ಶರಣ ಸಂಸ್ಕೃತಿ ಉತ್ಸವ-ಜನಜಾಗೃತಿ ಪಾದಯಾತ್ರೆ


Team Udayavani, Jan 16, 2019, 8:52 AM IST

dvg-2.jpg

ದಾವಣಗೆರೆ: ಸರ್ವರನ್ನು ಸಮಾನತೆಯಿಂದ ಕಾಣುವ ಮೂಲಕ ಎಲ್ಲರನ್ನು ಒಂದು ಮಾಡುವ ಶಕ್ತಿ ಶರಣ ಸಂಸ್ಕೃತಿಗಿದೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು.

ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಮಂಗಳವಾರ ವಿನೋಬನಗರದ ಶಂಭುಲಿಂಗೇಶ್ವರ ದೇವಸ್ಥಾನದಿಂದ ವಿವಿಧೆಡೆ ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ನೇತೃತ್ವ ವಹಿಸಿ ಮಾತನಾಡಿದರು.

ಶರಣ ಸಂಸ್ಕೃತಿ ಬೇರೆ ಅಲ್ಲ. ಅದು ವಿಶ್ವ ಸಂಸ್ಕೃತಿಯಾಗಿದೆ. ಎಲ್ಲರನ್ನು ಒಂದು ಮಾಡುವ ಸಂಸ್ಕೃತಿ ಇದಾಗಿದೆ. ಈ ಸಂಸ್ಕೃತಿಯನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡರೆ ಎಲ್ಲಾ ರೀತಿಯ ಸುಖ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದರು.

ಬಸವಾದಿ ಶರಣರು ನೀಡಿರುವ ಕಾಯಕ, ದಾಸೋಹ, ಸಮಾನತೆ, ಶಿವಯೋಗ ತತ್ವಗಳು ಎಲ್ಲರ ಬದುಕಿಗೆ ಜಾಗತಿಕ ತತ್ವಗಳಾಗಿವೆ. ಅವರ ಆದರ್ಶಗಳು ಪ್ರತಿಯೊಬ್ಬರ ಬದುಕಿನ ಪ್ರೀತಿಯ ಸಂಕೇತ. ಮಾನವೀಯತೆಯ ಸಂಸ್ಕೃತಿ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಸಂಸ್ಕೃತಿ ಇದಾಗಿದೆ ಎಂದು ಹೇಳಿದರು. ಮನುಷ್ಯ ಇಂದು ಎಷ್ಟೇ ಗಳಿಸಿದ್ದರೂ ಕೂಡ ಇನ್ನೂ ಬಯಕೆಗಳ ಬೆನ್ನೇರಿ ಹೊರಟಿದ್ದಾನೆ. ಹಾಗಾಗಿ ಮನಸಿನಲ್ಲಿ ಶಾಂತಿ, ನೆಮ್ಮದಿ ಎನ್ನುವುದು ಕಣ್ಮರೆಯಾಗಿದೆ. ಮನುಷ್ಯ ತನ್ನ ಬಯಕೆಗಳಿಗೆ ಬ್ರೇಕ್‌ ಹಾಕಿದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾಧ್ಯ ಎಂದರಲ್ಲದೇ, ಮನುಷ್ಯನಿಗೆ ಅತ್ಯವಶ್ಯವಿರುವ ನೆಮ್ಮದಿಯ ಗುಟ್ಟನ್ನು ಚಿತ್ರದುರ್ಗ ಬೃಹನ್ಮಠದ ಶ್ರೀ ಡಾ| ಮುರುಘಾಶರಣರು ಜ.18ರಿಂದ 20ರವರೆಗೆ ಶಿವಯೋಗ್ರಾಮದಲ್ಲಿ ನಡೆಯುವ ಶ್ರೀ ಜಯದೇವ ಜಗದ್ಗುರುಗಳ 62ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ಸಹಜ ಶಿವಯೋಗದಲ್ಲಿ ತಿಳಿಸಲಿದ್ದಾರೆ ಎಂದರು.

ವಿನೋಬನಗರದ ಎ. ನಾಗರಾಜ್‌ ಅಭಿಮಾನಿಗಳ ಬಳಗದ ಸೋಮಶೇಖರ್‌, ಲಕ್ಷ್ಮಣ್‌, ಶಿವಾಜಿರಾವ್‌, ಕಾಳಿಂಗರಾಜು, ಯೋಗೀಶ್‌, ಯುವರಾಜ್‌, ಚನ್ನಬಸವ ಶೀಲವಂತ್‌, ಎಂ.ಎಸ್‌. ಪ್ರೇರಣಾ, ನಿಂಗಪ್ಪ, ಕೊಟ್ರೇಶ್‌ ಹಿರೇಮs್, ಮಂಜಣ್ಣ, ಶಿವರಾಜ್‌, ವಾಗೀಶ್‌, ಬೆಳವಾಗಿ ಚನ್ನಬಸಪ್ಪ, ಶರಣಪ್ಪ ಇತರರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಬಸವಕಲಾಲೋಕದ ಕಲಾವಿದರು ದಾರಿಯುದ್ದಕ್ಕೂ ವಚನ ಗಾಯನ ನಡೆಸಿಕೊಟ್ಟರು.

ಟಾಪ್ ನ್ಯೂಸ್

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

ಬೆಳಗಾವಿ; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.