ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿ


Team Udayavani, Jan 14, 2019, 11:01 AM IST

vij-1.jpg

ವಿಜಯಪುರ: ಕರ್ನಾಟಕದಲ್ಲಿ ಅಧಿಕ ಪ್ರಮಾಣದಲ್ಲಿ ಬೆಳೆದು ಬಳಸುತ್ತಿರುವ ರಾಗಿ ಕೂಡ ದಕ್ಷಿಣ ಆಫ್ರಿಕಾ ಮೂಲದ್ದು. ಆಫ್ರಿಕಾ ದೇಶದಲ್ಲಿ ಇಂದಿಗೂ ರಾಗಿ ಸೇರಿದಂತೆ ಇತರೆ ಸಿರಿಧಾನ್ಯಗಳನ್ನು ಯಥೇಚ್ಛವಾಗಿ ಬೆಳೆಯುವ ಜೊತೆಗೆ, ಬಳಕೆಯನ್ನೂ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಮೂಲದ ಸಿರಿಧಾನ್ಯ ಹಾಗೂ ದೇಶಿ ಬೀಜ ಸಂರಕ್ಷಕ ಈಶ್ವರನ್‌ ಹೇಳಿದರು.

ರವಿವಾರ ನಗರದ ಎಸ್‌.ಎಸ್‌. ಮೈದಾನದಲ್ಲಿ ಹಮ್ಮಿಕೊಂಡಿರುವ ಸಾವಯವ ಕೃಷಿ ಮತ್ತು ಸಿರಿಧಾನ್ಯ ಮೇಳದಲ್ಲಿ ರೈತರ ಸಂವಾದದಲ್ಲಿ ಅವರು ಮಾತನಾಡಿದರು.

ಸಿರಿಧಾನ್ಯಗಳಿಗೆ ಪ್ರಾಚೀನ‌ ಇತಿಹಾಸವಿದ್ದು, ಚೀನಿ ಯಾತ್ರಿಕ ಹ್ಯೂಯಾನ್ಸ್‌ ತ್ಸಾಂಗ್‌ ಭೇಟಿ ನೀಡಿದ ಸಂದರ್ಭದಲ್ಲಿ ಸಿರಿಧಾನ್ಯಗಳ ಸಂಗ್ರಹಣೆಗೆ ದೊಡ್ಡ ಉಗ್ರಾಣಗಳಿರುವ ಬಗ್ಗೆ ಉಲ್ಲೇಖೀಸಿದ್ದಾರೆ. ಎರಡು ಸಾವಿರ ವರ್ಷಗಳ ಹಿಂದೆ ಅಲೆಕ್ಸಾಂಡರ್‌ ಭಾರತಕ್ಕೆ ಬಂದಿದ್ದ ಸಂದರ್ಭದಲ್ಲಿ ಉತ್ತರ ಭಾರತದಲ್ಲಿ ಬಾರ್ಲಿ ಅಕ್ಕಿ, ದಕ್ಷಿಣ ಭಾರತದಲ್ಲಿ ರಾಗಿ, ನವಣೆ ಬಳಕೆಯಲ್ಲಿದ್ದ ಮಾಹಿತಿ ಸಂಗ್ರಹಿಸಿ ಇದರಲ್ಲೇ ಭಾರತೀಯರ ಆರೋಗ್ಯದ ಗುಟ್ಟು ಅಡಗಿದೆ ಎಂದು ಮನಗಂಡಿದ್ದ. ಬಸವಾದಿ ಶರಣರ ಕಾಲದಲ್ಲಿ ಕೂಡ ಸಿರಿಧಾನ್ಯ ಸಮೃದ್ಧ ಬಳಕೆಯಲ್ಲಿತ್ತು ಎಂಬುದು ಸೊನ್ನಲಿಗೆ ಸಿದ್ದರಾಮ ಸೇರಿದಂತೆ ಇತರೆ ಶರಣರ ವಚನಗಳಲ್ಲಿ ಉಲ್ಲೇಖವಿದೆ. ಸರ್ವಜ್ಞನ ವಚನಗಳಲ್ಲಿ ಕೂಡ ಸಿರಿಧಾನ್ಯಗಳ ಕುರಿತು ಉಲ್ಲೇಖ ಮಾಡಿರುವುದು ಸಿರಿಧಾನ್ಯಗಳ ಮಹತ್ವವನ್ನು ಸಾರುತ್ತದೆ ಎಂದರು.

ಸಿರಿಧಾನ್ಯ ಆಹಾರೋತ್ಪನ್ನಗಳ ಉದ್ಯಮಿ ಮಲ್ಲಿಕಾರ್ಜುನ ಹಟ್ಟಿ ಮಾತನಾಡಿ, ರೈತರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಶ್ರೀಮಂತರಾಗುವ ದಿನಗಳು ದೂರವಿಲ್ಲ. ಸಿರಿಧಾನ್ಯಗಳನ್ನು ಬೆಳೆಯುವುದನ್ನು ಕೈ ಬಿಟ್ಟ ಪರಿಣಾಮವಾಗಿಯೇ ಸಿರಿಧಾನ್ಯಗಳ ಬೆಲೆ ಏರಿಕೆಯಾಗಿದೆ. ಸಿರಿಧಾನ್ಯಗಳನ್ನೇ ಬಳಸಿದ ನಮ್ಮ ಪೂರ್ವಜರು ರಕ್ತದೊತ್ತಡ, ಸಕ್ಕರೆ ಕಾಯಿಲೆಗಳಂಥ ರೋಗಗಳಿಂದ ಮುಕ್ತರಾಗಿದ್ದರು. ನಮ್ಮ ಹಿರಿಯರ ದೀರ್ಘಾಯುಷ್ಯದ ಗುಟ್ಟು ಕೂಡ ಸಿರಿಧಾನ್ಯಗಳ ಬಳಕೆಯಲ್ಲೇ ಅಡಗಿತ್ತು. ಆದರೆ ಸಿರಿಧಾನ್ಯಗಳ ಹೊರತಾದ ವಿಷಯುಕ್ತ ಆಹಾರ ಸೇವಿಸಿ ನಮ್ಮ ಬಾಧಿಸುವ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆ ಹೆಚ್ಚುವುದನ್ನು ಅಭಿವೃದ್ಧಿ ಎನ್ನುತ್ತಿದ್ದೇನೆ ವಿಶ್ಲೇಷಣೆ ಮಾಡುತ್ತಿರುವುದು ವ್ಯವಸ್ಥೆಯ ವಿಪರ್ಯಾಸ ಎಂದರು.

ಅಮೆರಿಕ ಮೊದಲಾದ ರಾಷ್ಟ್ರಗಳಲ್ಲಿ ರೈತರಿಗೆ ಒಂದು-ಎರಡು ಎಕರೆ ಜಮೀನು ಸಹ ಇಲ್ಲ, ಅಲ್ಲಿ ಕೇವಲ ಹಿಮ, ಇಲ್ಲವೇ ಬರಡು. ನೀರಿನ ಸಂಪನ್ಮೂಲ ಸಹ ಕಡಿಮೆ. ಆದರೆ ನಮ್ಮಲ್ಲಿ ಯಥೇಚ್ಛವಾದ ಭೂಮಿ, ಜಲ, ಬಿಸಿಲು ಸೇರದಂತೆ ಹಲವು ನೈಸರ್ಗಿಕ ಸಂಪನ್ಮೂಲಗಳಿದ್ದರೂ ಸದ್ಭಳಕೆಯಲ್ಲಿ ವಿಫಲರಾಗಿದ್ದೇವೆ. ಪರಿಣಾಮ ಕೃಷಿ ಕ್ಷೇತ್ರಕ್ಕೆ ಪ್ರಸಕ್ತ ಸಂದರ್ಭದಲ್ಲಿ ಹೆಚ್ಚಿನ ಸವಾಲು ಎದುರಿಸುವಂತಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿದಾಗ ಮಾತ್ರ ಕೃಷಿಯಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದರು.

ಸಿರಿಧಾನ್ಯಗಳು ನರದೌರ್ಬಲ್ಯ ನಿವಾರಣೆ, ಶ್ವಾಸಕೋಶ ತೊಂದರೆ, ಮಧುಮೇಹ, ಸಂಧಿವಾತ, ಮುಷ್ಠಿರೋಗ, ಕಾಮಾಲೆ ಸೇರಿದಂತೆ ನೂರಾರು ರೋಗಗಳಿಗೆ ರಾಮಬಾಣವಾಗಿವೆ, ಸಿರಿಧಾನ್ಯಗಳಲ್ಲಿ ನಾರಿನಾಂಶವೇ ಅಧಿಕವಾಗಿರುವುದರಿಂದ ದೇಹಕ್ಕೆ ಅತ್ಯಂತ ಅನುಕೂಲ ಎಂದು ಪಿಪಿಪಿ ಮೂಲಕ ವಿವರಣೆ ನೀಡಿದರು.

ಪ್ರಗತಿಪರ ರೈತ ಬಸನಗೌಡ ಕನಕರೆಡ್ಡಿ ಮಾತನಾಡಿ, ಸಾವಯವ ಕೃಷಿಯ ತಮ್ಮ ಅನುಭವವನ್ನು ಹಂಚಿಕೊಂಡರು. ಮುಂದಿನ ಪೀಳಿಗೆಗೆ ಸತ್ವಯುತ ಭೂಮಿಯನ್ನು ಬಿಟ್ಟು ಕೊಡಬೇಕಾಗಿರುವುದು ಅನಿವಾರ್ಯವಾಗಿದೆ. ಜಮೀನಿನ ಅರ್ಧ ಭಾಗದಲ್ಲಿ ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಿ, ಆರೋಗ್ಯವನ್ನು ಕಾಪಾಡಿಕೊಂಡು ಅಂಗೈಯಲ್ಲಿ ಆರೋಗ್ಯ ಎಂಬ ಸೂತ್ರವನ್ನು ಅನುಷ್ಠಾನಕ್ಕೆ ತರಬೇಕು ಎಂದು ಕರೆ ನೀಡಿದರು.

ಪ್ರಗತಿಪರ ರೈತರಾದ ಸಿದ್ದಣ್ಣ ಬಾಲಗೊಂಡ, ರಾಜಶೇಖರ ನಿಂಬರಗಿ, ಮಲ್ಲಿಕಾರ್ಜುನ ಹಟ್ಟಿ, ಭೂಸಗೊಂಡ ಮಾತನಾಡಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ| ಶಿವಕುಮಾರ ಪ್ರಾಸ್ತಾವಿಕ ಮಾತನಾಡಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.