ಉದ್ಘಾಟನೆಗೆ ಸಿದ್ಧಗೊಳ್ಳದ ಇಂದಿರಾ ಕ್ಯಾಂಟೀನ್‌


Team Udayavani, Jan 15, 2019, 5:21 AM IST

15-january-4.jpg

ಸುಳ್ಯ : ಇಂದಿರಾ ಕ್ಯಾಂಟೀನ್‌ ಕಟ್ಟಡ ನಿರ್ಮಾಣ ಕಾಮಗಾರಿ ಮೂರು ತಿಂಗಳ ಹಿಂದೆಯೇ ಅಂತಿಮ ಹಂತಕ್ಕೆ ತಲುಪಿದ್ದರೂ, ಕಾರ್ಯಾರಂಭದ ಲಕ್ಷಣ ಗೋಚರಿಸುತ್ತಿಲ್ಲ.

ಕಟ್ಟಡದ ಜೋಡಣೆ ಕಾರ್ಯವಾಗಿದೆ. ಇನ್ನೂ ಅಂತಿಮ ಹಂತದ ಕಾಮಗಾರಿ ಬಾಕಿ ಇದೆ. ಅದು ಯಾವಾಗ ಪೂರ್ಣಗೊಳ್ಳುವುದು, ಉದ್ಘಾಟನೆಗೊಳ್ಳಲಿದೆ ಎನ್ನುವ ಬಗ್ಗೆ ಯಾವ ಇಲಾಖೆಗಳಿಗೂ ಮಾಹಿತಿ ಇಲ್ಲ.

ಚುನಾವಣೆ ಅಡ್ಡಿ!
ಮಿನಿ ವಿಧಾನಸೌಧದ ಹಿಂಭಾಗದಲ್ಲಿ 5 ಸೆಂಟ್ಸ್‌ ಸ್ಥಳದಲ್ಲಿ 2017ರ ಎಪ್ರಿಲ್‌ ತಿಂಗಳಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ನೆಲ ಸಮತಟ್ಟು, ಅಡಿಪಾಯ ಕಾಮಗಾರಿ ಪೂರ್ಣಗೊಂಡ ವೇಳೆ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿತ್ತು. ನಾಲ್ಕು ತಿಂಗಳ ಕಾಲ ಕಾಮಗಾರಿ ಸ್ಥಗಿತಗೊಂಡಿತ್ತು. ಹೊಸ ಸರಕಾರ ರಚಿಸಿ ನಾಲ್ಕು ತಿಂಗಳ ಅನಂತರ ಕಾಮಗಾರಿ ಮರು ಆರಂಭಗೊಂಡಿತ್ತು.

ರೆಡಿಮೇಡ್‌ ಕಟ್ಟಡ
ತಳಪಾಯ ಕಾಮಗಾರಿಯೊಂದನ್ನು ಹೊರತುಪಡಿಸಿ ಗೋಡೆ, ಛಾವಣಿ ಎಲ್ಲವೂ ರೆಡಿಮೇಡ್‌ ಮಾದರಿಯದ್ದು. ಹೊರ ಭಾಗದಿಂದ ಪರಿಕರ ತರಲಾಗಿದೆ. ಕ್ರೇನ್‌ ಸಹಾಯದಿಂದ ರೆಡಿಮೇಡ್‌ ಗೋಡೆಗಳನ್ನು ಜೋಡಿಸಲಾಗಿದೆ. ಗೋಡೆ ನಿರ್ಮಾಣ ಪೂರ್ಣಗೊಂಡಿದೆ. ಪ್ರವೇಶ ದ್ವಾರದ ಗೋಡೆ ಕಲ್ಲಿನಲ್ಲಿ ಇಂದಿರಾ ಗಾಂಧಿ ಅವರ ಬೃಹತ್‌ ಗಾತ್ರದ ಭಾವಚಿತ್ರವನ್ನು ಅಚ್ಚು ರೂಪದಲ್ಲಿ ಚಿತ್ರಿಸಲಾಗಿದೆ. ಸೆಪ್ಟಂಬರ್‌ನಲ್ಲಿ ಕಾಮಗಾರಿ ಆರಂಭಗೊಂಡು ಡಿಸೆಂಬರ್‌ ಮೊದಲ ವಾರದಲ್ಲಿ ಬಹುತೇಕ ಕಾಮಗಾರಿ ಮುಗಿದಿತ್ತು. ಅದಾದ ಅನಂತರದ ಕಾಮಗಾರಿ ಚುರುಕುಗೊಂಡಿಲ್ಲ.

ಸ್ಥಳೀಯಾಡಳಿತಕ್ಕಿಲ್ಲ ಜವಾಬ್ದಾರಿ..?
ಕ್ಯಾಂಟೀನ್‌ ನಿರ್ಮಾಣ, ನಿರ್ವಹಣೆ ಕಂದಾಯ ಇಲಾಖೆ ಮೂಲಕ ನಡೆಯುತ್ತಿಲ್ಲ. ಕಾಮಗಾರಿ ಪ್ರಗತಿಯಲ್ಲಿರುವುದು ಗಮನಕ್ಕೆ ಬಂದಿದೆ. ನ.ಪಂ. ಕೆಲ ಜವಾಬ್ದಾರಿ ನಿಭಾಯಿಸುತ್ತಿದೆ ಎನ್ನುತ್ತಾರೆ ಪ್ರಭಾರ ತಹಶೀಲ್ದಾರ್‌ ಸಂತೋಷ್‌ ಕುಮಾರ್‌. ಸ್ಥಳ, ಕುಡಿಯುವ ನೀರು, ವೇಸ್ಟೇಜ್‌ ಸಂಗ್ರಹಕ್ಕೆ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ, ನಿರ್ವಹಣೆ ಹೊಣೆ ನ.ಪಂ.ನದ್ದು. ಕಟ್ಟಡ ನಿರ್ಮಾಣ, ಆಹಾರ ಪೂರೈಕೆ ವಿತರಣೆಗೆ ರಾಜ್ಯಮಟ್ಟದಲ್ಲೇ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಪಡೆದ ಸಂಸ್ಥೆ ಅದರ ಜವಾಬ್ದಾರಿ ವಹಿಸಲಿದೆ. ಕಾಮಗಾರಿ ಪೂರ್ಣ, ಉದ್ಘಾಟನೆಯನ್ನು ನಾವು ನಿರ್ಧರಿಸುವುದಲ್ಲ ಎನ್ನುವುದು ನ.ಪಂ. ಅಧಿಕಾರಿಗಳ ಅಭಿಪ್ರಾಯ.

ಊಟ-ಉಪಹಾರ
ಇಂದಿರಾ ಕ್ಯಾಂಟಿನ್‌ನಲ್ಲಿ 10 ರೂ.ಗೆ ಊಟ, 5 ರೂ.ಗೆ ತಿಂಡಿ ನೀಡುವ ವ್ಯವಸ್ಥೆ ಇದೆ. ಸುತ್ತೋಲೆ ಪ್ರಕಾರ, ಬೆಳಗ್ಗೆ ಉಪಾಹಾರ, ಇಡ್ಲಿ ಸಾಂಬಾರ್‌, ರೈಸ್‌ಬಾತ್‌, ಅವಲಕ್ಕಿ, ಉಪ್ಪಿಟ್ಟು, ಖಾರಾ ಪೊಂಗಲ್‌ (ವಾರದಲ್ಲಿ ಒಂದರಂತೆ) ಮಧ್ಯಾಹ್ನ ಮತ್ತು ರಾತ್ರಿ ಅನ್ನ-ಸಾರು, ಉಪ್ಪಿನಕಾಯಿ, ಹಪ್ಪಳ, ರವಿವಾರ ಬಿಸಿಬೇಳೆ ಬಾತ್‌, ತರಕಾರಿ, ಅನ್ನ, ಪುಳಿಯೊಗರೆ (ವಾರದಲ್ಲಿ ಒಂದು ದಿನ). ಇಲ್ಲಿಗೆ ಕೇಂದ್ರೀಕೃತ ಅಡುಗೆ ಮನೆ ಮೂಲಕ ಆಹಾರ ಪೂರೈಸಬೇಕಿದೆ.

ವಿಶೇಷ ವರದಿ

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.