ನಗರಸಭೆಯಲ್ಲಿ ಕುಡಿಯುವ ನೀರಿನದ್ದೇ ಚರ್ಚೆ


Team Udayavani, Jan 15, 2019, 8:19 AM IST

dvg-2.jpg

ಹರಿಹರ: ನಗರಸಭೆ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷೆ ಸುಜಾತಾ ರೇವಣಸಿದ್ದಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಚರ್ಚೆ ಜೋರಾಗಿ ನಡೆಯಿತು.

ಶಂಕರ್‌ ಖಟಾವಕರ್‌ ಮಾತನಾಡಿ, ಬರುವ ಬೇಸಿಗೆಗೆ ನೀರಿನ ಸಮಸ್ಯೆ ನಿವಾರಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲೆಲ್ಲಿ ನೀರಿನ ಸಮಸ್ಯೆಯಿದೆ ಎಂಬುದನ್ನು ಗುರುತಿಸಿ, ಕೆಟ್ಟಿರುವ ಕೊಳವೆ ಬಾವಿ ದುರಸ್ತಿ ಮಾಡಬೇಕು. ತುರ್ತಾಗಿ ನೀರಿನ ಬವಣೆ ನೀಗಿಸಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅಗತ್ಯ ಅನುದಾನ ಕುರಿತು ಡಿಸಿ ಬಳಿ ನಿಯೋಗದಲ್ಲಿ ತೆರಳಿ ಚರ್ಚಿಸಬೇಕು ಎಂದರು.

ಬಿ.ರೇವಣಸಿದ್ದಪ್ಪ, ಅಕ್ಕಪಕ್ಕದ ವಾರ್ಡ್‌ಗಳಲ್ಲಿ ಪರಸ್ಪರ ನೀರನ್ನು ಹಂಚಿಕೊಳ್ಳಬೇಕು ಎಂದಾಗ, ನಿಂಬಕ್ಕ ಚಂದಾಪುರ್‌, ನಮ್ಮ ವಾರ್ಡ್‌ಗೆ ಒಂದು ನಲ್ಲಿ ಕೇಳಿದರೆ ನೀವು ಕೊಟ್ಟಿಲ್ಲ. ಮಾತನಾಡುವುದಷ್ಟೇ ಅಲ್ಲ, ಅದರಂತೆ ನಡೆಯಬೇಕು ಎಂದರು. ಸಿಗ್ಬತ್‌ ಉಲ್ಲಾ, ನಮ್ಮ ವಾರ್ಡ್‌ನ ಕೊಳವೆ ಬಾವಿಯಿಂದ ನೀರು ಪಂಪ್‌ ಮಾಡಿಕೊಳ್ಳುತ್ತಿದ್ದರೂ ಸದಸ್ಯ ವಾಮನಮೂರ್ತಿ ಅಲ್ಲಿಂದ ಒಂದು ನಲ್ಲಿ ಸಂಪರ್ಕ ಕೂಡ ಕೊಡಲಿಲ್ಲ ಎಂದು ಆರೋಪಿಸಿದರು.

ಸೈಯದ್‌ ಎಜಾಜ್‌ ಮಾತನಾಡಿ, ಜಲಸಿರಿ ಕಾಮಗಾರಿಗೆ ದಿನದ 24 ಗಂಟೆ ಪೂರೈಸಲು ನೀರನ್ನು ಎಲ್ಲಿಂದ ತರುತ್ತೀರಿ ಎಂದು ಪ್ರಶ್ನಿಸಿದಾಗ, ಪೌರಯುಕ್ತೆ ಎಸ್‌.ಲಕ್ಷ್ಮಿ, ನಗರದ ಕೊಳವೆ ಬಾವಿಗಳ ನೀರನ್ನೇ ಒಟ್ಟುಗೂಡಿಸಿ ಜಲಸಿರಿ ಮಾರ್ಗಕ್ಕೆ ಹರಿಸಲಾಗುವುದು ಎಂದರು.

ಪೌರಾಯುಕ್ತರಿಗೆ ತರಾಟೆ: ಸದಸ್ಯ ಸಿಗ್ಬತ್‌ ಉಲ್ಲಾ ಮಾತನಾಡಿ, ಮಾಜಿ ಶಾಸಕರೆದುರು ಹೋರಾಟ ಮಾಡಿ ನಗರೋತ್ಥಾನ ಯೋಜನೆಯಡಿ 80 ಲಕ್ಷ ಮಂಜೂರು ಮಾಡಿಸಿದ್ದು, ಟೆಂಡರ್‌ ಮುಗಿದು ವರ್ಷವೇ ಗತಿಸಿದ್ದರೂ ಕಾಮಗಾರಿ ಆರಂಭವಾಗಿಲ್ಲ. ಗುತ್ತಿಗೆದಾರರ ಮೇಲೆ ನಿಮಗೇಕೆ ಕರುಣೆ ಎಂದು ಪ್ರಶ್ನಿಸಿದರು.

ಅದಕ್ಕೆ ಗರಂ ಆದ ಪೌರಾಯುಕ್ತರು, ಮಿಲಾಪಿ ಏನೂ ಇಲ್ಲ, ಇದೆಲ್ಲಾ ಡಿಸಿಗೆ ಸಂಬಂಧಿಸಿದ್ದು. 13 ಪ್ಯಾಕೇಜ್‌ಗಳಲ್ಲಿ 8ರ ಕಾಮಗಾರಿ ನಡೆಯುತ್ತಿದೆ. ನೀವೇನು ಲಿಖೀತವಾಗಿ ಮನವಿ ಸಲ್ಲಿಸಿಲ್ಲ ಎಂದಾಗ, ಸಿಗ್ಬತ್‌ ಉಲ್ಲಾ ಕಳೆದ ಒಂದು ವರ್ಷದಿಂದ ಕೇಳುತ್ತಿದ್ದೇನೆ. ಲಿಖೀತ ಮನವಿ ಕೇಳಿದ್ದರೆ ಆಗಲೇ ಕೊಡುತ್ತಿದ್ದೆ. ಚುನಾವಣೆ ಸಮೀಪಿಸಿದ್ದು, ಮತದಾರರಿಗೆ ಏನೆಂದು ಉತ್ತರಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರ ಹಸ್ತಕ್ಷೇಪ ಸರಿಯಲ್ಲ: ಶಾಸಕರು ಸೂಚಿಸಿದ ಕಾಮಗಾರಿಗಳಿಗೆ ಕಳೆದ ಸಭೆಯಲ್ಲಿ 67 ಲಕ್ಷ ರೂ. ಅನುಮೋದಿಸಿರುವುದು ನಗರಸಭೆ ಸದಸ್ಯರಿಗೆ ಅಪಮಾನವೆಸಗಿದಂತೆ. ನಗರಸಭೆಯಲ್ಲಿ ಶಾಸಕರ ಹಸ್ತಕ್ಷೇಪ ಸರಿಯಲ್ಲ ಎಂದು ವಾಮನಮೂರ್ತಿ ನುಡಿದರು. ಅದಕ್ಕೆ ತಿರುಗೇಟು ನೀಡಿದ ಸಿಗ್ಬತ್‌ ಉಲ್ಲಾ, ಹಿಂದಿನ ಶಾಸಕರು ನಗರಸಭೆ ಆಡಳಿತದಲ್ಲಿ ಎಷ್ಟು ಹಸ್ತಕ್ಷೇಪ ಮಾಡಿದ್ದಾರೆ. ಅದೆಷ್ಟು ಅನುದಾನ ಹಳ್ಳಕ್ಕೆ, ಚರಂಡಿಗೆ ಹಾಕಿದ್ದಾರೆಂಬುದು ಎಲ್ಲರಿಗೂ ಗೊತ್ತು ಎಂದರು.

ಜಲಸಿರಿ ತಡೆಯುತ್ತೇವೆ: ನಾಗರಾಜ್‌ ಮೆಹರ್ವಾಡೆ ಮಾತನಾಡಿ, ಜಲಸಿರಿ ಯೋಜನೆ ಕಾಮಗಾರಿ ಕಳಪೆ ಹಾಗೂ ಬೇಕಾಬಿಟ್ಟಿಯಾಗಿ ಕೈಗೊಂಡಿದ್ದು, ದುಡ್ಡು ಮಾಡಿಕೊಳ್ಳಲು ನಡೆಸಿರುವ ಕಾಟಾಚಾರದ ಈ ಕಾಮಗಾರಿಯನ್ನು ತಡೆಯುವುದಾಗಿ ಎಚ್ಚರಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸೈಯದ್‌ ಏಜಾಜ್‌, ವಾರ್ಡ್‌ ಸದಸ್ಯರೊಂದಿಗೆ ಚರ್ಚಿಸದೆ ಮನಬಂದಲ್ಲಿ ಪೈಪ್‌ ಅಳವಡಿಸುತ್ತಾರೆ ಎಂದರೆ, ಅಲ್ತಾಫ್‌ ಮಾತನಾಡಿ, ಜಲಸಿರಿಯಿಂದ ಹಳೆಯ ಪೈಪ್‌ಗ್ಳು ಡ್ಯಾಮೇಜ್‌ ಆಗಿ ಜನರಿಗೆ ನೀರು ಸಿಗುತ್ತಿಲ್ಲ. ಇನ್ನೆರಡು ದಿನಗಳಲ್ಲಿ ಪೈಪುಗಳ ದುರಸ್ತಿ ಮಾಡದಿದ್ದರೆ ಕಾಮಗಾರಿ ನಿಲ್ಲಿಸುವುದಾಗಿ ಎಚ್ಚರಿಸಿದರು.

ಮೊಹ್ಮದ್‌ ಸಿಗ್ಬತ್‌ಉಲ್ಲಾ ಮಾತನಾಡಿ, ನನ್ನ ವಾರ್ಡ್‌ನಲ್ಲಿನ ಬಹುತೇಕ ರಸ್ತೆಗಳು ಜಲಸಿರಿ ಕಾಮಗಾರಿಯಿಂದಾಗಿ ಹಾಳಾಗಿವೆ. ಕೋಟ್ಯಂತರ ರೂ. ವ್ಯಯಿಸಿ ನಿರ್ಮಿಸಿದ ರಸ್ತೆಗಳು ಮಣ್ಣುಪಾಲಾಗಿವೆ. ಜನರಿಂದ ಬೆ„ಸಿಕೊಳ್ಳುವುದಕ್ಕಿಂತ ಈ ಯೋಜನೆ ಸ್ಥಗಿತಗೊಳಿಸುವುದು ಒಳಿತು ಎಂದರು.

ಸದಸ್ಯ ವಸಂತ್‌ ಮಾತನಾಡಿ, ಬರ ಪರಿಹಾರ, ಶುದ್ಧ ಕುಡಿಯುವ ನೀರು ಸೇರಿದಂತೆ ಸಂಪನ್ಮೂಲಗಳು ನಗರದ ಎಲ್ಲಾ 31 ವಾರ್ಡ್‌ಗಳಿಗೆ ಸಮಾನವಾಗಿ ದೊರೆಯುವಂತಾಗಬೇಕು ಎಂದರು. ವಿದ್ಯುತ್‌ ಇಲ್ಲದಾಗ ನಗರಸಭೆ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರಿಂದ 7 ಲಕ್ಷ ವೆಚ್ಚದಲ್ಲಿ ಜನರೇಟರ್‌ ಖರೀದಿಸಲು ನಿರ್ಣಯಿಸಲಾಯಿತು.

ಉಪಾಧ್ಯಕ್ಷೆ ಅಂಜನಮ್ಮ, ಅತಾವುಲ್ಲಾ, ರಾಜು ರೋಖಡೆ, ಡಿ.ಉಜೇಶ್‌, ಕೆ.ವಿರೂಪಾಕ್ಷ, ಕೆ.ಮರಿದೇವ್‌, ಪ್ರತಿಭಾ ಕುಲಕರ್ಣಿ, ಬಿ.ಅಲ್ತಾಫ್‌, ಸೆ„ಯದ್‌ ಜಹೀರ್‌ ಅಲ್ತಮಷ್‌, ಮಂಜುಳಾ, ಶಹಜಾದ್‌ ಮತ್ತಿತರರಿದ್ದರು.

ಬೇಸಿಗೆಯಲ್ಲಿ ಬಾಯಿ ಜೋರು ಮಾಡುವ ಪುರುಷ ಸದಸ್ಯರ ವಾರ್ಡ್‌ಗಳಿಗಷ್ಟೇ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತದೆ. ಮಹಿಳೆಯರು ಸದಸ್ಯರಲ್ಲವೇ? ಏಕೆ ಈ ತಾರತಮ್ಯ? ಬರುವ ಬೇಸಿಗೆಯಲ್ಲಿ ಇದಕ್ಕೆ ಆಸ್ಪದ ಕೊಡುವುದಿಲ್ಲ.
ನಗೀನಾ ಸುಬಾನ್‌, ಸದಸ್ಯೆ

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.