ನಮ್ಮದು ಗೆಲ್ಲುವ ಏಕದಿನ: ಖಾದರ್‌​​​​​​​


Team Udayavani, Jan 17, 2019, 12:30 AM IST

ut-k.jpg

ಮಂಗಳೂರು: ಬಿಜೆಪಿಯವರು ಟೆಸ್ಟ್‌ ಮ್ಯಾಚ್‌ ಆಡುತ್ತಾರೆ. ನಾವು ವನ್‌ ಡೇ ಮ್ಯಾಚ್‌ ಆಡಿ ಗೆಲೆ¤àವೆ- ಇದು ಆಪರೇಶನ್‌ ಕಮಲ ಪ್ರಕರಣ ಬಗ್ಗೆ ಸಚಿವ ಯು.ಟಿ. ಖಾದರ್‌ ಪ್ರತಿಕ್ರಿಯೆ.

ಪತ್ರಿಕಾಗೋಷ್ಠಿಯಲ್ಲಿ ಅವರು, ಬಿಜೆಪಿಯ ಎಲ್ಲ ಪ್ರಯತ್ನ ವ್ಯರ್ಥ. ರಾಜ್ಯ ಸರಕಾರದ ಅಸ್ತಿತ್ವಕ್ಕೆ ಭಯವಿಲ್ಲ ಎಂದರು. 156 ತಾಲೂಕುಗಳು ಬರಪೀಡಿತ ಆಗಿರುವಾಗ ಅದರ ಬಗ್ಗೆ ಹಾಗೂ ಬಜೆಟ್‌ಗೆ ಸಿದ್ಧತೆ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗ ಬೇಕಾದವರು ರೆಸಾರ್ಟ್‌ ನಲ್ಲಿ ಕುಳಿತುಕೊಂಡು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಬಿಬಿಎಂಪಿಯಲ್ಲಿ 4 ಮಂದಿ ಕಾರ್ಪೊರೇಟರ್‌ಗಳನ್ನು ಹಿಡಿದಿಟ್ಟು ಕೊಳ್ಳಲು ಬಿಜೆಪಿಯರಿಗೆ ಸಾಧ್ಯ ವಾಗಿಲ್ಲ; ಹಾಗಿರುವಾಗ 15 ಮಂದಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು. 

ಯಾವ ತ್ಯಾಗಕ್ಕೂ ಸಿದ್ಧ 
ಪಕ್ಷದಲ್ಲಿನ ಅತೃಪ್ತರ ಮನವೊಲಿಸಲು ಪಕ್ಷದ ವರಿಷ್ಠರು ಸಚಿವ ಸ್ಥಾನ ತ್ಯಾಗ ಮಾಡಲು ಕೇಳಿಕೊಂಡಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಅಂತಹ ಪ್ರಸ್ತಾಪ ಬಂದಿಲ್ಲ. ನನಗೆ ಹೆಸರು, ಅಧಿಕಾರ ದೊರಕಿರುವುದು ಕಾಂಗ್ರೆಸ್‌ನಿಂದ. ಹಾಗಾಗಿ ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂದರು. ಕುತ್ತಿಗೆಗೆ ಹಗ್ಗ ಹಾಕಿ ಗಲ್ಲು ಶಿಕ್ಷೆ ನೀಡುವುದಾಗಿ ಹೇಳಿದರೂ ಕಾಂಗ್ರೆಸ್‌ ಬಿಟ್ಟು ಹೋಗುವುದಿಲ್ಲ ಎಂದರು. 

58 ಕೋಟಿ ರೂ. ಬಿಡುಗಡೆ 
ಪ್ರಕೃತಿ ವಿಕೋಪ ಪರಿಹಾರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಗೆ ಮತ್ತೆ 58 ಕೋಟಿ ರೂ. ಅನುದಾನ ಬಿಡುಗಡೆ ಆಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ  6 ಕೋಟಿ ರೂ. ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಬಜೆಟ್‌ ಪೂರ್ವ ಸಭೆ 
ಬಜೆಟ್‌ಗೆ ಸಂಬಂಧಿಸಿ ಜಿಲ್ಲಾ  ಮಟ್ಟದ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ  ವಿವಿಧ ಬೇಡಿಕೆಗಳ ಬಗ್ಗೆ  ಚರ್ಚಿಸಿ ಕೈಗೊಂಡ ನಿರ್ಣಯಗಳನ್ನು ಸಿಎಂಗೆಸಲ್ಲಿಸಲಾಗುವುದು ಮುಖ್ಯಮಂತ್ರಿ ಯವರು ಬಜೆಟ್‌ಗೆ ಪೂರ್ವ ಭಾವಿಯಾಗಿ ವಿವಿಧ ಇಲಾಖೆಗಳ ಸಭೆ ನಡೆಸಲಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಬೇಡಿಕೆಗಳ ಕುರಿತಂತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವರು ಎಂದು ಸಚಿವ ಖಾದರ್‌ ತಿಳಿಸಿದರು.

ಕಾಂಗ್ರೆಸ್‌ ಮುಖಂಡರಾದ ಈಶ್ವರ ಉಳ್ಳಾಲ, ರಮೇಶ್‌ ಶೆಟ್ಟಿ, ಸಂತೋಷ್‌ ಕುಮಾರ್‌, ಸಾಹುಲ್‌ ಹಮೀದ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ನಳಿನ್‌ ಹೇಳಿಕೆ ಹಸಿ ಸುಳ್ಳು
ಮಂಗಳೂರು:
ವಿಜಯ ಬ್ಯಾಂಕ್‌ ವಿಲೀನ ಪ್ರಸ್ತಾವ ಹಿಂದಿನ ಯುಪಿಎ ಸರಕಾರದ್ದು ಹಾಗೂ ಹಣಕಾಸು ಸ್ಥಾಯೀ ಸಮಿತಿಯಲ್ಲಿ ಇದನ್ನು ಸಂಸದ ಡಾ| ಎಂ. ವೀರಪ್ಪ ಮೊಲಿ ಅವರಿಗೆ ತಡೆಯಬಹುದಿತ್ತು ಎಂಬ ಸಂಸದ ನಳಿನ್‌ ಕುಮಾರ್‌ ಹೇಳಿಕೆಗೆ ಖಾದರ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ನಳಿನ್‌ ಹೇಳಿಕೆ ರಾಜಕೀಯ ಪ್ರೇರಿತ, ಆಧಾರ ರಹಿತ; ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿಯ ಸುಳ್ಳು ಹೇಳಿಕೆ ನೀಡಬಾರದು. ಆರು ತಿಂಗಳಿಂದ ವಿಷಯ ಗೊತ್ತಿದ್ದರೂ ಕನಿಷ್ಠ ವಿಜಯ ಬ್ಯಾಂಕಿನ ಹೆಸರು ಉಳಿಸಲು ಸಂಸದರು ಪ್ರಯತ್ನಿಸಿಲ್ಲ; ಹಾಗಿರುವಾಗ ಬೇರೆ ನಾಯಕರ ಮೇಲೆ ಆರೋಪ ಹೊರಿಸುವುದು ಸರಿಯಲ್ಲ. ಅವರು ಬ್ಯಾಂಕಿನ ಹೆಸರುಳಿಸುವ ಯತ್ನ ಮಾಡಿದರೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದರು.

ಬ್ಯಾಂಕಿನ ಹೆಸರನ್ನು ಉಳಿಸಿಕೊಳ್ಳುವಂತೆ ವೀರಪ್ಪ  ಮೊಲಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ತನ್ನ ವಿರುದ್ಧ  ಆರೋಪ ಮಾಡಿದ ಬಗ್ಗೆ ನಳಿನ್‌ಗೂ ಪತ್ರ ಬರೆಯುವೆ ಎಂದು ಮೊಲಿ ತಿಳಿಸಿದ್ದಾರೆ ಎಂದು ಖಾದರ್‌ ಹೇಳಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.