ಚೆಲ್ಲು ಚೆಲ್ಲೆನುತಾ…


Team Udayavani, Jan 16, 2019, 12:30 AM IST

w-2.jpg

ಒಂದು ಗೋಧಿ ಕಾಳನ್ನು ಬೆಳೆಯಲು ರೈತ ಬೆವರು ಹರಿಸುತ್ತಾನೆ, ಕಷ್ಟಪಡುತ್ತಾನೆ ಎಂದೆಲ್ಲಾ ಹೇಳಿ ನಾವು ಮರುಕ  ವ್ಯಕ್ತಪಡಿಸುತ್ತೇವೆ. ಆದರೆ, ಊಟಕ್ಕೆ ಕುಳಿತಾಗ ಎಲ್ಲವನ್ನೂ ಮರೆತು ತಟ್ಟೆಗೆ ಬೇಕಾದ್ದು ಬೇಡವಾದ್ದು ಎಲ್ಲವನ್ನೂ ಹಾಕಿಸಿಕೊಂಡು ಕಡೆಗೆ ಚೆಲ್ಲುತ್ತೇವೆ!

“ಹಾಗೆಲ್ಲ ವೇಸ್ಟ್ ಮಾಡಬಾರದಪ್ಪ, ಮನೆಗೆ ತೆಗೆದುಕೊಂಡು ಹೋಗಿ ಅಮ್ಮನಿಗೆ ಕೊಡು’ ಎಂದು ಪಕ್ಕದ ಮನೆಯ ತಾತ ಒಬ್ಬ ಹುಡುಗನಿಗೆ ಹೇಳುತ್ತಿದ್ದರು. ಪಕ್ಕದ ಮನೆಯವರು ಅವರ ಮಗನ ಬರ್ತ್‌ಡೇ ಪಾರ್ಟಿಗೆ ನಮ್ಮನ್ನೆಲ್ಲ ಕರೆದಿದ್ದರು. ಕೇಕ್‌ ಕಟ್‌ ಮಾಡಿದ ನಂತರ ಕೇಕು, ಸಮೋಸಾ, ಚಿಪ್ಸ್ ನಿಂದ ತುಂಬಿದ ಪೇಪರ್‌ ಪ್ಲೇಟನ್ನು ಎಲ್ಲ ಅತಿಥಿಗಳಿಗೂ ನೀಡಿದರು. ಒಬ್ಬ ಹುಡುಗ ಯಾವುದನ್ನೂ ಪೂರ್ತಿ ತಿನ್ನದೆ, ಕಸದ ಬುಟ್ಟಿಗೆ ಎಸೆಯಲು ಹೋದಾಗ, ಅಜ್ಜ ಅವನಿಗೆ ಬುದ್ಧಿ ಹೇಳುತ್ತಿದ್ದರು. ಆದರೆ, ಅವನು ಅಜ್ಜನ ಮಾತನ್ನು ಕಿವಿಗೆ ಹಾಕಿಕೊಳ್ಳದೆ “ನನಗಿದು ಬೇಡವೇ ಬೇಡ’ ಎಂದು ಎಸೆದು ಹೋದ.

ಮಕ್ಕಳು ಮಾತ್ರವೇ ಅಲ್ಲ, ದೊಡ್ಡವರು ಕೂಡಾ ಎಷ್ಟೋ ಸಲ ಊಟವನ್ನು ವ್ಯರ್ಥ ಮಾಡುವುದಿದೆ. ಹೊಟೇಲ್‌ಗ‌ಳಲ್ಲಿ, ಮದುವೆ ಮುಂಜಿ ಮುಂತಾದ ಕಾರ್ಯಕ್ರಮಗಳಲ್ಲಿ ಊಟಕ್ಕೆ ಕುಳಿತಾಗ ಬೇಕೋ, ಬೇಡವೋ ಎಂದು ಆಲೋಚನೆ ಮಾಡದೇ ತಟ್ಟೆ ತುಂಬಾ ಬಡಿಸಿಕೊಳ್ಳುತ್ತೇವೆ. ಅಲ್ಲದೆ ನಮ್ಮ ಜೊತೆ ಪುಟ್ಟ ಮಗು ಇದ್ದರೆ ಅದಕ್ಕೂ ಒಂದು ಎಲೆಯೆಂದು ಎರಡರಲ್ಲೂ ಬಡಿಸಿಕೊಂಡು ಎರಡರಲ್ಲೂ ಬಹಳಷ್ಟನ್ನು ಉಳಿಸುತ್ತೇವೆ. ಬೇಕಾದಷ್ಟನ್ನೇ ಬಡಿಸಿಕೊಳ್ಳುವ ಅವಕಾಶವಿದ್ದರೂ, ನಮಗೆ ಎಲ್ಲವೂ ಬೇಕು. ಕೆಲವೊಮ್ಮೆ ಬಡಿಸುವವರು ಮಕ್ಕಳೆಂಬ ಕಾರಣಕ್ಕೆ ಕಡಿಮೆ ಬಡಿಸಿದರೆ ಮಕ್ಕಳು ತಂದೆ ತಾಯಿ ಜೊತೆ ಗಲಾಟೆ ಮಾಡುವುದಿದೆ, “ನಿನಗಷ್ಟೇ ಜಾಸ್ತಿ ಹಾಕಿದ್ದಾರೆ, ನನಗೆ ಹಾಕೇ ಇಲ್ಲ’ ಎಂದು. ಆಗ ಮಕ್ಕಳ ರಂಪಾಟ ತಪ್ಪಿಸಲು ಹೆತ್ತವರು ಎಲೆ ತುಂಬಿಸುತ್ತಾರೆ! ಕೊನೆಗೆ ಮಕ್ಕಳು ಏನನ್ನೂ ತಿನ್ನದೆ, ಎಲ್ಲವನ್ನೂ ಕಸದಬುಟ್ಟಿಗೆ ಎಸೆಯುತ್ತವೆ. 

ವ್ಯರ್ಥ ಶಾಸ್ತ್ರ
ಟಿ.ವಿ., ಸಿನಿಮಾ, ಜಾಹೀರಾತುಗಳಲ್ಲಿ ಆಹಾರ ವ್ಯರ್ಥ ಮಾಡಬೇಡಿ ಎಂಬ ಮನವಿ ಪ್ರಸಾರಗೊಳ್ಳುತ್ತಿರುತ್ತದೆ. ಒಂದು ಗೋಧಿ ಕಾಳನ್ನು ಬೆಳೆಯಲು ರೈತ ಎಷ್ಟು ಬೆವರು ಹರಿಸುತ್ತಾನೆ, ಕಷ್ಟ ಪಡುತ್ತಾನೆ ಎಂದಾಗ ಮರುಕ ವ್ಯಕ್ತಪಡಿಸುವ ನಾವು, ಊಟಕ್ಕೆ ಕುಳಿತಾಗ ಎಲ್ಲವನ್ನೂ ಮರೆಯುತ್ತೇವೆ. ಹೊಟೇಲ್‌ಗ‌ಳಲ್ಲಿ, ಮಾಲ್‌ಗ‌ಳಲ್ಲಿ ಆಯಾ ದಿನದ ವ್ಯರ್ಥವಾದ ಆಹಾರದ ಪ್ರಮಾಣವನ್ನು ನಮೂದಿಸಿ, ಆಹಾರವೂ ಎಷ್ಟು ಬಡ ಜನರ ಹಸಿವು ನೀಗಿಸುತ್ತಿತ್ತು ಎಂದು ನಮೂದಿಸುತ್ತಾರೆ. ಆದರೆ, ಅವೆಲ್ಲವೂ ಒಂದು ಕ್ಷಣ ನಮ್ಮ ಗಮನ ಸೆಳೆಯುತ್ತದಷ್ಟೆ. ಆದರೆ ಅವ್ಯಾವುದೂ ನಮ್ಮ ಕಣ್ತೆರೆಸುವುದಿಲ್ಲ.

ಚಿಕ್ಕಂದಿನಲ್ಲಿ ಕಲಿತ ಪಾಠ
ಸಣ್ಣವಳಿದ್ದಾಗ, “ಒಂದು ಕಣ ಉಪ್ಪನ್ನೂ, ಅನ್ನದ ಅಗುಳನ್ನೂ ವ್ಯರ್ಥ ಮಾಡದಂತೆ ಊಟ ಮಾಡಬೇಕು. ಇಲ್ಲದಿದ್ದರೆ ದೇವರು ನಿಮಗೆ ಇಳಿ ವಯಸ್ಸಿನಲ್ಲಿ ಹಳಸಿದ ಅನ್ನವನ್ನು ನೀಡುತ್ತಾರೆ’ ಎಂದು ಹೆದರಿಸಿ ಅಮ್ಮ ಊಟ ಮಾಡಿಸುತ್ತಿದ್ದಳು. ಆ ಹೆದರಿಕೆಯೋ, ಅಭ್ಯಾಸವೋ ಇಂದಿಗೂ ನಮ್ಮನೆಯಲ್ಲಿ ಯಾರೂ ಒಂದು ಅಗುಳನ್ನೂ ಚೆಲ್ಲುವುದಿಲ್ಲ. ಕೆಲವರು ಎರಡನೆ ಸಲ ಅನ್ನ ಕೇಳಲು ನಾಚಿಕೆಯೆಂದು, ಮೊದಲನೇ ಸಲವೇ ಜಾಸ್ತಿ ಹಾಕಿಸಿಕೊಳ್ಳುತ್ತಾರೆ. ಆದರೆ ಅನ್ನವನ್ನು ವ್ಯರ್ಥ ಮಾಡುವುದಕ್ಕಿಂತ ಆ ಮುಜುಗರವನ್ನು ತೊರೆಯುವುದು ಮೇಲಲ್ಲವೇ? ಕೆಲ ದೇವಸ್ಥಾನಗಳಲ್ಲಿ, ಹೊಟೇಲುಗಳಲ್ಲಿ ಊಟದ ಮೆನುವನ್ನು ನಮೂದಿಸಿರುತ್ತಾರೆ. ಅದರಲ್ಲಿ ನಮಗೆ ಇಷ್ಟವಾಗದ ಪದಾರ್ಥಗಳಿದ್ದರೆ ಅದನ್ನು ಬಡಿಸಿಕೊಳ್ಳದೆ, ಆಹಾರ ವ್ಯರ್ಥವಾಗುವುದನ್ನು ತಡೆಯಬಹುದು. ಈ ರೀತಿ ಪ್ಲ್ರಾನ್‌ ಪ್ರಕಾರ ಊಟ ಮಾಡಿದರೆ ಆಹಾರ ಚೆಲ್ಲುವ ಪ್ರಮೇಯವೇ ಬರುವುದಿಲ್ಲ. ಹೋಟೆಲ್‌ ಬಫೆಯಲ್ಲಿ, ಹೇಗೂ ಅಷ್ಟು ದುಡ್ಡು ಕೊಟ್ಟಿರುವಾಗ ಎಲ್ಲವನ್ನೂ ತಿನ್ನಬೇಕು ಎಂದು ಬೇಕಾದ್ದು, ಬೇಡದ್ದು ಎಲ್ಲವನ್ನೂ ಬಡಿಸಿಕೊಂಡು, ತಿನ್ನಲಾಗದೇ ವ್ಯರ್ಥ ಮಾಡುತ್ತೇವೆ. ದುಡ್ಡು ಕೊಟ್ಟಿದ್ದೇವೆ ಎಂದು ಜಾಸ್ತಿ ಹಾಕಿಸಿಕೊಂಡು ಎಲ್ಲವನ್ನೂ ತಿನ್ನಲು ಹೊರಟರೆ ಹೊಟ್ಟೆ ಕೆಟ್ಟು ಆಸ್ಪತ್ರೆಗೆ ದುಡ್ಡು ಹಾಕಬೇಕಾದೀತು.

ಗೆಳತಿಯೊಬ್ಬಳು ಎಂದಿಗೂ ತಟ್ಟೆಯನ್ನು ಪೂರ್ತಿಯಾಗಿ ಖಾಲಿ ಮಾಡಿದವಳೇ ಅಲ್ಲ. ದಿನವೂ ಏನಾದರೊಂದು ಪದಾರ್ಥವನ್ನು ಚೆಲ್ಲುವುದು ಅವಳಿಗೆ ರೂಢಿ. ಅದನ್ನು ನೋಡಿ ಅವಳ ಮಗಳೂ ಅದನ್ನೇ ರೂಢಿಸಿಕೊಂಡಿದ್ದಾಳೆ. ನಮ್ಮನ್ನು ನೋಡಿ ಮಕ್ಕಳು ಕಲಿಯುತ್ತವೆ ಎಂಬುದನ್ನು ಹಿರಿಯರು ಮರೆಯಬಾರದು.

ಸಾವಿತ್ರಿ ಶ್ಯಾನುಭಾಗ

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.