6ನೇ ಚಿತ್ರಸಂತೆಯಲ್ಲಿ ಕಲಾಕೃತಿಗಳ ಕಲರವ


Team Udayavani, Jan 14, 2019, 6:59 AM IST

gul-3.jpg

ಕಲಬುರಗಿ: ಕಳೆದ ಆರು ವರ್ಷಗಳಿಂದ ವರ್ಷಂಪ್ರತಿ ನಡೆದುಕೊಂಡು ಬರುತ್ತಿರುವ ಚಿತ್ರಸಂತೆ ರವಿವಾರ ನಗರದ ಸಾರ್ವಜನಿಕ ಉದ್ಯಾನವನದಲ್ಲಿ ನಡೆದು ಕಲಾಕೃತಿಗಳ ಕಲರವ ಮೆರಗು ತಂದಿತು. ಸಾರ್ವಜನಿಕ ಉದ್ಯಾನವನದಲ್ಲಿ ರವಿವಾರ ಬೆಳಗ್ಗೆ 10ರಿಂದ ರಾತ್ರಿ 7:30ರ ವರೆಗೆ ನಡೆದ 6ನೇ ಚಿತ್ರಸಂತೆಯಲ್ಲಿ ನೂರಾರು ಕಲಾವಿದರು ತಮ್ಮ ಕಲಾಕೃತಿಗಳೊಂದಿಗೆ ಆಸಕ್ತಿಯಿಂದ ಭಾಗವಹಿಸಿದ್ದರು.

ಚಿತ್ರರಸಿಕರು ಆಸಕ್ತಿಯಿಂದ ವೀಕ್ಷಿಸಿದರಲ್ಲದೇ ಕಲಾಕೃತಿಗಳನ್ನು ಖರೀದಿ ಮಾಡಿ ಕಲಾವಿದರಿಗೆ ಸಹಾಯ ಮಾಡಿದರು. ಆದರೆ ಈ ವರ್ಷ ಮೂರು ಲಕ್ಷ ರೂ. ಮೌಲ್ಯದಷ್ಟು ಕಲಾಕೃತಿಗಳು ಮಾರಾಟವಾದವು ಎನ್ನಲಾಗಿದೆ. ಆದರೆ ಹಿಂದಿನ ವರ್ಷ 6 ರಿಂದ 7ಲಕ್ಷ ರೂ. ಮೌಲ್ಯದಷ್ಟು ಕಲಾಕೃತಿಗಳು ಮಾರಾಟವಾಗಿದ್ದವು.

ಕಲಾ ಗ್ಯಾಲರಿ ಸ್ಥಾಪನೆಯಾಗಲಿ: ನಗರದ ಸಾರ್ವಜನಿಕ ಉದ್ಯಾನವನದಲ್ಲಿ ಎಚ್ಕೆಸಿಸಿಐ, ಗುಲ್ಬರ್ಗ ವಿವಿ , ಕೇಂದ್ರೀಯ ವಿವಿ, ವಿಕಾಸ ಅಕಾಡೆಮಿ, ಹೈ.ಕ ಶಿಕ್ಷಣ ಸಂಸ್ಥೆ, ಕೊತ್ತಲಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಚೈತನ್ಯಮಯಿ ಆರ್ಟ್‌ ಗ್ಯಾಲರಿ ಹಾಗೂ ದೃಶ್ಯಬೆಳಕು ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿದ್ದ 6ನೇ ಚಿತ್ರ ಸಂತೆಗೆ ಚಾಲನೆ ನೀಡಿದ ಕರ್ನಾಟಕ ಕೇಂದ್ರೀಯ ವಿವಿ ಕುಲಪತಿಗಳಾದ ಪ್ರೊ| ಎಚ್.ಎಂ. ಮಹೇಶ್ವರಯ್ಯ ಮಾತನಾಡಿ, ಜಗದ್ವಿಖ್ಯಾತ ಚಿತ್ರಕಲಾವಿದ ಡಾ| ಎಸ್‌.ಎಂ. ಪಂಡಿತ, ನಾಡೋಜ ಜೆ.ಎಸ್‌. ಖಂಡೇರಾವ್‌, ಡಾ| ಎ.ಎಸ್‌. ಪಾಟೀಲ ಮುಂತಾದ ಶ್ರೇಷ್ಠ ಕಲಾವಿದರ ನಾಡಾದ ಕಲಬುರಗಿಯಲ್ಲಿ 20 ಎಕರೆ ಭೂ ಪ್ರದೇಶದಲ್ಲಿ ಒಂದು ಶ್ರೇಷ್ಠ ಕಲಾ ಗ್ಯಾಲರಿ ನಿರ್ಮಾಣವಾಗುವುದು ಅಗತ್ಯವಾಗಿದೆ. ಇದು ಸಾಕಾರಗೊಂಡಲ್ಲಿ ಕಲಾಕೃತಿಗಳನ್ನು ವೀಕ್ಷಿಸಲು ಕಲಾಸಕ್ತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಚಿತ್ರಕಲಾ ಪರಿಷತ್ತು ಆಯೋಜಿಸುವ ಚಿತ್ರಸಂತೆಗೆ 2 ಕೋಟಿ ರೂ. ಬಿಡುಗಡೆ ಮಾಡುವ ಸರ್ಕಾರ ಕಲಬುರಗಿಯಲ್ಲಿ ಐದು ವರ್ಷಗಳಿಂದ ನಡೆಯುತ್ತಿರುವ ಚಿತ್ರಸಂತೆಗೆ ಬಿಡಿಗಾಸು ನೀಡದೇ ಇರುವುದು ಬೇಸರದ ಸಂಗತಿಯಾಗಿದೆ ಎಂದು ಕುಲಪತಿಗಳು ನುಡಿದರು.

ವಿಕಾಸ ಅಕಾಡೆಮಿ ಅಧ್ಯಕ್ಷ ಡಾ| ಬಸವರಾಜ ಪಾಟೀಲ ಸೇಡಂ ಅಧ್ಯಕ್ಷತೆ ವಹಿಸಿ, ಕಲೆಗೆ ಸೂಕ್ತ ಪ್ರೋತ್ಸಾಹ ಸಿಕ್ಕಾಗ ಅದು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಚಿತ್ರಸಂತೆ ಪ್ರಧಾನ ಸಂಯೋಜಕ ಡಾ| ಎ.ಎಸ್‌. ಪಾಟೀಲ ಪ್ರಾಸ್ತಾವಿಕ ಮಾತನಾಡಿ, ಬೆಂಗಳೂರಿನಲ್ಲಿ ಕಳೆದ 15 ವರ್ಷಗಳಿಂದ ಚಿತ್ರಸಂತೆ ನಡೆಸಲಾಗುತ್ತಿದೆ. ಕಲಬುರಗಿಯಲ್ಲಿ ಐದು ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. 50 ಸಾವಿರಕ್ಕಿಂತಲೂ ಹೆಚ್ಚಿನ ಕಲಾಸಕ್ತರು ಕಲಾಕೃತಿಗಳನ್ನು ವೀಕ್ಷಿಸಿದ್ದಾರೆ. ಸುಮಾರು 25 ಲಕ್ಷ ರೂ.ಗೂ ಹೆಚ್ಚು ಕಲಾಕೃತಿಗಳು ಮಾರಾಟವಾಗಿವೆ ಎಂದರು.

ಶಾಸಕಿ ಖನೀಜ್‌ ಫಾತೀಮಾ, ಎಚ್ಕೆಸಿಸಿಐ ಅಧ್ಯಕ್ಷ ಡಾ| ಭೀಮಾಶಂಕರ ಬಿಲಗುಂದಿ, ಮಾಜಿ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ, ಗುಲ್ಬರ್ಗ ವಿವಿ ದೃಶ್ಯ ವಿಭಾಗದ ಡಾ| ಪರಿಮಳಾ ಅಂಬೇಕರ, ಆನಂದ ಟೆಕ್ಸ್‌ ಟೈಲ್‌ನ ಆನಂದ ದಂಡೋತಿ, ಎಸಿಸಿ ಸಿಮೆಂಟ್ ಕಂಪನಿಯ ವ್ಯವಸ್ಥಾಪಕ ಅಭಿನಂದನ್‌ ಕಿರಣಗಿ, ಚಿತ್ರಸಂತೆಯ ಸಂಯೋಜಕ ಡಾ| ಪರಶುರಾಮ ಪಿ. ಹಾಗೂ ಇತರರು ಇದ್ದರು. ಎಂ.ಎಚ್. ಬೆಳಮಗಿ ಸ್ವಾಗತಿಸಿದರು, ಡಾ| ಸುಜಾತಾ ಪಾಟೀಲ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಸ್ವಚ್ಛ ಭಾರತ್‌, ಭಾರತೀಯ ಹಬ್ಬಗಳು, ನಮ್ಮೂರ ಉದ್ಯಾನವನ ಕುರಿತು ಮಕ್ಕಳ ಚಿತ್ರಕಲಾ ಸ್ಪರ್ಧೆಯೂ ಜರುಗಿತು. ಸ್ಪರ್ಧಾ ವಿಜೇತ ಮಕ್ಕಳಿಗೆ ಪ್ರಶಸ್ತಿಗಳನ್ನು ಹಾಗೂ ಪಾಲ್ಗೊಂಡ ಎಲ್ಲ ಮಕ್ಕಳಿಗೂ ಪ್ರಮಾಣಪತ್ರಗಳನ್ನು ನೀಡುವ ಮೂಲಕ ಪ್ರೋತ್ಸಾಹಿಸಲಾಯಿತು.

ಮನರಂಜಿಸಿದ ಕಲಾಕೃತಿಗಳು: ಚಿತ್ರಸಂತೆಗೆ ಮಹಾನಗರದ ನಾಗರಿಕರು ಕುಟುಂಬ ಸಮೇತ ಆಗಮಿಸಿ ಕಲಾಕೃತಿಗಳನ್ನು ವೀಕ್ಷಿಸುತ್ತಿರುವುದು ಕಂಡು ಬಂತು. ಮೂರ್ತ ಚಿತ್ರ, ಭಾವಚಿತ್ರ, ನಿಸರ್ಗ ಚಿತ್ರ, ಪಕ್ಷಿ, ಪ್ರಾಣಿಗಳ ಚಿತ್ರಗಳು, ಐತಿಹಾಸಿಕ ಸ್ಮಾರಕಗಳು, ರಾಷ್ಟ್ರೀಯ ನಾಯಕರು, ದೇವಾನುದೇವತೆಗಳು, ಶರಣರ, ಜನಪದ ಸಂಸ್ಕೃತಿ, ರೇಖಾ ಚಿತ್ರಗಳು, ಮಧುಬನಿಯಂತಹ ಜನಪದ ಶೈಲಿಯ ಚಿತ್ರ, ಮೈಸೂರು ತಂಜಾವೂರು ಶೈಲಿಯ ಸಾಂಪ್ರಾದಾಯಿಕ ಚಿತ್ರಕಲೆ ಸೇರಿದಂತೆ ನೂರಾರು ಕಲಾಕೃತಿಗಳು ನೋಡುಗರ ಕಣ್ಮನ ಸೆಳೆದವು.

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.