ಮೈಸೂರು ವಿವಿಗೆ ಬರಲಿದ್ದಾರೆ ಫಾರಿನ್‌ ಲೆಕ್ಚರ್‌ಗಳು


Team Udayavani, Jan 15, 2019, 7:17 AM IST

m1-mysore.jpg

ಮೈಸೂರು: ಮೈಸೂರು ವಿಶ್ವವಿದ್ಯಾಲಯ ತನ್ನ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ವಿದೇಶಿ ಬೋಧಕರನ್ನು ಕರೆಸಲು ತೀರ್ಮಾನಿಸಿದೆ. ಮೈಸೂರು ವಿವಿಯ ಕ್ರಾಫ‌ರ್ಡ್‌ ಭವನದಲ್ಲಿ ಸೋಮವಾರ ನಡೆದ ಶಿಕ್ಷಣ ಮಂಡಳಿ ಸಭೆಯಲ್ಲಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಈ ವಿಷಯ ತಿಳಿಸಿದರು. 

ಮೈಸೂರು ವಿಶ್ವವಿದ್ಯಾಲಯ 2020ರ ಜನವರಿಗೆ ನ್ಯಾಕ್‌ಗೆ ಹೊಗಬೇಕಿದೆ. ಸದ್ಯ 3.47 ಅಂಕಗಳೊಂದಿಗೆ ಮೈಸೂರು ವಿವಿ ಗ್ರೇಡ್‌-2 ಪಟ್ಟಿಯಲ್ಲಿದ್ದು, ಗ್ರೇಡ್‌-1ಗೆ ತರಲು ಎಲ್ಲರೂ ಸೇರಿ ಶ್ರಮ ಹಾಕೋಣ, ಇದಕ್ಕಾಗಿ ಆಂತರಿಕ ಶಿಸ್ತು, ಶಿಕ್ಷಣದ ಗುಣಮಟ್ಟ ಹೆಚ್ಚಳದ ಸಂಬಂಧ ಪ್ರೊ.ಆಯಿಷಾ ಷರೀಫ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಆ ಸಮಿತಿ ಈ ತಿಂಗಳಾಂತ್ಯದೊಳಗೆ ವರದಿ ಸಲ್ಲಿಸಲಿದ್ದು, ಮುಂದಿನ ಶಿಕ್ಷಣ ಮಂಡಳಿ ಸಭೆಗೆ ವರದಿಯನ್ನು ಮಂಡಿಸುವುದಾಗಿ ಹೇಳಿದರು.

ಮೈಸೂರು ವಿವಿಗೆ ವಿದೇಶಿ ಬೋಧಕರನ್ನು ಕರೆಸಲು ಒಂದು ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ವಿಶ್ವದ ಟಾಪ್‌ 500 ರ್‍ಯಾಂಕ್‌ ಒಳಗಿರುವ ವಿದೇಶಿ ವಿಶ್ವವಿದ್ಯಾಲಯಗಳಿಂದ ಫ್ಯಾಕಲ್ಟಿಗಳನ್ನು ಕರೆಸಲಿದ್ದು, ಅವರು ಒಂದು ತಿಂಗಳ ಕಾಲ ಇಲ್ಲಿದ್ದು ಪಾಠ ಮಾಡಿ ಹೋಗುತ್ತಾರೆ. ಈ ಸಂಬಂಧ ಟಾಪ್‌ 500 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಇ-ಮೇಲ್‌ ಕಳುಹಿಸಲಾಗುವುದು. ಮುಂದಿನ ಸೆಮಿಸ್ಟರ್‌ಗೆ ಅನುದಾನವನ್ನೂ ಹೆಚ್ಚು ಮೀಸಲಿಡುವುದಾಗಿ ತಿಳಿಸಿದರು.

ಪ್ರವೇಶಾತಿ ಕಡಿಮೆ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣದ ಯಜಮಾನ ಪ್ರಥಮ ದರ್ಜೆ ಕಾಲೇಜು ಹಾಗೂ ಮೈಸೂರಿನ ಸೇಂಟ್‌ ಜೋಸೆಫ್ ಸಂಜೆ ಕಾಲೇಜನ್ನು ಮುಚ್ಚಲು ಒಪ್ಪಿಗೆ, ಹಾಸನದ ಸಂತ ಜೋಸೆಫ‌ರ ಪ್ರಥಮ ದರ್ಜೆ ಕಾಲೇಜಿನ ಹೆಸರನ್ನು ಸಂತ ಜೋಸೆಫ‌ರ ಕಾಲೇಜು ಎಂದು ಬದಲಾವಣೆ ಮಾಡಲು ಒಪ್ಪಿಗೆ, ಮೈಸೂರು ವಿವಿಯಲ್ಲಿ ಪ್ರೊ.ಶೀನ ಶಶಿಕಾಂತ್‌ ಚಿನ್ನದ ಪದಕ ದತ್ತಿ ಸ್ಥಾಪನೆ ಮಾಡಲು ಒಪ್ಪಿಗೆ ನೀಡಲಾಯಿತು.

ಮೈಸೂರು ವಿವಿಯಲ್ಲಿ ಶ್ರೀಬಸವೇಶ್ವರ ಸಾಮಾಜಿಕ ಪರಿಷ್ಕರಣ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸ್ಥಾಪನೆ ಸಂಬಂಧ ಸರ್ಕಾರದ ನಿರ್ದೇಶನದಂತೆ ಪರಿಷ್ಕರಿಸಿ ಸಿದ್ಧಪಡಿಸಿರುವ ಕರಡು ಪರಿನಿಯಮಾವಳಿಗೆ ಸಭೆ ಅನುಮೋದನೆ ನೀಡಿತು. ಲಲಿತಕಲಾ ಕಾಲೇಜು ನಡೆಸುವ ಬಿ.ಎ (ಪೈನ್‌ ಆರ್ಟ್ಸ್) ಕೋರ್ಸ್‌ನ ಪ್ರಶ್ನೆಪತ್ರಿಕೆ ಪ್ಯಾಟ್ರನ್‌ನ್ನು ಸಿಬಿಸಿಎಸ್‌ನಂತೆ ಬದಲಾವನೆ ಮಾಡಿ ಅವುಗಳನ್ನು 2018ರ ಅಕ್ಟೋಬರ್‌/ನವೆಂಬರ್‌ನಿಂದ ಜಾರಿಗೆ ತರುವಂತೆ

ಲಲಿತ ಕಲೆ ಅಧ್ಯಯನ ಮಂಡಳಿ ಸಭೆ ಶಿಫಾರುಸು ಮಾಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೊರಡಿಸಿರುವ ಅಧಿಸೂಚನೆಗೆ ಸಭೆ ಒಪ್ಪಿಗೆ ನೀಡಿತು. ಈಗಾಗಲೇ ವಿವಿಯ ಹಣಕಾಸು ಸಮಿತಿ ಮತ್ತು ಸಿಂಡಿಕೇಟ್‌ ಸಭೆಯು ಅನುಮೋದಿಸಿರುವ 2014-15ನೆ ಸಾಲಿನ ಮೈಸೂರು ವಿವಿಯ ವಾರ್ಷಿಕ ಲೆಕ್ಕ ಪರಿಶೋಧನಾ ವರದಿಗೆ ಶಿಕ್ಷಣ ಮಂಡಳಿ ಸಭೆ ಒಪ್ಪಿಗೆ ಸೂಚಿಸಿತು.

2018-19ನೇ ಶೈಕ್ಷಣಿಕ ಸಾಲಿಗೆ ಹಾಸನದ ಶ್ರೀರಂಗ ಕಾಲೇಜ್‌ ಆಫ್ ಎಜುಕೇಷನ್‌ ಮತ್ತು ಮಳವಳ್ಳಿಯ ಭಗವಾನ್‌ ಬುದ್ಧ ಕಾಲೇಜ್‌ ಆಫ್ ಎಜುಕೇಷನ್‌ ಬಿ.ಇಡಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 50 ರಿಂದ 100ಕ್ಕೆ ಹೆಚ್ಚಿಸಲು ಪುನರ್‌ ಪರಿಶೀಲನಾ ಸಮಿತಿಯ ಶಿಫಾರಸ್ಸಿಗೆ ಶಿಕ್ಷಣ ಮಂಡಳಿ ಸಭೆ ಒಪ್ಪಿಗೆ ನೀಡಿತು.

ಮೈಸೂರು ವಿವಿಯ ಅಧ್ಯಾಪಕರುಗಳಿಗೆ ಯುಜಿಸಿ-ಕೆರಿಯರ್‌ ಅಡ್ವಾನ್ಸ್‌ಮೆಂಟ್‌ ಸ್ಕೀಂನಡಿ ನಿಯಮಾನುಸಾರ ಪದೋನ್ನತಿ ನೀಡುವ ಸಂಬಂಧ ಯುಜಿಸಿ ನಿಯಮಾವಳಿ 2010 ಮತ್ತು ತಿದ್ದುಪಡಿ 2013 ಹಾಗೂ 2016ರನ್ನು ಅನುಸರಿಸಲಾಗುತ್ತಿದ್ದು, ಪ್ರಸ್ತುತ 2013ರ ನಿಯಮಾವಳಿ ತಿದ್ದುಪಡಿಯ ಅನುಸಾರ ಅಭ್ಯರ್ಥಿಯು ಹೊಂದಿರಬೇಕಾದ ಕನಿಷ್ಠ ಇಂಡಿಕೇಟರ್‌ ಸ್ಕೋರ್ಗಳನ್ನು ನಿರ್ಧರಿಸಲು ಪಿಎಎಸ್‌ ಪದೋನ್ನತಿಯ ಸಂಯೋಜಕರಾಗಿರುವ ಪ್ರೊ.ಬಿ.ಎಸ್‌.ವಿಶ್ವನಾಥ್‌ ಅವರು ಸಲ್ಲಿಸಿರುವ ವಿಷಯಕ್ಕೆ ಸಭೆ ಅನುಮೋದನೆ ನೀಡಿತು. 

ಶಿಕ್ಷಣ ಮಂಡಳಿ ಸದಸ್ಯರಾದ ವಿಧಾನಪರಿಷತ್‌ ಸದಸ್ಯ ಅಪ್ಪಾಜಿ ಗೌಡ, ವಿವಿ ಕುಲಸಚಿವ ಪ್ರೊ.ಆರ್‌.ರಾಜಣ್ಣ, ಸದಸ್ಯರಾದ  ಪ್ರೊ.ಸದಾನಂದ, ಪ್ರೊ.ಶಿವಬಸವಯ್ಯ,ಪ್ರೊ.ಸಿ.ರಾಮಸ್ವಾಮಿ,ಡಾ.ಪಿ.ಸರಸ್ವತಿ, ಚನ್ನಬಸಪ್ಪ, ಶಾಂತಕುಮಾರ್‌ ಮೊದಲಾದವರು ಸಭೆಯಲ್ಲಿ ಹಾಜರಿದ್ದರು. 

ಪಿಎಚ್‌.ಡಿ.ನೋಂದಣಿ ಕಾಲಮಿತಿ ವಿಸ್ತರಣೆ: ಪಿಎಚ್‌.ಡಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಿಎಚ್‌.ಡಿ.ನೋಂದಣಿ ಪಡೆಯಲು ಇರುವ ಕಾಲಮಿತಿಯನ್ನು ಒಂದು ವರ್ಷದಿಂದ ಎರಡು ವರ್ಷಗಳಿಗೆ ವಿಸ್ತರಿಸಲು ಸಭೆ ಒಪ್ಪಿಗೆ ನೀಡಿತು. ಮೈಸೂರು ವಿವಿಯಲ್ಲಿ 2017ರ ಅಕ್ಟೋಬರ್‌ 29ರಂದು ನಡೆದ ಪಿಎಚ್‌.ಡಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ

ಪಿಎಚ್‌.ಡಿ. ತಾತ್ಕಾಲಿಕ ನೋಂದಣಿ ಪಡೆಯಲು ಪಿಎಚ್‌.ಡಿ ನಿಯಮಾವಳಿ 2017ರ ಪ್ರಕಾರ ಒಂದು ವರ್ಷದ ಕಾಲಮಿತಿ ನೀಡಲಾಗಿತ್ತು. ಆದರೆ, ಮಾರ್ಗದರ್ಶಕರ ಕೊರತೆ ಇರುವುದರಿಂದ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ತಾತ್ಕಾಲಿಕ ನೋಂದಣಿ ಪಡೆಯಲು ಸಾಧ್ಯವಾಗದಿರುವುದರಿಂದ ಈ ಕಾಲಮಿತಿಯನ್ನು ಎರಡು ವರ್ಷಗಳಿಗೆ ವಿಸ್ತರಿಸುವಂತೆ ಅಭ್ಯರ್ಥಿಗಳು ಕೋರಿರುವ ಹಿನ್ನೆಲೆಯಲ್ಲಿ ಶಿಕ್ಷಣ ಮಂಡಳಿ ಸಭೆ ಒಪ್ಪಿಗೆ ನೀಡಿತು.

ಅನಂತಮೂರ್ತಿ ಪೀಠ ಸ್ಥಾಪನೆ: ಮೈಸೂರು ವಿವಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್‌.ಅನಂತಮೂರ್ತಿ ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಪೀಠದ ಉದ್ದೇಶಿತ ಕಾರ್ಯಕ್ರಮವನ್ನು ನಡೆಸಲು ಸಿದ್ಧಪಡಿಸಿರುವ ಕರಡು ಅಧಿನಿಯಮವನ್ನು ಸಭೆ ಅನುಮೋದಿಸಿತು. 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.