ದಾಸ-ಶರಣ ಸಾಹಿತ್ಯ ಸಮಾಜದ ಕಣ್ಣು


Team Udayavani, Jan 16, 2019, 9:53 AM IST

ray-2.jpg

ರಾಯಚೂರು: ದಾಸ ಮತ್ತು ಶರಣ ಸಾಹಿತ್ಯ ಜನರಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರ ಮೂಡಿಸಿವೆ. ದಾಸರು ಭಕ್ತಿ ಸಾಹಿತ್ಯ ನೀಡಿದರೆ, ವಚನಕಾರರು ಅನುಭಾವಿ ಸಾಹಿತ್ಯ ನೀಡಿದ್ದಾರೆ. ದಾಸ ಸಾಹಿತ್ಯ ಹಾಗೂ ಶರಣ ಸಾಹಿತ್ಯ ಸಮಾಜದ ಎರಡು ಕಣ್ಣುಗಳಿದ್ದಂತೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ವಿಠuಲರಾವ್‌ ಗಾಯಕವಾಡ ಹೇಳಿದರು.

ಕಲ್ಪತರು ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಇತ್ತೀಚೆಗೆ ನಗರದ ಜೋಡು ವೀರಾಂಜನೇಯ ದೇವಸ್ಥಾನ ಸಭಾಂಗಣದಲ್ಲಿ ನಡೆದ ದಾಸೋತ್ಸವ-2019 ದಾಸ ಸಾಹಿತ್ಯ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ದಾಸ ಮತ್ತು ಶರಣ ಸಾಹಿತ್ಯ ನಾಡಿಗೆ ಸಿಕ್ಕ ವಿಶೇಷ ಕೊಡುಗೆಯಾಗಿದೆ. ಸಮಾಜವನ್ನು ಸನ್ನಡತೆ, ಸನ್ಮಾರ್ಗದಲ್ಲಿ ನಡೆಯುವಂತೆ ಮಾಡುವಲ್ಲಿ ಈ ಸಾಹಿತ್ಯ ಪ್ರಕಾರಗಳು ಮಹತ್ವದ ಪಾತ್ರ ವಹಿಸಿವೆ. ಉಭಯ ಸಾಹಿತ್ಯದ ಸಾರವು ಬಹುತೇಕ ಒಂದೇಯಾಗಿದೆ. ಹಲವು ಆಯಾಮಗಳ ಮೂಲಕ ಸತ್ಯ ತೋರಿದ್ದಾರೆ. ಭೋಗ ಜೀವನದ ಬದಲು ಅಧ್ಯಾತ್ಮದ ಜೀವನದಿಂದಲೇ ಮುಕ್ತಿ ಎಂದು ಸಂದೇಶ ಸಾರಿದ್ದಾರೆ ಎಂದರು.

ಮೈಸೂರು ವಿವಿ ಪ್ರಸಾರಾಂಗ ಸಹ ನಿರ್ದೇಶಕ ಅನಿಲಕುಮಾರ ಬೊಮ್ಮಘಟ್ಟ ಮಾತನಾಡಿ, ಹರಿದಾಸ ಸಾಹಿತ್ಯದ ಅನುಮಾನ ಹಾಗೂ ಊಹಾಪೋಹಗಳ ಬಗ್ಗೆ ವಿಸ್ತೃತ ಅಧ್ಯಯನ ನಡೆಯಬೇಕಿದೆ. ಕೀರ್ತನೆಗಳ ವರ್ಗೀಕರಣವೂ ಮಾಡಬೇಕಿದೆ. ಮಹಿಳೆಯರ ಸಮಕಾಲಿನ ಸವಾಲುಗಳ ಕುರಿತು ಅಧ್ಯಯನ ನಡೆಯಬೇಕಿದೆ. ಸಮಾಜದಲ್ಲಿ ತಾರತಮ್ಯಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ ಎಂದರು.

ಸಮೀರ್‌ ಸಾಂಸ್ಕೃತಿಕ ಸೇವಾ ವಿಶ್ವಸ್ಥ ಮಂಡಳಿ ಉಪಾಧ್ಯಕ್ಷೆ ಜಯಲಕ್ಷ್ಮೀ ಮಂಗಳಾಮೂರ್ತಿ ಸೇರಿ ಇತರರು ಮಾತನಾಡಿದರು.

ಕಲ್ಪತರು ಪ್ರಶಸ್ತಿ ಪ್ರದಾನ: ಸತ್ಯನಾರಾಯಣ ಮುಜುಂದಾರ, ಪ್ರಮೋದ ಕಟ್ಟಿ, ವೆಂಕಟೇಶ ನವಲಿ ಅವರಿಗೆ ಕಲ್ಪತರು ವಿಶೇಷ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಯಣ್ಣ ಸಿರವಾರ, ತ್ರಿವೇಣಿಬಾಯಿ, ಶಾಶ್ವತಸ್ವಾಮಿ ಮುಕ್ಕುಂದಿಮಠ, ಶ್ರೀಹರಿರಾವ್‌ ಕುಲಕರ್ಣಿ ಸೇರಿ ಇತರರನ್ನು ಸನ್ಮಾನಿಸಲಾಯಿತು.

ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವಲಯ ಉಪಾಧ್ಯಕ್ಷ ನರಸಿಂಗರಾವ್‌ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಡಾ| ಬಸವಪ್ರಭು ಪಾಟೀಲ ಬೆಟ್ಟದೂರು, ಸಾಹಿತಿ ದಸ್ತಗಿರಸಾಬ್‌ ದಿನ್ನಿ, ಶೀಲಾದಾಸ, ಎಂ.ರೇವತಿ, ಹರೀಶಾಚಾರ್ಯ, ಹನುಮೇಶಾಚಾರ್ಯ, ಲಕ್ಷ್ಮೀಕಾಂತ ಸೇರಿ ಅನೇಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.