ಯಡಿಯೂರಪ್ಪ ತಲೆದಂಡ ಖಚಿತ : ಗೃಹ ಸಚಿವ ಎಂ.ಬಿ. ಪಾಟೀಲ್
Team Udayavani, Jan 17, 2019, 12:00 AM IST
ಬೆಂಗಳೂರು: ಆಪರೇಷನ್ ಕಮಲ ಮಾಡಲು ಕೈ ಹಾಕಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮಾನ ಮರ್ಯಾದೆ ಹರಾಜಾಗಿದ್ದು, ಆಪರೇಷನ್ ಹಿಂದೆ ಯಡಿಯೂರಪ್ಪ ಪಾತ್ರವಿದ್ದರೆ ಅವರ ತಲೆದಂಡವಾಗುತ್ತದೆ ಎಂದು ಗೃಹ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಕೈ ಹಾಕಿ ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಮುಖಭಂಗವಾದಂತಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಬಿಜೆಪಿಯಲ್ಲಿಯೇ ಬಂಡಾಯ ಶುರುವಾಗಲಿದೆ.ಯಡಿಯೂರಪ್ಪ ಅವರ ನಡೆಯ ಬಗ್ಗೆ ಆ ಪಕ್ಷದ ಶಾಸಕರೇ ಬಹಿರಂಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸ್ವಲ್ಪ ದಿನದಲ್ಲಿ ಯಡಿಯೂರಪ್ಪ ಅವರ ತಲೆದಂಡ ವಾಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಶಾಸಕರಲ್ಲಿ ಆತಂಕವಿಲ್ಲ.ಯಾವ ಶಾಸಕರೂ ಬಿಜೆಪಿಗೆ ಹೋಗುತ್ತಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ರಮೇಶ್ ಜಾರಕಿಹೊಳಿ ಹಾಗೂ ನಾಗೇಂದ್ರ ನನ್ನ ಸ್ನೇಹಿತರು ಇಬ್ಬರೊಂದಿಗೂ ಮಾತನಾಡಿ ದ್ದೇನೆ. ಶಾಸಕಾಂಗ ಸಭೆಯಲ್ಲಿ ಎಲ್ಲರೂ ಹಾಜರಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ