ಮತ್ತೆ ಎರಡು ಸಾವಿರ ಚೈಲ್ಡ್ ಲಾಕ್ ತೆರವು
Team Udayavani, Jan 15, 2019, 6:39 AM IST
ಬೆಂಗಳೂರು: ಕ್ಯಾಬ್ಗಳಲ್ಲಿರುವ ಚೈಲ್ಡ್ ಲಾಕ್ ತೆರವು ಕಾರ್ಯಾಚರಣೆ ಮುಂದುವರಿಸಿರುವ ಸಾರಿಗೆ ಇಲಾಖೆ ಸಿಬ್ಬಂದಿ, ಸೋಮವಾರ ಎರಡು ಸಾವಿರ ವಾಹನಗಳ ಚೈಲ್ಡ್ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸಿದ್ದಾರೆ.
ಚೈಲ್ಡ್ ಲಾಕ್ ತೆರವುಗೊಳಿಸಲಾದ ಎರಡು ಸಾವಿರ ಕ್ಯಾಬ್ಗಳ ಪೈಕಿ ನಗರದಲ್ಲೇ 1,500 ಕ್ಯಾಬ್ಗಳಿವೆ. ಜ್ಞಾನಭಾರತಿ, ಯಶವಂತಪುರ, ದೇವನಹಳ್ಳಿ ಸುತ್ತಲಿನ ಪ್ರದೇಶಗಳಲ್ಲಿ ಸೂಚನೆ ನೀಡಿದ ನಂತರವೂ ಈ ವ್ಯವಸ್ಥೆ ಅಳವಡಿಸಿಕೊಂಡಿದ್ದ ಕ್ಯಾಬ್ಗಳನ್ನು ತಡೆದು, ಯಂತ್ರವನ್ನು ನಿಷ್ಕ್ರಿಯಗೊಳಿಸಲಾಯಿತು.
ಈಗಾಗಲೇ ರಾಜ್ಯಾದ್ಯಂತ ಎಲ್ಲ ಸಾರಿಗೆ ಪ್ರಾದೇಶಿಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಚೈಲ್ಡ್ಲಾಕ್ ತೆರವುಗೊಳಿಸಲು ಇಲಾಖೆಯು ಜ.16ರ ಗಡುವು ವಿಧಿಸಿದೆ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಕರ್ನಾಟಕ ಮೋಟಾರು ವಾಹನ ನಿಯಮ 1988ರ ಕಲಂ 2 (25)ರ ಪ್ರಕಾರ ಸಾರಿಗೆ ವಾಹನಗಳಲ್ಲಿ (ಕ್ಯಾಬ್ಗಳು) ಚೈಲ್ಡ್ ಲಾಕ್ ಸಿಸ್ಟ್ಂ ಅಳವಡಿಸುವಂತಿಲ್ಲ.
ಅಂತಹ ವಾಹನಗಳಿಗೆ ರಹದಾರಿ ಕೂಡ ನೀಡುವಂತಿಲ್ಲ. ಹೈಕೋರ್ಟ್ ಕೂಡ ಈಚೆಗೆ ಟೂರಿಸ್ಟ್ ಟ್ಯಾಕ್ಸಿ ಮತ್ತು ಆ್ಯಪ್ ಆಧಾರಿತ ಟ್ಯಾಕ್ಸಿಗಳಲ್ಲಿರುವ ಚೈಲ್ಡ್ ಲಾಕ್ ನಿಷ್ಕ್ರಿàಯಗೊಳಿಸಬೇಕು. ದೃಢೀಕರಣ ಇಲ್ಲದ ಯಾವುದೇ ವಾಹನಗಳಿಗೆ ಕಾರ್ಯಾಚರಣೆಗೆ ಅವಕಾಶ ನೀಡಬಾರದು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ