ಪ್ರಶ್ನೆಪತ್ರಿಕೆ ಸೋರಿಕೆ: ಹೊಸ ನೌಕರರಲ್ಲಿ ಆತಂಕ


Team Udayavani, Jan 16, 2019, 6:25 AM IST

prashne.jpg

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಚಾಲಕ ಕಂ ನಿರ್ವಾಹಕ ಸೇರಿದಂತೆ ಈಚೆಗೆ ನೇಮಕಗೊಂಡ ಸುಮಾರು ಎರಡು ಸಾವಿರ ಅಭ್ಯರ್ಥಿಗಳ ಭವಿಷ್ಯ ಈಗ ಸಿಸಿಬಿ ಪೊಲೀಸರು ನೀಡುವ ವರದಿ ಅವಲಂಬಿಸಿದೆ.

“ಪೊಲೀಸ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ’ದಲ್ಲಿ ಬಂಧನಕ್ಕೊಳಪಟ್ಟ ಸೋಮಪ್ಪ ಮೇಲಿನಮನಿ ಬಿಎಂಟಿಸಿ ಪರೀಕ್ಷೆಯಲ್ಲಿ ಟಾಪರ್‌ ಆಗಿದ್ದ ಎಂಬ ಅಂಶ ಬೆಳಕಿಗೆ ಬಂದ ಬೆನ್ನಲ್ಲೇ ನಿಗಮವು ಆಂತರಿಕ ತನಿಖೆ ನಡೆಸಿದ್ದು, ಜತೆಗೆ ಸಿಸಿಬಿ ನೀಡುವ ವರದಿಯನ್ನೂ ಎದುರು ನೋಡುತ್ತಿದೆ. ಆ ವರದಿಯ ಫ‌ಲಿತಾಂಶಗಳನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಬಿಎಂಟಿಸಿ ಉದ್ದೇಶಿಸಿದೆ. ಹಾಗಾಗಿ, ಹೊಸದಾಗಿ ನೇಮಕಗೊಂಡವರ ಭವಿಷ್ಯ ಡೋಲಾಯಮಾನ ಆಗಿದೆ. 

1,400 ಚಾಲಕ ಕಂ ನಿರ್ವಾಹಕರು, ಅಂದಾಜು 300 ತಾಂತ್ರಿಕ, 200 ಭದ್ರತಾ ಸಿಬ್ಬಂದಿ ಒಳಗೊಂಡಂತೆ ಎರಡು ಸಾವಿರ ಜನರನ್ನು ಐದು ತಿಂಗಳ ಹಿಂದಷ್ಟೇ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಅವರೆಲ್ಲರಿಗೂ ಆದೇಶದ ಪ್ರತಿಯನ್ನೂ ನೀಡಲಾಗಿದ್ದು, ಕೆಲವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಈ ಮಧ್ಯೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಬಹಿರಂಗವಾಗಿದ್ದು, ಇಡೀ ಪರೀಕ್ಷಾ ಪ್ರಕ್ರಿಯೆಯೇ ಈಗ ಪ್ರಶ್ನಾರ್ಹವಾಗಿದೆ.

ಹಾಗೊಂದು ವೇಳೆ ದೊಡ್ಡ ಪ್ರಮಾಣದಲ್ಲಿ ಇದು ನಡೆದಿದ್ದರೆ, ಪರೀಕ್ಷಾ ಪ್ರಕ್ರಿಯೆ ರದ್ದುಗೊಳಿಸುವ ಸಾಧ್ಯತೆಯೂ ಇದೆ. ಆದರೆ, ಇದು ಯಾವ ಹಂತದಲ್ಲಿ ಸೋರಿಕೆ ಆಗಿದೆ? ಬಿಎಂಟಿಸಿ ವ್ಯಾಪ್ತಿಯಲ್ಲಿ ಸೋರಿಕೆ ಆಗಿದೆಯೇ? ಪರೀಕ್ಷಾ ಪ್ರಕ್ರಿಯೆ ನಡೆಸುವ ಹೊಣೆಹೊತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಹಂತದಲ್ಲಿ ಲೋಪ ಆಗಿದೆಯೇ? ಎಷ್ಟು ಪ್ರಮಾಣದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬುದನ್ನು ಅವಲಂಬಿಸಿದೆ ಎಂದು ಹೆಸರು ಹೇಳಲಿಚ್ಛಿಸದ ಬಿಎಂಟಿಸಿ ಉನ್ನತ ಅಧಿಕಾರಿಯೊಬ್ಬರು ಹೇಳಿದರು. 

ಪಿಯುಸಿಯಲ್ಲಿ ಶೇ. 75 ಅಂಕ: ಪ್ರಶ್ನೆಪತ್ರಿಕೆ ಮೊದಲೇ ಅಭ್ಯರ್ಥಿಗಳಿಗೆ ಸಿಕ್ಕಿರಬಹುದು ಅಥವಾ ಮೇಲ್ವಿಚಾರಕರನ್ನು ಬುಕಿಂಗ್‌ ಮಾಡಿ, ಪರೀಕ್ಷೆ ಬರೆಯಲು ಪೂರಕ ವ್ಯವಸ್ಥೆ ರೂಪಿಸಿರಬಹುದು. ಎಷ್ಟು ಜನರಿಗೆ ಇದು ತಲುಪಿದೆ ಎನ್ನುವುದು ಸೇರಿದಂತೆ ಎಲ್ಲವೂ ಸಿಸಿಬಿ ಪೊಲೀಸರ ತನಿಖಾ ವರದಿಯಿಂದ ಬೆಳಕಿಗೆ ಬರಲಿದೆ. ಈ ಮಧ್ಯೆ ಪ್ರಾಥಮಿಕ ಹಂತದಲ್ಲಿ ಆಂತರಿಕ ತನಿಖೆಯಲ್ಲಿ ಬಿಎಂಟಿಸಿಯಿಂದ ಯಾವುದೇ ಲೋಪಗಳು ಕಂಡುಬಂದಿಲ್ಲ.

ಅದೇ ರೀತಿ, ಬಂಧನಕ್ಕೊಳಗಾದ ಆರೋಪಿ ಸೋಮಪ್ಪ ಮೇಲಿನಮನಿ ನೇಮಕಾತಿ ವೇಳೆ ಸಲ್ಲಿಸಿದ ದಾಖಲಾತಿಗಳನ್ನೂ ಪರಿಶೀಲನೆಗೊಳಪಡಿಸಿದ್ದು, ಆತ ಪಿಯುಸಿಯಲ್ಲಿ 440ಕ್ಕೂ ಹೆಚ್ಚು ಅಂಕ ಪಡೆದಿದ್ದ ಎಂದು ನಿಗಮದ ಮೂಲಗಳು ತಿಳಿಸಿವೆ. ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅತ್ಯಂತ ಕಡಿಮೆ ಅಂಕದಲ್ಲಿ ನೌಕರಿಯಿಂದ ವಂಚಿತರಾದ ಅಭ್ಯರ್ಥಿಗಳಿಂದ ಪರೀಕ್ಷಾ ಪ್ರಕ್ರಿಯೆ ವಿರುದ್ಧ ಕೂಗು ಕೇಳಿಬರುತ್ತಿದೆ.

ಸಾಧ್ಯವಾದರೆ ಇದನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರುವ ಎಚ್ಚರಿಕೆಯನ್ನೂ ಅವರು ನೀಡುತ್ತಿದ್ದಾರೆ. ಆದರೆ, ಪ್ರಕರಣದ ವರದಿಯನ್ನು ಬಿಎಂಟಿಸಿಗೆ ಸಲ್ಲಿಸಿದ ನಂತರ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವುದಾಗಿ ಹೆಸರು ಹೇಳಲಿಚ್ಛಿಸದ ಅಭ್ಯರ್ಥಿಗಳು ಸ್ಪಷ್ಟಪಡಿಸಿದ್ದಾರೆ. ಮತ್ತೂಂದೆಡೆ ಹೊಸದಾಗಿ ನೌಕರಿ ಸೇರಿರುವ ಅಭ್ಯರ್ಥಿಗಳಿಗೂ ಈ ಪ್ರಕರಣ ಅಭದ್ರತೆಯ ಆತಂಕ ಸೃಷ್ಟಿಸಿದೆ.

ಆರೋಪಿ ಅಮಾನತು: ಈ ಮಧ್ಯೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಡಿ ಬಂಧನಕ್ಕೊಳಗಾದ ಬಿಎಂಟಿಸಿ ಚಾಲಕ ಸೋಮಪ್ಪ ಮೇಲಿನಮನಿ ಅಮಾನತುಗೊಂಡಿದ್ದಾರೆ ಎಂದು ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 48 ಗಂಟೆಗಳಿಗಿಂತ ಹೆಚ್ಚು ಅವಧಿ ನಿಗಮದ ಯಾವುದೇ ನೌಕರ ಜೈಲಿನಲ್ಲಿದ್ದರೆ, ಅಟೋಮೆಟಿಕ್‌ ಆಗಿ ಆತ ಅಮಾನತುಗೊಳ್ಳುತ್ತಾನೆ. ಸೋಮಪ್ಪ ವಿಚಾರದಲ್ಲೂ ಈ ನಿಯಮ ಅನ್ವಯ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ಇಲಾಖಾ ತನಿಖೆ ನಡೆಸುವುದರ ಜತೆಗೆ ಸಿಸಿಬಿ ಪೊಲೀಸರಿಂದಲೂ ನಮಗೆ ತನಿಖಾ ವರದಿ ಸಲ್ಲಿಕೆ ಆಗಲಿದೆ. ಅದರಿಂದ ಯಾವ ಮಟ್ಟದ ಅಕ್ರಮ ನಡೆದಿದೆ ಎಂಬುದು ತಿಳಿಯಲಿದ್ದು, ಅದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. 
-ಅನುಪಮ್‌ ಅಗರವಾಲ್‌, ನಿರ್ದೇಶಕರು, ಬಿಎಂಟಿಸಿ. 

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.