ಸೆಪ್ಟಂಬರ್‌ನಲ್ಲಿ  ದಕ್ಷಿಣ ದಕ್ಕೆಯ ಬಳಿಯಲ್ಲಿ ಪಾರ್ಕ್‌ ಮಾಡಿದ್ದ ಹೀರೋ  ಹೋಂಡಾ ಸ್ಪೆ$Éಂಡರ್‌ ಬೈಕ್‌, 2016ರಲ್ಲಿ ಮಂಗಳೂರು ಓಲ್ಡ್‌ ಕೆಂಟ್‌ ರಸ್ತೆಯ ಕಟ್ಟಡದ ಬಳಿ  ನಿಲ್ಲಿಸಿದ್ದ ಯಮಹಾ ಎಫ್ ಝೆಡ್‌ ಬೈಕ್‌, 2018ರಲ್ಲಿ ಮಣಿಪಾಲ  ಠಾಣಾ ವ್ಯಾಪ್ತಿಯಿಂದ ಕದ್ದಿದ್ದ ಹೀರೋ  ಹೋಂಡಾ ಸಿಡಿ 100 ಬೈಕ್‌, 2018 ಆಗಸ್ಟ್‌ನಲ್ಲಿ ಹಾಸನ ಜಿಲ್ಲೆಯ ಪೆನ್ಶನ್‌ ಮೊಹಲ್ಲ ವ್ಯಾಪ್ತಿಯಿಂದ  ಕದ್ದಿದ್ದ  ಹೋಂಡಾಡಿಯೋ ಸ್ಕೂಟರ್‌ಗಳನ್ನು  ಹಾಗೂ ಮೂರು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ಹಾಗೂ  ಸೊತ್ತುಗಳನ್ನು ಬಂದರು  ಠಾಣೆಗೆ ಹಸ್ತಾಂತರಿಸಲಾಗಿದೆ.

ಇಬ್ಬರು ಹಳೆ ಆರೋಪಿಗಳು
ಬಂಧಿತರ ಪೈಕಿ ಸಯ್ಯದ್‌ ಅಫ್ರಿದ್‌  ವಿರುದ್ಧ  ಪಣಂಬೂರು  ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು,  ತಲೆಮರೆಸಿಕೊಂಡಿದ್ದ. ಮಹಮ್ಮದ್‌ ಸಫಾನ್‌ ವಿರುದ್ಧ ಪಾಂಡೇಶ್ವರ ಮತ್ತು ಪಣಂಬೂರು  ಠಾಣೆಗಳಲ್ಲಿ ಕಳವು ಪ್ರಕರಣ ದಾಖಲಾಗಿವೆ. ಆಯುಕ್ತ ಟಿ.ಆರ್‌. ಸುರೇಶ್‌ ಅವರ ಆದೇಶದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್‌ ಮಾರ್ಗ ದರ್ಶನದಲ್ಲಿ ನಡೆದ  ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ಶಾಂತಾರಾಮ, ಪಿಎಸ್‌ಐಗಳಾದ ಶ್ಯಾಮ್‌ಸುಂದರ್‌, ಕಬ್ಟಾಳ್‌ರಾಜ್‌ ಎಚ್‌.ಡಿ. ಮತ್ತು ಸಿಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.