ರಾಜ್ಯ ಬೌಲಿಂಗ್‌ ದಾಳಿಗೆ ತತ್ತರಿಸಿದ ರಾಜಸ್ಥಾನ


Team Udayavani, Jan 16, 2019, 4:16 AM IST

mithun.jpg

ಬೆಂಗಳೂರು: ರಣಜಿ ಕ್ವಾರ್ಟರ್‌ ಫೈನಲ್‌ ಪಂದ್ಯದ ಮೊದಲ ದಿನವೇ ಕರ್ನಾಟಕ ಮೇಲುಗೈ ಸಾಧಿಸಿದೆ. ರಾಜ್ಯದ ಬೌಲಿಂಗ್‌ ದಾಳಿಗೆ ತತ್ತರಿಸಿದ ರಾಜಸ್ಥಾನ 224 ರನ್ನಿಗೆ ಆಲೌಟ್‌ ಆಗಿದೆ. ಜವಾಬು ನೀಡಲಾರಂಭಿಸಿದ ರಾಜ್ಯ ತಂಡ ವಿಕೆಟ್‌ ಕಳೆದುಕೊಳ್ಳದೆ 12 ರನ್‌ ಮಾಡಿದೆ. 

ಅಭಿಮನ್ಯು ಮಿಥುನ್‌ (48ಕ್ಕೆ 3), ಕೆ. ಗೌತಮ್‌ (54ಕ್ಕೆ 3), ವಿನಯ್‌ ಕುಮಾರ್‌ (29ಕ್ಕೆ 2) ಹಾಗೂ ಶ್ರೇಯಸ್‌ ಗೋಪಾಲ್‌ (41ಕ್ಕೆ 2) ಸೇರಿಕೊಂಡು ರಾಜಸ್ಥಾನದ ಮೇಲೆ ಸವಾರಿ ಮಾಡಿದರು. ರಾಜೇಶ್‌ ಬಿಶ್ನೋಯ್‌ (79) ಮತ್ತು ನಾಯಕ ಮಹಿಪಾಲ್‌ ಲೊನ್ರೋರ್‌ (50) ಅವರ ಅರ್ಧ ಶತಕದ ಹೊರತಾಗಿಯೂ ರಾಜಸ್ಥಾನ ಮೊದಲ ಇನ್ನಿಂಗ್ಸ್‌ನಲ್ಲಿ 224 ರನ್‌ಗೆ ಆಲೌಟಾಗಿದೆ. ಕರ್ನಾಟಕದ ಆರಂಭಿಕರಾದ ಆರ್‌. ಸಮರ್ಥ್ (7) ಹಾಗೂ ಡಿ. ನಿಶ್ಚಲ್‌ (5) ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಬೆವರಿಳಿಸಿದ ಬೌಲರ್
ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ಯಾವ ಹಂತದಲ್ಲೂ ಸವಾಲೊಡ್ಡಲಿಲ್ಲ. ಆರಂಭಿಕರಾದ ಅಮಿತ್‌ ಕುಮಾರ್‌ ಗೌತಮ್‌ (12) ಹಾಗೂ ಚೇತನ್‌ ಬಿಸ್ಟ್‌ (39) ಒಟ್ಟುಗೂಡಿಸಿದ್ದು 18 ರನ್‌ ಮಾತ್ರ. ಬಳಿಕ ಮಹಿಪಾಲ್‌, ಚೇತನ್‌ ಜತೆ ಸೇರಿಕೊಂಡು 46 ರನ್‌ ಜತೆಯಾಟ ನಡೆಸಿದರು. ಬಳಿಕ ರಾಬಿನ್‌ ಬಿಸ್ಟ್‌ (13) ಹಾಗೂ ಅಶೋಕ್‌ ಮೆನಾರಿಯ (0) ಬೇಗನೇ ವಿಕೆಟ್‌ ಒಪ್ಪಿಸಿದ್ದರಿಂದ ರಾಜಸ್ಥಾನದ ಆತಂಕ ಹೆಚ್ಚಾಯಿತು.

ರಾಜಸ್ಥಾನದ ಅರ್ಧದಷ್ಟು ಆಟಗಾರರು 111 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡರು. ತಂಡದ ಮೊತ್ತ 135 ರನ್‌ ಆಗಿದ್ದಾಗ ಅರ್ಧ ಶತಕ ದಾಖಲಿಸಿದ್ದ ಮಹಿಪಾಲ್‌ ಕೂಡ ಔಟಾದಾಗ ರಾಜಸ್ಥಾನದ ಇನ್ನಿಂಗ್ಸ್‌ ನೂರೈವತ್ತರ ಆಸುಪಾಸಿನಲ್ಲಿ ಮುಗಿಯುವ ಸಂಭವವಿತ್ತು. ಇಂತಹ ಪರಿಸ್ಥಿತಿಯಲ್ಲಿ ರಾಜೇಶ್‌ ಬಿಶ್ನೋಯ್‌ ಹಾಗೂ ದೀಪಕ್‌ ಚಹರ್‌ (22 ರನ್‌) ನೆರವಿನಿಂದ ತಂಡದ ಮೊತ್ತ 200 ರನ್‌ ಗಡಿ ದಾಟುವಂತಾಯಿತು. ರಾಜೇಶ್‌ ಬಿಶ್ನೋಯ್‌ 119 ಎಸೆತಗಳಿಂದ ಇನ್ನಿಂಗ್ಸ್‌ ಕಟ್ಟಿದರು. ಸಿಡಿಸಿದ್ದು 10 ಬೌಂಡರಿ ಹಾಗೂ 2 ಸಿಕ್ಸರ್‌.

ರಣಜಿ ಕ್ವಾರ್ಟರ್‌ ಫೈನಲ್ಸ್‌
* ನಾಗ್ಪುರ: ವಿದರ್ಭ ವಿರುದ್ಧದ ಪಂದ್ಯದಲ್ಲಿ ಉತ್ತರಖಂಡ್‌ 6 ವಿಕೆಟಿಗೆ 293 ರನ್‌ ಮಾಡಿದೆ.
* ವಯನಾಡ್‌: ಗುಜರಾತ್‌ ವಿರುದ್ಧದ ಮುಖಾಮುಖೀಯಲ್ಲಿ ಆತಿಥೇಯ ಕೇರಳ 185 ರನ್ನಿಗೆ ಕುಸಿದಿದೆ. ಬಳಿಕ ಗುಜರಾತ್‌ ಕೂಡ ಕುಸಿತ ಕಂಡಿದ್ದು, 4 ವಿಕೆಟಿಗೆ 97 ರನ್‌ ಮಾಡಿದೆ. 
* ಲಕ್ನೊ: ರಿಂಕು ಸಿಂಗ್‌ ಅವರ ಅಮೋಘ 150 ರನ್‌ ಸಾಹಸದಿಂದ ಸೌರಾಷ್ಟ್ರ ವಿರುದ್ಧ ಉತ್ತರಪ್ರದೇಶ 7 ವಿಕೆಟಿಗೆ 340 ರನ್‌ ಪೇರಿಸಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.