ಮಟನ್‌ ಸ್ಟಾಲ್‌ಗ‌ೂ ವ್ಯಾಪಿಸಿದ ಪ್ರಾಣಿ ಮಾಂಸ ಮಾರಾಟ ಜಾಲ?


Team Udayavani, Jan 14, 2019, 10:53 AM IST

shiv-1.jpg

ಶಿವಮೊಗ್ಗ: ಕಾಡುಪ್ರಾಣಿಗಳ ಬೇಟೆಯಾಡಿ ಮಾಂಸ ಮಾರಾಟ ಮಾಡುವ ಜಾಲ ನಗರದ ಮಟನ್‌ ಸ್ಟಾಲ್‌ವರೆಗೂ ವ್ಯಾಪಿಸಿದೆ. ಈಚೆಗೆ ಶಿವಮೊಗ್ಗದ ನ್ಯೂ ಮಂಡ್ಲಿ ಸುಲ್ತಾನ್‌ ಮೊಹಲ್ಲಾದ ಮಟನ್‌ ಸ್ಟಾಲ್‌ನಲ್ಲಿ ಜಿಂಕೆ ಮಾಂಸ ಮಾರಾಟ ಪ್ರಕರಣವು ದಂಧೆಯ ಕರಾಳತೆಯನ್ನು ಅನಾವರಣ ಮಾಡಿದೆ.

ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಗಡಿಸರದಲ್ಲಿ ಬೇಟೆಯಾಡಿದ ಜಿಂಕೆಯನ್ನು ಯಾವುದೇ ಅಡೆತಡೆ ಇಲ್ಲದೆ, ಯಾರದೆ ಸಹಕಾರ ಇಲ್ಲದೆ ಕುರಿ ಮತ್ತು ಮೇಕೆ ರೀತಿಯಲ್ಲಿ ಶಿವಮೊಗ್ಗದವರೆಗೆ ಸಾಗಿಸುವುದು ಸುಲಭದ ಮಾತಲ್ಲ. ಈ ಹಾದಿಯಲ್ಲಿ ಗಾಜನೂರು ಬಳಿ ಇರುವ ಅರಣ್ಯ ಇಲಾಖೆ ಚೆಕ್‌ಪೋಸ್ಟನ್ನೂ ದಾಟಿ ಬಂದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರ ಹಿಂದೆ ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರವೂ ಇದೆ ಎಂಬ ಆಪಾದನೆಗಳು ಕೇಳಿಬಂದಿವೆ. 20 ದಿನದ ಹಿಂದೆ ರಂಗೇನಹಳ್ಳಿಯಿಂದ ನಗರಕ್ಕೆ ಬಂದ ಕಾಡುಕುರಿ ಮಾಂಸ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕರೂ ಪ್ರಕರಣ ದಾಖಲಾಗಲಿಲ್ಲ. 15 ದಿನದ ಹಿಂದೆ ಮಂಡಗದ್ದೆಯಿಂದ ಬಂದ ಜಿಂಕೆ ಮಾಂಸ ಪ್ರಕರಣವೂ ಇದೇ ರೀತಿಯಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಒಂದು ಕಾಲದಲ್ಲಿ ಅರಣ್ಯದೊಳಗಿನ ಗ್ರಾಮಗಳಲ್ಲಿ ಬೀಗರ ಊಟ, ಹಬ್ಬದಲ್ಲಿ ಜಿಂಕೆ, ಕಡವೆ, ಕಾಡುಕುರಿ, ಕಾಡುಹಂದಿ ಮುಂತಾದ ವನ್ಯಜೀವಿಗಳೇ ಮಾಂಸದೂಟಕ್ಕೆ ಬಳಕೆಯಾಗುತ್ತಿದ್ದವು. ಕಾನೂನು ಬಿಗಿಗೊಂಡು ಜನರು ಪೆಟ್ಟು ತಿಂದ ಬಳಿಕ ಮತ್ತು ಗ್ರಾಮೀಣರಲ್ಲಿ ಬೇಟೆಯಾಡುವ ಪ್ರವೃತ್ತಿಯವರು ಕಡಿಮೆಯಾದ ಬಳಿಕ ಮಾಂಸಕ್ಕಾಗಿ ಕುರಿ ಮತ್ತು ಮೇಕೆಗಳಿಗೆ ಮೊರೆ ಹೋಗಿದ್ದಾರೆ. ಅದಾದ ಬಳಿಕ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ, ನಗರ ಪ್ರದೇಶದಲ್ಲಿ ಕುರಿ, ಮೇಕೆ ಮಾಂಸ ತಿನ್ನುತ್ತಿದ್ದವರು ವನ್ಯಜೀವಿಗಳ ಮಾಂಸದ ಚಪಲ ಹತ್ತಿಸಿಕೊಂಡು ದಂಧೆಗೆ ಪರೋಕ್ಷವಾಗಿ ಪ್ರೋತ್ಸಾಹ ನೀಡುತ್ತಿದ್ದಾರೆ. ಇದರಿಂದಾಗಿ ವನ್ಯಜೀವಿಗಳ ಬೇಟೆ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಮತ್ತೆ ಹೆಚ್ಚಾಗಿದೆ.

ಶಿವಮೊಗ್ಗದ ಕೆಲ ಹೊಟೇಲ್‌ಗ‌ಳಿಗೂ ಮಂಡಗದ್ದೆ ವಲಯ, ಶಿವಮೊಗ್ಗ ತಾಲೂಕು ಹಾಲ್‌ಲಕ್ಕವಳ್ಳಿ, ಕಡೇಕಲ್‌ ಹಾಗೂ ತರೀಕೆರೆ ತಾಲೂಕು ಲಕ್ಕವಳ್ಳಿ, ರಂಗೇನಹಳ್ಳಿ ಭಾಗದಿಂದ ವನ್ಯಜೀವಿಗಳ ಮಾಂಸ ಪೂರೈಕೆಯಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಡಿನೊಳಗೆ ವನ್ಯಜೀವಿಗಳ ಓಡಾಟ ಹೆಚ್ಚಿರುವ ಕಡೆ ಮರದ ಮೇಲೆ ಅಟ್ಟಣಿಗೆಗಳನ್ನು ನಿರ್ಮಿಸಿಕೊಂಡು ಅತ್ಯಾಧುನಿಕ ಬಂದೂಕುಗಳನ್ನು ಬಳಸಿ ಬೇಟೆಯಾಡಲಾಗುತ್ತಿದೆ. ಕೆಲವೆಡೆ ಪ್ರಖರ ಬೆಳಕು ಬೀರುವ ಸರ್ಚ್‌ಲೈಟ್‌ಗಳನ್ನು ಬಳಸಿ ಬೇಟೆಯಾಡಲಾಗುತ್ತದೆ. ಜಲಾಶಯ, ನದಿ, ಹಳ್ಳಗಳ ಬಳಿ ನೀರು ಕುಡಿಯಲು ಬರುವ ಜಾಗವನ್ನೂ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಮತ್ತೆ ಕೆಲವೆಡೆ ಕಾಡಿನೊಳಗೆ ಉರುಳು ಹಾಕಿ ಪ್ರಾಣಿಗಳನ್ನು ಹಿಡಿಯಲಾಗುತ್ತಿದೆ ಎಂದು ಹೇಳಲಾಗಿದೆ.

ಮೊನ್ನೆ ಜಿಂಕೆ ಮಾಂಸದ ಸಮೇತ ಸಿಕ್ಕಿಬಿದ್ದ ಸಿರಾಜ್‌ ವನ್ಯಜೀವಿಗಳ ಬೇಟೆಯನ್ನು ವೃತ್ತಿಯಾಗಿಸಿಕೊಂಡವನೆಂಬ ಆಪಾದನೆ ಇದೆ. ಮಂಡಗದ್ದೆ ಮತ್ತು ಸಕ್ರೆಬೈಲು ಅರಣ್ಯ ವಲಯದಲ್ಲಿ ವನ್ಯಜೀವಿಗಳ ಬೇಟೆಗೆ ಸಂಬಂಧಿಸಿದಂತೆ ಒಬ್ಬನೇ ವ್ಯಕ್ತಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈಗ ಸಿಕ್ಕಿಬಿದ್ದಿರುವ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಲ್ಲಿ ವನ್ಯಜೀವಿಗಳ ಮಾಂಸ ಮಾರಾಟದ ಹಿಂದಿನ ದಂಧೆ ಬಯಲಿಗೆಳೆಯಬಹುದು ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಮಂಡಗದ್ದೆ ಸಮೀಪದ ಗ್ರಾಮಸ್ಥರೊಬ್ಬರು ಪತ್ರಿಕೆಗೆ ತಿಳಿಸಿದರು.

ಚೆಕ್‌ಪೋಸ್ಟ್‌ ಸ್ಥಾಪನೆ
ಘಟನೆ ನಂತರ ಎಚ್ಚೆತ್ತ ಅರಣ್ಯ ಇಲಾಖೆ ಎರಡು ಕಡೆ ಚೆಕ್‌ಪೋಸ್ಟ್‌ ತೆರೆದಿದೆ. ಅತಿ ಹೆಚ್ಚು ಆರೋಪವಿರುವ ತೀರ್ಥಹಳ್ಳಿ ರಸ್ತೆಯ ಸಕ್ರೆಬೈಲು ಆನೆ ಬಿಡಾರದ ಬಳಿ ಪೊಲೀಸ್‌ ಇಲಾಖೆ ವತಿಯಿಂದ ಒಂದು ಚೆಕ್‌ಪೋಸ್ಟ್‌ ತೆರೆದಿದೆ. ಗಾಜನೂರು ಬಳಿ ಅರಣ್ಯ ಇಲಾಖೆ ಮತ್ತೂಂದು ಚೆಕ್‌ಪೋಸ್ಟ್‌ ತೆರೆದು ವಾಹನಗಳ ತಪಾಸಣೆ ನಡೆಸುತ್ತಿವೆ.

ಜಿಂಕೆ, ಕಡವೆ, ಮೊಲಗಳ ಮಾಂಸವನ್ನು ಪೂರೈಕೆ ಮಾಡುವ ದೊಡ್ಡ ಜಾಲವೇ ಮಂಡಗದ್ದೆ ಆಸುಪಾಸಿನಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ನಗರದ ಪ್ರದೇಶದಲ್ಲಿ ಒಳ್ಳೆ ಬೇಡಿಕೆ ಇದೆ. ಇದು ಅಪರಾಧ ಎಂದು ಗೊತ್ತಿದ್ದರೂ ತಿನ್ನುವವರ ಸಂಖ್ಯೆ ಹೆಚ್ಚಿರುವುದರಿಂದ ಲಾಭಕ್ಕಾಗಿ ಬೇಟೆಯಾಡುವವರ ಸಂಖ್ಯೆ ಹೆಚ್ಚಿದೆ.
ನಾಗರಾಜ್‌, ಮಂಡಗದ್ದೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.