ಜ. 27-31: ಅತ್ತೂರು ಜಾತ್ರೆ


Team Udayavani, Jan 16, 2019, 4:46 AM IST

attur.jpg

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್‌ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್‌ ಡಿ’ಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವಾರ್ಷಿಕ ಮಹೋತ್ಸವದಲ್ಲಿ 35 ದಿವ್ಯ ಬಲಿಪೂಜೆಗಳು ಕೊಂಕಣಿಯಲ್ಲಿ,11 ಕನ್ನಡದಲ್ಲಿ ನಡೆಯಲಿವೆ. ಶಿವಮೊಗ್ಗ, ಬೆಳ್ತಂಗಡಿ, ಮೈಸೂರು, ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ಬಲಿಪೂಜೆ ನೆರವೇರಿಸಲಿದ್ದಾರೆ. ಜ. 28ರಂದು ಪೂರ್ವಾಹ್ನ10ಕ್ಕೆ ಅಸ್ವಸ್ಥರಿಗಾಗಿ ಪೂಜೆ ನಡೆಯಲಿದೆ.

ಮಹೋತ್ಸವಕ್ಕೆ ಸರ್ವರೀತಿಯ ಸಿದ್ಧತೆಗಳು ನಡೆಯುತ್ತಿವೆ. ಹಣ, ವಸ್ತುರೂಪದ ಹರಕೆ, ಮೋಂಬತ್ತಿ ಹರಕೆ ಸಲ್ಲಿಸಲು ಚರ್ಚ್‌ನ ಎಡಬದಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. 5 ಕಡೆಗಳಲ್ಲಿ ಕುಡಿಯುವ ನೀರು, 60 ಶೌಚಾಲಯ, ವಿವಿಧ ಭಾಗಗಳಿಂದ ಆಗಮಿಸುವವರಿಗೆ ಅಲ್ಲಲ್ಲಿ ಪಾರ್ಕಿಂಗ್‌, ಪಾಸ್‌ ಹೊಂದಿದವರಿಗೆ ಪರ್ಪಲೆಗುಡ್ಡೆಯಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಅಂಗಡಿ, ಸ್ಟಾಲ್‌ಗ‌ಳಲ್ಲಿ ದುಡಿಯುವ ಕಾರ್ಮಿಕರಿಗೆ ಶೌಚಾಲಯ, ಸ್ನಾನಗೃಹಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತಕ್ಕೆ ತಿಳಿಸಲಾಗಿದೆ ಎಂದರು.

ಭಕ್ತರ ಸುರಕ್ಷೆಗೆ ಆದ್ಯತೆ: ಭಕ್ತರ ಸುರಕ್ಷೆ ನಿಟ್ಟಿನಲ್ಲಿ ಹಳೆಯ ಹಾಗೂ ಹೊಸ ಇಗರ್ಜಿಗಳ ಒಳಗಡೆ, ಬಸಿಲಿಕಾದ ವಠಾರದಲ್ಲಿ 64 ಸಿಸಿ ಕೆಮರಾ ಅಳವಡಿಸಲಾಗಿದೆ. ಅಂಗಡಿ ಮುಂಗಟ್ಟುಗಳ ಪರಿಸರದಲ್ಲಿ ಕೆಮರಾ ಅಳವಡಿಸಲು ಸ್ಥಳೀಯಾಡಳಿತಕ್ಕೆ ಸೂಚಿಸಲಾಗಿದೆ ಎಂದರು. ಚರ್ಚ್‌ನ ಸಹಾಯಕ ನಿರ್ದೇಶಕ ಫಾ| ಜೆನ್ಸಿಲ್‌ ಆಳ್ವ, ಚರ್ಚ್‌ನ 18 ಆಯೋಗದ ಅಧ್ಯಕ್ಷ ರಿಚರ್ಡ್‌ ಪಿಂಟೊ, ಜಾನ್‌ ಡಿ’ಸೋಜಾ, ಸಂತೋಷ್‌ ಡಿ’ಸೋಜಾ, ಲೀನಾ ಡಿ’ಸಿಲ್ವಾ ಉಪಸ್ಥಿತರಿದ್ದರು.

ಭಿಕ್ಷಾಟನೆಗಿಲ್ಲ ಅವಕಾಶ
ವಾರ್ಷಿಕ ಮಹೋತ್ಸವದ ಸಂದರ್ಭ ನಡೆಯುವ ಭಿಕ್ಷಾಟನೆಯನ್ನು ಈ ವರ್ಷ ಕಾನೂನಾತ್ಮಕವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಹಬ್ಬದ ಶುಕ್ರವಾರ ಭಿಕ್ಷುಕರಿಗೆ ನೀಡುತ್ತಿದ್ದ ಹಣ ವಿತರಣೆಯನ್ನು ನಿಷೇಧಿಸಲಾಗಿದ್ದು, ಜಾತ್ರೆಯಲ್ಲಿ ಭಿಕ್ಷುಕರು ಕಂಡುಬಂದರೆ ನಿರಾಶ್ರಿತ ಕೇಂದ್ರಗಳಿಗೆ ಬಿಡಲಾಗುವುದು ಎಂದು ಫಾ| ಜಾರ್ಜ್‌ ಡಿ’ಸೋಜಾ ತಿಳಿಸಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.