ಸೈನಿಕರ ಹನಿಟ್ರ್ಯಾಪ್‌ ಪ್ರಕರಣ: ಮಾನಸಿಕ ತರಬೇತಿ ಅಗತ್ಯ 


Team Udayavani, Jan 15, 2019, 12:30 AM IST

honey-trap-case-222.jpg

ಸೇನೆಯ ಮಾಹಿತಿ ಲಪಟಾಯಿಸಲು ಮಹಿಳೆಯರನ್ನು ಬಳಸುವುದು ಪುರಾತನ ತಂತ್ರ. ಸೋಷಿಯಲ್‌ ಮೀಡಿಯಾ ಯುಗದಲ್ಲೀಗ ಈ ತಂತ್ರ ಹೊಸ ರೀತಿಯಲ್ಲಿ ಬಳಕೆಯಾಗುತ್ತಿದೆ. ಪಾಕಿಸ್ತಾನದ ಬೇಹುಪಡೆ ಐಎಸ್‌ಐ ಭಾರತದ ಸೇನೆಯ ರಹಸ್ಯಗಳನ್ನು ತಿಳಿದುಕೊಳ್ಳಲು ಸಾಮಾಜಿಕ ಮಾಧ್ಯಮಗಳ ನೆರವಿನಿಂದ ಹನಿಟ್ರ್ಯಾಪ್‌ ಮಾಡಿದ ಹಲವು ಘಟನೆಗಳು ಸಂಭವಿಸಿವೆ.ಅದಕ್ಕೆ ಹೊಸ ಸೇರ್ಪಡೆ ಇದೀಗ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಬೆಳಕಿಗೆ ಬಂದ ಘಟನೆ. ಸೇನಾ ಶಿಬಿರದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಪಾಯಿಯೊಬ್ಬರನ್ನು ಯುವತಿಯ ಹೆಸರಿನಲ್ಲಿ ತೆರೆಯಲಾದ ಫೇಸ್‌ಬುಕ್‌ ಮೂಲಕ ಬುಟ್ಟಿಗೆ ಹಾಕಿಕೊಂಡು ಅವರಿಂದ ಸೇನೆಗೆ ಸಂಬಂಧಿಸಿದ ಹಲವು ರಹಸ್ಯ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ. ಇದೇ ರೀತಿ 50 ಸೈನಿಕರನ್ನು ಹನಿಟ್ರ್ಯಾಪ್‌ ಜಾಲಕ್ಕೆ ಕೆಡಹಲಾಗಿದೆ ಎನ್ನುವುದು ಕಳವಳಕಾರಿ ಸಂಗತಿ. 

ಭಾರತವನ್ನು ನೇರ ಯುದ್ಧದಲ್ಲಿ ಸೋಲಿಸುವ ಸಾಮರ್ಥ್ಯವಿಲ್ಲದ ಪಾಕಿಸ್ತಾನ ಆಗಾಗ ಇಂಥ ಕುಟಿಲ ತಂತ್ರಗಳನ್ನು ನಡೆಸುತ್ತಿರುತ್ತದೆ. ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌, ಇನ್‌ಸ್ಟಾಗ್ರಾಂನಂಥ ಸಾಮಾಜಿಕ ಮಾಧ್ಯಮಗಳನ್ನು ಅದು ಈ ಉದ್ದೇಶಕ್ಕೆ ಬಳಸಿಕೊಳ್ಳುತ್ತದೆ. ಆಕರ್ಷಕ ಹೆಸರಿನಲ್ಲಿ ಖಾತೆಗಳನ್ನು ತೆರೆದು ಸೈನಿಕರು ಮತ್ತು ಸೇನಾಧಿಕಾರಿಗಳ ಸ್ನೇಹ ಸಂಪಾದಿಸಿ ಅವರನ್ನು ಮೋಹದ ಬಲೆಯಲ್ಲಿ ಕೆಡವಿ ರಹಸ್ಯ ಮಾಹಿತಿಗಳನ್ನು ಲಪಟಾಯಿಸಿದ ಹಲವು ಪ್ರಕರಣಗಳನ್ನು ಬಯಲಿ ಗೆಳೆ ಯಲಾಗಿದೆ. ವಾಯುಪಡೆಯ ಗ್ರೂಪ್‌ ಕ್ಯಾಪ್ಟನ್‌, ವಾಯುಪಡೆಯ ಉನ್ನತಾಧಿಕಾರಿಯನ್ನೇ ಐಎಸ್‌ಐ ಹನಿಟ್ರ್ಯಾಪ್‌ ಬಲೆಗೆ ಕೆಡವಿದೆ ಎಂದಮೇಲೆ ಸಾಮಾನ್ಯ ಸೈನಿಕರು ಈ ಜಾಲಕ್ಕೆ ಬೀಳುವುದರಲ್ಲಿ ಆಶ್ಚರ್ಯವಿಲ್ಲ. ಇಂಥ ಹಲವು ಪ್ರಕರಣಗಳು ಸಂಂಭವಿಸಿದ ಬಳಿಕ ಸೇನೆ ಸಾಮಾಜಿಕ ಮಾಧ್ಯಮಗಳ ಬಳಕೆಗೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸುವುದಾಗಿ ಹೇಳಿತ್ತು. ಆದರೆ ಈ ನಿಯಮಗಳಿನ್ನೂ ಜಾರಿಗೆ ಬಂದಿರುವಂತೆ ಕಾಣಿಸುವುದಿಲ್ಲ. ಒಂದು ವೇಳೆ ಜಾರಿಯಾಗಿದ್ದರೆ ಮತ್ತೆ ಅದೇ ಮಾದರಿಯ ಘಟನೆ ಸಂಭವಿ ಸುತ್ತಿರಲಿಲ್ಲ. 

ಪಾಕಿಸ್ತಾನದ ಸ್ಥಿತಿಯೀಗ ತೀರಾ ಹದಗೆಟ್ಟಿದೆ. ಆರ್ಥಿಕವಾಗಿ ದಿವಾಳಿಯಾಗಿರುವ ಆ ದೇಶಕ್ಕೆ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಏನಾದರೂ ಮಾಡುವ ಅನಿವಾರ್ಯತೆ ಇದೆ. ಕಾಶ್ಮೀರಕ್ಕೆ ಉಗ್ರರನ್ನು ನುಗ್ಗಿಸುವುದು, ಅಫ್ಘಾನಿಸ್ಥಾನದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದೆಲ್ಲ ಪಾಕ್‌ ಸೇನೆಯು ಜನರ ಗಮನ ತಿರುಗಿಸಲು ಮಾಡುತ್ತಿರುವ ತಂತ್ರಗಳು. 

ಕೆಲ ಸಮಯದ ಹಿಂದೆ ಇಸ್ರೇಲ್‌ ಕೂಡಾ ಇದೇ ಮಾದರಿಯ ಸಮಸ್ಯೆಯನ್ನು ಎದುರಿಸಿತ್ತು. ಹಲವಾರು ಇಸ್ರೇಲ್‌ ಸೈನಿಕರನ್ನು ಹನಿಟ್ರ್ಯಾಪ್‌ ಮೋಹದಲ್ಲಿ ಸಿಲುಕಿಸಿ ಅವರಿಂದ ಮಾಹಿತಿ ಲಪಟಾಯಿಸುವ ಪ್ರಯತ್ನ ಮಾಡಲಾಗಿತ್ತು. ಹನಿಟ್ರ್ಯಾಪ್‌ಗೆ ಸಿಲುಕಿದ ಸೈನಿಕರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಗೊಂದಲದಿಂದಾಗಿ ಅವರ ಸಾಮರ್ಥ್ಯ ಕುಂಠಿತವಾಗಿತ್ತು. ಇದು ಬೆಳಕಿಗೆ ಬಂದ ತಕ್ಷಣವೇ ಎಚ್ಚೆತ್ತ ಅಲ್ಲಿನ ಸರಕಾರ ಸೋಷಿಯಲ್‌ ಮೀಡಿಯಾ ಬಳಕೆ ಮೇಲೆ ಹಲವು ನಿರ್ಬಂಧಗಳನ್ನು ಹೇರಿತು. ಹನಿಟ್ರ್ಯಾಪ್‌ಗೊಳಗಾಗಿದ್ದ ಸೈನಿಕರಿಗೆ ಕೌನ್ಸೆಲಿಂಗ್‌ ಮಾಡಿ ಅವರನ್ನು ಸರಿಪಡಿಸಲಾಯಿತು. ಈ ರೀತಿಯಾಗಿ ವಿರೋಧಿಗಳು ಹೆಣೆದಿದ್ದ ಷಡ್ಯಂತ್ರವನ್ನು ಇಸ್ರೇಲ್‌ ವಿಫ‌ಲಗೊಳಿಸಿತು. ಭಾರತದ ಸೇನೆ ಕೂಡಾ ಸೈನಿಕರು ಹನಿಟ್ರ್ಯಾಪ್‌ಗೊಳಗಾಗುವುದನ್ನು ತಪ್ಪಿಸಲು ಇಸ್ರೇಲ್‌ ಮಾದರಿಯನ್ನು ಅಧ್ಯಯನ ಮಾಡುವುದೊಳ್ಳೆಯದು. 

ಒಬ್ಬ ಸೈನಿಕ ಅಥವಾ ಸೇನಾಧಿಕಾರಿ ಹನಿಟ್ರ್ಯಾಪ್‌ ಜಾಲಕ್ಕೆ ಬಿದ್ದರೆ ಅದು ಅವನಿಗೆ ವೈಯಕ್ತಿಕವಾಗಿ ಸಮಸ್ಯೆ ತಂದೊಡ್ಡುವುದು ಮಾತ್ರವಲ್ಲದೆ ದೇಶಕ್ಕೂ ಅಪಾಯಕಾರಿಯಾಗಿ ಪರಿಣಮಿಸುತ್ತದೆ.ಅದರಲ್ಲೂ ಪಾಕಿಸ್ತಾನ ಸೇನೆಯ ಆಯಕಟ್ಟಿನ ಸ್ಥಳ ಮತ್ತು ಹುದ್ದೆಯಲ್ಲಿರುವ ವ್ಯಕ್ತಿಗಳನ್ನೇ ಆಯ್ದು ಹನಿಟ್ರ್ಯಾಪ್‌ಗೆ ಬೀಳಿಸುತ್ತಿರುವುದರ ಹಿಂದಿನ ಉದ್ದೇಶ ಸ್ಪಷ್ಟವಾಗಿ ತಿಳಿಯುತ್ತದೆ. 

ಯುದ್ಧಾಸ್ತ್ರಗಳು, ಸೇನೆ ನಿಯೋಜನೆ ಈ ಮುಂತಾದ ಸೂಕ್ಷ್ಮ ವಿಷಯಗಳನ್ನು ತಿಳಿದುಕೊಳ್ಳುವ ಸಲುವಾಗಿಯೇ ಪಾಕ್‌ ಐಎಸ್‌ಐ ಹನಿಟ್ರ್ಯಾಪ್‌ ಜಾಲವನ್ನು ಬಳಸಿಕೊಳ್ಳುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ನಮ್ಮ ಸೇನೆ ಕಟ್ಟೆಚ್ಚರದಲ್ಲಿರುವುದು ಅಗತ್ಯ. ಒಂದು ರೀತಿಯಲ್ಲಿ ಇದು ಪಾಕಿಸ್ತಾನ ನಮ್ಮ ವಿರುದ್ಧ ನಡೆಸುತ್ತಿರುವ ಸೈಬರ್‌ವಾರ್‌. ಇದನ್ನು ಇದೇ ತಂತ್ರದಿಂದ ಎದುರಿಸುವ ಮಾರ್ಗವನ್ನು ಕಂಡುಕೊಳ್ಳಬೇಕು. 

ಇದಕ್ಕಿಂತಲೂ ಮಿಗಿಲಾಗಿ ಶತ್ರುಗಳ ಇಂಥ ಅಗ್ಗದ ತಂತ್ರಗಳಿಗೆ ಬಲಿಬೀಳದಂಥ ಮನೋದಾಡ್ಯìವನ್ನು ಬೆಳೆಸಿಕೊಳ್ಳುವಂಥ ತರಬೇತಿಯನ್ನು ಸೈನಿಕರಿಗೆ ಕೊಡುವ ಅಗತ್ಯವಿದೆ. ಸೇನಾ ತರಬೇತಿ ಸಂದರ್ಭದಲ್ಲಿಯೇ ಸೋಷಿಯಲ್‌ ಮೀಡಿಯಾದ ಮೂಲಕ ನಡೆಯುವ ಯುದ್ಧವನ್ನು ಎದುರಿಸುವುದು ಹೇಗೆ ಎಂದು ಕಲಿಸಬಹುದು.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.