ಹುಮನಾಬಾದ ವೀರಭದ್ರೇಶ್ವರ ಜಾತ್ರೆಗೆ ಮುನ್ನದ ಪಲ್ಲಕ್ಕಿ ಉತ್ಸವ
Team Udayavani, Jan 15, 2019, 9:37 AM IST
ಹುಮನಾಬಾದ: ಹೈ.ಕ. ಭಾಗದ ಇತಿಹಾಸ ಪ್ರಸಿದ್ಧ ಹುಮನಾಬಾದ ಶ್ರೀ ವೀರಭದ್ರೇಶ್ವರ ಜಾತ್ರೆಗೆ ನಿಮಿತ್ತ ಪಲ್ಲಕ್ಕಿ ಉತ್ಸವಕ್ಕೆ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ರಾಜಶೇಖರ ಪಾಟೀಲ ಸೋಮವಾರ ರಾತ್ರಿ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಉತ್ಸವ ಆರಂಭಕ್ಕೆ ಮುನ್ನ ಇಲ್ಲಿನ ಹಿರೇಮಠದ ಶ್ರೀ ರೇಣುಕ ಗಂಗಾಧರ ಸ್ವಾಮೀಜಿ ಅವರನ್ನು ಪಾರಂಪರಿಕ ವ್ಯಾದ್ಯ ಮೇಳದೊಂದಿಗೆ ಶ್ರೀ ಮಂಟದಿಂದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಕರೆ ತರಲಾಯಿತು. ಶ್ರೀಗಳು, ಸಚಿವರು ವಿಶೇಷ ಮಂಗಳಾರತಿ ಸಲ್ಲಿಸುವ ಮೂಲಕ ಪಲ್ಲಕ್ಕಿ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ದೇವಸ್ಥಾನದಿಂದ ಜೇರಪೇಟೆ ಹನುಮ ದೇವಸ್ಥಾನಕ್ಕೆ ಹೊರಟಿತು. ಅಲ್ಲಿ ಭದ್ರಕಾಳಿ ಮತ್ತು ವೀರಭದ್ರೇಶ್ವರರಿಗೆ ಎಣ್ಣೆ ಹಚ್ಚುವ ಕಾರ್ಯಕ್ರಮದ ವೇಳೆ ನಡೆದ ಶಲ್ಯ ಸುಡುವ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ನೆರೆದಿದ್ದರು.
ವಿಧಾನ ಪರಿಷತ್ ಸದಸ್ಯ ಡಾ|ಚಂದ್ರಶೇಖರ ಪಾಟೀಲ, ದೇವಸ್ಥಾನ ಗೌರವಾಧ್ಯಕ್ಷ ವೀರಣ್ಣ ಎಚ್.ಪಾಟೀಲ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭೀಮರಾವ್ ಪಾಟೀಲ, ತಹಶೀಲ್ದಾರ್ ಡಿ.ಎಂ.ಪಾಣಿ, ಶರಣಪ್ಪಗೌಡ ಪಾಟೀಲ, ದತ್ತಕುಮಾರ ಆರ್.ಚಿದ್ರಿ, ಬಾಬುರಾವ್ ಪೋಚಂಪಳ್ಳಿ, ಮಲ್ಲಿಕಾರ್ಜುನ ಮಾಶಟ್ಟಿ, ಎಪಿಎಂಸಿ ಅಧ್ಯಕ್ಷ ಡಾ| ಭದ್ರೇಶ ಎಸ್.ಪಾಟೀಲ, ಶರಣಪ್ಪ ಗುಡ್ಡಾ, ಶಿವಕುಮಾರ ವಿ.ನಿಟ್ಟೂರ, ಶ್ರೀನಿವಾಸ ಚವಾಣ್, ಶರಣಪ್ಪ ರೇಚೆಟ್ಟಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!