ಬೆಳೆ ಸಮೀಕ್ಷೆ: ಯುವಕರ ಕೈಸೇರದ ಸಂಭಾವನೆ


Team Udayavani, Jan 17, 2019, 12:30 AM IST

cover-crop-survey.jpg

ಸುಬ್ರಹ್ಮಣ್ಯ: “ನಿರುದ್ಯೋಗಿ ಯುವಕರ ಸಂಪಾದನೆಗೆ ಸುವರ್ಣಾವಕಾಶ; ಮೊಬೈಲ್‌ನಲ್ಲಿ ಕಾಲಹರಣ ಮಾಡುವ ಬದಲು ಮುಂಗಾರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ ಹಣ ಗಳಿಸಿ’ ಎಂಬಿತ್ಯಾದಿ ಹೇಳಿಕೆಗಳ ಮೂಲಕ ನಿರುದ್ಯೋಗಿ ಯುವಕರಲ್ಲಿ ಆಸೆ ಹುಟ್ಟಿಸಿ ಮುಂಗಾರು ಬೆಳೆ ಸಮೀಕ್ಷೆ ಮಾಡಿಸಿಕೊಂಡಿದ್ದ ಸರಕಾರ ಇದೀಗ ಸಂಭಾವನೆ ನೀಡದೆ ಸತಾಯಿಸುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಬೆಳೆ ಸಮೀಕ್ಷೆಯನ್ನು ಸರಕಾರಿ ಸಿಬಂದಿ ಜತೆ ಖಾಸಗಿ ನಿರುದ್ಯೋಗಿ ಯುವಕರ ಕೈಯಲ್ಲಿ ಮಾಡಿಸಲಾಗಿತ್ತು. ಸಮೀಕ್ಷೆ ಪೂರ್ಣಗೊಂಡು ಮೂರು ತಿಂಗಳಾ ದರೂ ಸಂಭಾವನೆ ಕೈಸೇರಿಲ್ಲ.

ಏಕೆ ಈ ಕ್ರಮ?
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೃಷಿಕರ ಮುಂಗಾರು ಪೂರ್ವ ಬೆಳೆ ಸಮೀಕ್ಷೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿತ್ತು. ಕಳೆದ ಬಾರಿ ಗ್ರಾಮ ಲೆಕ್ಕಿಗರ ಮೂಲಕ ಸಮೀಕ್ಷೆ ಕೈಗೊಂಡಿತ್ತು. ಇದರಿಂದ ಎರಡು ತಿಂಗಳ ಅವಧಿ ಅವರಿಗೆ ಬೇರೆ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತದೆಂಬ ಕಾರಣಕ್ಕೆ ಈ ಬಾರಿ ಆಯಾ ಗ್ರಾಮದ ಖಾಸಗಿ ವ್ಯಕ್ತಿಗಳನ್ನು ಬೆಳೆ ಸಮೀಕ್ಷೆಗಾಗಿ ನಿಯೋಜಿಸಲಾಗಿತ್ತು.

422 ಗ್ರಾಮಗಳಲ್ಲಿ ಸಮೀಕ್ಷೆ 
ಪ್ರತಿ ಸರ್ವೆ ನಂಬರಿನ ಸಮೀಕ್ಷೆಗೆ ತಲಾ 10 ರೂ. ಸಂಭಾವನೆಯನ್ನು ನಿಗದಿ ಪಡಿಸಲಾಗಿತ್ತು. ದ.ಕ. ಜಿಲ್ಲೆಯ 422 ಗ್ರಾಮಗಳಲ್ಲಿ ಸಮೀಕ್ಷೆ ಮಾಡಲು 1,250 ಖಾಸಗಿ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಸೆಪ್ಟಂಬರ್‌ನಲ್ಲಿ ಸಮೀಕ್ಷೆಗೆ ಬಳಸಿ ಕೊಂಡಿದ್ದು, ಎರಡು ಬಾರಿ ತರಬೇತಿ ನೀಡಲಾಗಿತ್ತು. ಬಳಿಕ ಯುವಕರು ರೈತರ ಮನೆ, ಕೃಷಿ ಭೂಮಿಗಳಿಗೆೆ ತೆರಳಿ ಮೊಬೈಲ್‌ನಲ್ಲಿ ಆ್ಯಪ್‌ ಮೂಲಕ ಮಾಹಿತಿ ಪಡೆದುಕೊಂಡು ಹಿಂದಿರುಗಿದ್ದರು. ಇದರಿಂದ ರೈತರಿಗೆ ವಿಮ ಪರಿಹಾರ ನೀಡಲು ಸರಕಾರಕ್ಕೆ ಅನುಕೂಲವಾಗಿತ್ತು.

ಬಣ್ಣದ ಭರವಸೆ!
ಸಮೀಕ್ಷೆ ಪೂರ್ಣವಾದ ತತ್‌ಕ್ಷಣದಲ್ಲಿ ಹಣ ನಿಮ್ಮ ಖಾತೆಗೆ ಸಂದಾಯವಾಗುತ್ತದೆ ಎಂದು ಯುವಕರ ಕೈಯಿಂದ ಆಧಾರ್‌ ಕಾರ್ಡ್‌, ಬ್ಯಾಂಕು ಖಾತೆ ವಿವರಗಳನ್ನು ಅಧಿಕಾರಿಗಳು ಕಲೆಹಾಕಿದ್ದರು. ಉತ್ತಮ ನಿರ್ವಹಣೆ ತೋರಿದ ಯುವಕರಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಅವಕಾಶ ನೀಡುವುದಾಗಿಯೂ ಅಧಿಕಾರಿಗಳು ಭರವಸೆ ನೀಡಿದ್ದರು. ಅದೂ ಈಡೇರಿಲ್ಲ ಎಂದು ಯುವಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಾಹಿತಿ ಕೇಳುತ್ತೇವೆ
ಸಮೀಕ್ಷೆಯಲ್ಲಿ ಭಾಗವಹಿಸಿದ ಯುವಕರಿಗೆ ಸರಕಾರದಿಂದ ನೀಡಬೇಕಿರುವ ಸಂಭಾವನೆ ವಿಳಂಬ ವಿಚಾರವಾಗಿ ತಾಲೂಕು ದಂಡಾಧಿಕಾರಿಗಳ ಬಳಿಯಿಂದ ಮಾಹಿತಿ ಪಡೆಯಲಾಗುವುದು.
– ಎಚ್‌.ಕೆ. ಕೃಷ್ಣ ಮೂರ್ತಿ, ಸ. ಆಯುಕ್ತರು, ಪುತ್ತೂರು

ಹಣ ಬಂದಿಲ್ಲ
ಸಮೀಕ್ಷೆ ವೇಳೆ ಪಹಣಿ ಪತ್ರವೊಂದಕ್ಕೆ ತಲಾ 10 ರೂ.ನಂತೆ ಸಂಭಾವನೆ ನೀಡಲಾಗುವುದು ಎಂದಿದ್ದರು. ಆದರೆ ಇಂದಿನ ವರೆಗೆ ಹಣ ನಮಗೆ ದೊರಕಿಲ್ಲ.
– ಆದರ್ಶ, ಸಮೀಕ್ಷೆಯಲ್ಲಿ ಪಾಲ್ಗೊಂಡ ಯುವಕ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.