ಮನುಕುಲ ಉದ್ಧರಿಸಿದ ಬಸವಣ್ಣ


Team Udayavani, Jan 14, 2019, 10:03 AM IST

bell-6.jpg

ಬೀದರ: 12ನೇ ಶತಮಾನದಲ್ಲಿ ಬಸವಣ್ಣನವರು ಜಾತಿ, ಮತ, ಪಂಥ, ಭೇದವೆನ್ನದೇ ಸಕಲ ಮಾನವರು ನಮ್ಮವರು ಎಂಬ ಸಂದೇಶ ಸಾರಿದ್ದಾರೆ. ಮಾನವ ಜನಾಂಗವನ್ನು ಒಂದುಗೂಡಿಸುವ ಕಾರ್ಯ ಮಾಡಿ ಮನುಕುಲ ಉದ್ಧಾರ ಮಾಡಿದ್ದಾರೆ ಎಂದು ಡಾ|ದೇವಕಿ ಅಶೋಕ ನಾಗೂರೆ ಹೇಳಿದರು.

ನಗರದ ಪ್ರಸಾದ ನಿಲಯದಲ್ಲಿ ಅನುಭವ ಮಂಟಪ 100ನೇ ತಿಂಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶರಣರ ಮಾರ್ಗದಂತೆ ಡಾ| ಚನ್ನಬಸವ ಪಟ್ಟದ್ದೇವರು ದೀನ, ದಲಿತರ ಮನೆಗೆ ಹೋಗಿ ಲಿಂಗದೀಕ್ಷೆ ನೀಡುವ ಮೂಲಕ ಪಾವನಗೊಳಿಸಿ, ಬಡಮಕ್ಕಳು ದಲಿತರಿಗಾಗಿ ಪ್ರಸಾದ ನಿಲಯ, ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದರು. ಶ್ರೀಗಳು ಸರಳ ಸಜ್ಜನಿಕೆಯ ಗುರುಗಳಾಗಿ ನಿರಂತರ ಕಾಯಕ ಪರಿಶ್ರಮ ಜೀವಿಯಾಗಿ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಿ, ಬಸವ ತತ್ವವನ್ನು ದೇಶದ ಹಳ್ಳಿ ಹಳ್ಳಿಗೆ ಮುಟ್ಟಿಸುವ ಶ್ರೇಷ್ಠ ಕಾರ್ಯ ಮಾಡಿದ್ದಾರೆ ಎಂದು ಹೇಳಿದರು.

ಬಸವಕಲ್ಯಾಣ ಅನುಭವ ಮಂಟಪದ ಸಂಗಮೇಶ್ವರ ದೇವರು ಮಾತನಾಡಿ, ಮಾನವನ ಜೀವನವು ಜ್ಞಾನ ಹಾಗೂ ಪ್ರೀತಿಯನ್ನು ಒಳಗೊಂಡು ನಡೆಯುವ ಉದ್ದೇಶ ಹೊಂದಿರಬೇಕು. ಬಸವಣ್ಣನವರು ಮಾನವಕುಲಕ್ಕೆ ಆಧ್ಯಾತ್ಮಿಕ ಜ್ಞಾನ ಕೊಡಲು ಅನುಭವ ಮಂಟಪವನ್ನು ಆಧ್ಯಾತ್ಮಿಕ ಕೇಂದ್ರವನ್ನಾಗಿ ಸ್ಥಾಪಿಸಿದ್ದಾರೆ. ಇಂದು ಮಾನವ ಬದುಕಿನ ನಿಜವಾದ ಅರಿವು ತಿಳಿಯದೇ ನಶ್ವರದ ಬದುಕಿನಡೆಗೆ ಸಾಗುತ್ತಿದ್ದಾನೆ. ಪರಮ ಸತ್ಯದ ಶೋಧನೆ ಮಾಡಿದಾಗ ಮಾತ್ರ ಮಾನವನಿಗೆ ಪರಮ ಶಾಂತಿ ದೊರಕುತ್ತದೆ. ಜೀವನದ ಅಂತಿಮ ಗುರಿಯು ಜ್ಞಾನ ಸಂಪಾದನೆ ಆಗಬೇಕು ಎಂದರು. 12ನೇ ಶತಮಾನದಲ್ಲಿ ಕಾಶ್ಮೀರದ ಮಹಾದೇವ ಭೂಪಾಲ, ಸತ್ಯ ದರ್ಶನಕ್ಕಾಗಿ ಅಧಿಕಾರ ರಾಜ್ಯವೈಭವನ್ನು ಬಿಟ್ಟು ಆತ್ಮ ಸಾಕ್ಷಾತ್ಕಾರಕ್ಕಾಗಿ ಕಲ್ಯಾಣದೆಡೆಗೆ ಬಂದು, ಶರಣ ಸಮೂಹದಲ್ಲಿ ಕಟ್ಟಿಗೆ ಕಾಯಕ ಮಾಡಿ ಪರಮ ಸುಖ ಪಡೆದಿದ್ದಾರೆ ಎಂದು ಹೇಳಿದರು.

ಡಾ| ಬಸವಲಿಂಗ ಪಟ್ಟದ್ದೇವರು ಆಶೀರ್ವಚನ ನೀಡಿ, ವ್ಯಕ್ತಿ ಬದುಕು ಸಮತೋಲನ ಮಾಡಿಕೊಳ್ಳಬೇಕಾದರೆ ನಿರಂತರವಾಗಿ ಶಿವಜ್ಞಾನ, ಶಿವಧ್ಯಾನ ಮಾಡಲು ಹಾತೊರೆಯಬೇಕು. ಶರಣರ ಸಂತರ ಅನುಭಾವ ಪಡೆದು ಆಧ್ಯಾತ್ಮಿಕತೆ ಕಡೆಗೆ ಸಾಗಬೇಕು. ದೈವಿಶಕ್ತಿ ಪಡೆದುಕೊಳ್ಳಲು ಪ್ರಕೃತಿಯಲ್ಲಿ ಪರಮಾತ್ಮನ ತರಂಗಗಳು ವಿಶ್ವ ತುಂಬೆಲ್ಲ ಹರಡಿರುತ್ತವೆ. ವ್ಯಕ್ತಿಯು ಬಾಹ್ಯ ಪ್ರಪಂಚದಿಂದ ಹೊರ ಬಂದು ವ್ಯಕ್ತಿ ಅಂತರ್ಮುಖೀಯಾದಾಗ ಮಾತ್ರ ವ್ಯಕ್ತಿಗೆ ಪರಮಾನಂದ ಪರಮ ಸುಖ ದೊರಕುತ್ತದೆ ಎಂದು ನುಡಿದರು.

ಸಿದ್ಧಗಂಗಾ ಶಾಲೆಯ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಬೀದರ ಜಿಲ್ಲಾ ಅಧ್ಯಕ್ಷ ಶಿವಕುಮಾರ ಪಾಟೀಲ ತೆಗಂಪೂರ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ಕರಂಜೆ, ಗುರುಬಸವ ಪಟ್ಟದ್ದೇವರು, ಮಹಾಲಿಂಗ ಮಹಾಸ್ವಾಮೀಜಿ, ಬಸವಲಿಂಗ ದೇವರು, ಕೋನಮೇಳಕುಂದದ ಗ್ರಾಮ ಪಂಚಾಯತ ಅಧ್ಯಕ್ಷ ಶಶಿಧರ ಕೋಸಂಬೆ, ಪ್ರೊ| ಎಸ್‌.ಬಿ.ಬಿರಾದಾರ, ವಿದ್ಯಾವತಿ ಬಸವರಾಜ ಉಂಡೆ ಇತರರು ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.