ಅಮರಶಿಲ್ಪಿ ಜಕಣಾಚಾರಿ ಶ್ರೇಷ್ಠ ಶಿಲ್ಪಕಲಾಕಾರ: ದೊಡ್ಡೆಂದ್ರ ಶ್ರೀ
Team Udayavani, Jan 14, 2019, 7:18 AM IST
ಕಲಬುರಗಿ: ಅಮರಶಿಲ್ಪಿ ಜಕಣಾಚಾರಿ ಕಟ್ಟಿಗೆ, ಕಲ್ಲು ಬಂಡೆಗಳಿಂದ ತಾವು ತಯಾರಿಸಿದ ಶಿಲ್ಪಕಲೆಗಳ ಮೂಲಕ ಇಂದಿಗೂ ಜೀವಂತವಾಗಿದ್ದಾರೆ ಎಂದು ಸುಲೇಪೇಟ ದೊಡ್ಡೆಂದ್ರ ಮಹಾಸ್ವಾಮೀಜಿ ಹೇಳಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮರಶಿಲ್ಪಿ ಜಕಣಾಚಾರ್ಯರು ಉತ್ತಮ ಕಲಾಕೃತಿಗಳನ್ನು ನಿರ್ಮಿಸಿ ನಾಡಿನ ಅಲಂಕಾರ ಹೆಚ್ಚಿಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ನಾಡಿನಾದ್ಯಂತ ಇರುವ ಕಲಾಕೃತಿಗಳನ್ನು ವೀಕ್ಷಿಸಲು ದೇಶ ವಿದೇಶಗಳಿಂದ ಯಾತ್ರಿಕರು ಆಗಮಿಸುವಂತೆ ಮಾಡಿದ್ದಾರೆ ಎಂದರು.
ಅಮರ ಶಿಲ್ಪಿ ಜಕಣಾಚಾರಿ ಅವರಂತಹ ಶಿಲ್ಪಿ ಇನ್ನು ಯಾರೂ ಜನಿಸಿಲ್ಲ. ಕಲ್ಲಿನಲ್ಲಿ ಕಸೂತಿ ಮಾಡಿ ಕಲ್ಲಹರಿಸಿ ಹೂ ಮಾಡಿದ ಮಹಾನ್ ವ್ಯಕ್ತಿ. ಬೇಲೂರು, ಹಳೆಬೀಡು, ಹಂಪಿ, ಐಹೊಳೆ, ಪಟ್ಟದಕಲ್ಲು ಮುಂತಾದ ಅನೇಕ ಯಾತ್ರಾ ಸ್ಥಳಗಳಲ್ಲಿ ಅವರು ಶಿಲೆಯಲ್ಲಿ ಜೀವಂತ ಕಲೆ ನಿರ್ಮಾಣ ಮಾಡಿದ್ದಾರೆ ಎಂದು ಹೇಳಿದರು. ಜಗತ್ ವೃತ್ತದಿಂದ ಸಂತ್ರಾಸವಾಡಿ ಕಾಳಿಕಾ ಮಂದಿರದವರೆಗೆ ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರದ ಮೆರವಣಿಗೆ ನಡೆಯಿತು. ದೇವಿಂದ್ರಪ್ಪ ವಿಶ್ವಕರ್ಮ, ಅಮೃತ ಹಳ್ಳಿ, ಶರಣು ಎಂ. ಪಂಚಾಳ, ಈರಣ್ಣ ಕವಲಗಾ, ಸುಧಾಕರ ಮುತ್ಯಾನ ಬಬಲಾದ, ಶರಣು ರಾಮನಗರ, ಶರಣು ಫಿಲ್ಟರಬೆಡ್ ಸುಲ್ತಾನಪೂರ, ವಿಠಲರಾವ್ ಸುತಾರ, ಭೀಮರಾವ್ ಬಡಿಗೇರ, ದತ್ತಾತ್ರೇಯ ವಿಶ್ವಕರ್ಮ, ಮಲ್ಲಿಕಾರ್ಜುನ ದಣ್ಣೂರ, ಹಣಮಂತರಾವ್ ರಾಜಾಪೂರ, ನಾಗಮೂರ್ತಿ ದೇವನತೆಗನೂರ, ಸುಮೀತ ಆರ್. ಪಾಟೀಲ ಹಾಗೂ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ