ಪ್ರೇಯಸಿಗಾಗಿ ಗರ್ಭಿಣಿ ಪತ್ನಿಯನ್ನೇ ಕೊಂದ ಪತಿ


Team Udayavani, Jan 17, 2019, 6:26 AM IST

gul-10.jpg

ವಾಡಿ: ಪ್ರೇಯಸಿಗಾಗಿ ಪತಿ ತನ್ನ ಗರ್ಭಿಣಿ ಪತ್ನಿಯನ್ನೇ ಕೊಂದು ಹೂತುಹಾಕಿದ ಪ್ರಕರಣ ತಿಂಗಳ ನಂತರ ಬೆಳಕಿಗೆ ಬಂದಿದೆ.

ತಿಂಗಳ ಹಿಂದೆಯಷ್ಟೇ ಪಟ್ಟಣ ಸಮೀಪದ ಲಕ್ಷ್ಮೀಪುರವಾಡಿ ಗ್ರಾಮದ ಕರಿಷ್ಮಾ (ರೇಷ್ಮಾ) ವಿಜಯಕುಮಾರ ಪವಾರ (23) ಎನ್ನುವರು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದರು. ನಂತರ ಪೊಲೀಸರು ನಡೆಸಿದ ತನಿಖೆಯಿಂದ ಪರಹತಾಬಾದ ಸಮೀಪದ ಕಲಿಫತ್‌ ದರ್ಗಾ ಹತ್ತಿರದ ಹೆದ್ದಾರಿ ಬದಿಯಲ್ಲಿ ಅವರ ಶವ ಪತ್ತೆಯಾಗಿದೆ.

ಪತಿ ವಿಜಯಕುಮಾರ ಪವಾರ ಹಾಗೂ ಆತನ ಪ್ರೇಯಸಿಯಾದ ಅದೇ ಗ್ರಾಮದ ಪೂಜಾ ರಾಠೊಡ ಎನ್ನುವರೇ ಕೊಲೆ ಮಾಡಿದ ಪ್ರಮುಖ ಆರೋಪಿಗಳಾಗಿದ್ದಾರೆ. ಪತ್ನಿ ಕಾಣೆಯಾಗಿದ್ದಾಳೆ ಎಂದು ಹುಡುಕಾಟ ನಡೆಸುತ್ತಿದ್ದ ಪತಿಯೇ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.

ಘಟನೆ ವಿವರ: ಕೊಲೆಯಾದ ರೇಷ್ಮಾ ಮೂಲತಃ ವಿಜಯಪುರ ಜಿಲ್ಲೆಯ ಡೋಮನಾಳ ತಾಂಡಾ ನಿವಾಸಿಯಾಗಿದ್ದು, 2017ರಲ್ಲಿ ಲಕ್ಷ್ಮೀಪುರವಾಡಿ ಗ್ರಾಮದ ವಿಜಯಕುಮಾರ ಪವಾರ ಎನ್ನುವಾತನೊಂದಿಗೆ ವಿವಾಹವಾಗಿತ್ತು. ಮದುವೆಗೂ ಮುಂಚೆ ಆರೋಪಿ ವಿಜಯಕುಮಾರನು ಪೂಜಾ ಎನ್ನುವಾಕೆಯೊಂದಿಗೆ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆಯೊಂದಿಗೆ ದೈಹಿಕ ಸಂಬಂಧವಿತ್ತು ಎನ್ನುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

ಮದುವೆಯ ನಂತರವೂ ವಿಜಯಕುಮಾರನ ಪ್ರಣಯದಾಟ ಮುಂದುವರಿದಿತ್ತು. ಕಾರಣ ಪತ್ನಿಯೊಂದಿಗೆ ಪದೇಪದೆ ಜಗಳ ಮಾಡುತ್ತಿದ್ದ ವಿಜಯಕುಮಾರ, 2018ರ ಡಿ.4 ರಂದು ಶಾಶ್ವತವಾಗಿ ಪತ್ನಿಯನ್ನು ಮುಗಿಸುವ ಸಂಚು ರೂಪಿಸಿದ್ದ. ತವರು ಮನೆಗೆ ಕಳುಹಿಸುವ ನೆಪದಲ್ಲಿ ಹೆಂಡತಿಯನ್ನು ಬೈಕ್‌ ಮೇಲೆ ಕರೆದೊಯ್ದ ಆರೋಪಿ ವಿಜಯಕುಮಾರ, ಪ್ರೇಯಸಿ ಪೂಜಾಳನ್ನು ಮೊದಲೇ ನಿಗದಿಪಡಿಸಲಾದ ಕೊಲೆ ಮಾಡುವ ಸ್ಥಳಕ್ಕೆ ಕಳುಹಿಸಿದ್ದ.

ಇಬ್ಬರೂ ಸೇರಿ ನಾಲ್ಕು ತಿಂಗಳ ಗರ್ಭಿಣಿ ರೇಷ್ಮಾಳ ಕತ್ತು ಹಿಸುಕಿ ಅಮಾನುಷವಾಗಿ ಕೊಂದು ಹಾಕಿ, ರಸ್ತೆ ಪಕ್ಕದ ಗುಂಡಿಯಲ್ಲಿ ಶವ ಹೂತುಹಾಕಿದ್ದರು. ಡಿ.7 ರಂದು ಅಳಿಯನ ಮನೆಯಿಂದ ಮಗಳು ಕಾಣೆಯಾಗಿದ್ದಾಳೆ ಎನ್ನುವ ಕುರಿತು ಕಿಶನ್‌ ರಾಠೊಡ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿ ವಿಜಯಕುಮಾರ ಕೂಡ ಪತ್ನಿಯ ಹುಡುಕಾಟದ ನಾಟಕವಾಡಿದ್ದ ಎಂದು ಸಿಪಿಐ ಪಂಚಾಕ್ಷರಿ ಸಾಲಿಮಠ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಎಸ್‌ಪಿ ಎನ್‌.ಶಶಿಕುಮಾರ, ಹೆಚ್ಚುವರಿ ಎಸ್‌ಪಿ, ಶಹಾಬಾದ ಡಿವೈಎಸ್‌ಪಿ ಕೆ.ಬಸವರಾಜ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ವಿಜಯಕುಮಾರ ಭಾವಗಿ, ಎಎಸ್‌ಐ ಶಿವಕಾಂತ ಹಾಗೂ ಪೇದೆಗಳಾದ ಲಕ್ಷ್ಮಣ ವಾಣಿ, ದತ್ತು ಜಾನೆ, ಚಂದ್ರಶೇಖರ, ದೊಡ್ಡಪ್ಪ, ಶಬ್ಬೀರ್‌, ಅಶೋಕ, ರುದ್ರುಗೌಡ ಹಾಗೂ ಹೀರಾಲಾಲ ಜಟಿಲವಾದ ಪ್ರಕರಣವನ್ನು ವೈಜ್ಞಾನಿಕ ವಿಧಾನಗಳ ಸಹಾಯದಿಂದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ವಿಜಯಕುಮಾರ ಮತ್ತು ಪೂಜಾ ಸದ್ಯ ಪೊಲೀಸರ ಬಂಧನದಲ್ಲಿದ್ದು, ಗುರುವಾರ ಸಹಾಯಕ ಆಯುಕ್ತರ ಸಮ್ಮುಖದಲ್ಲಿ ಶವ ಹೊರತೆಗೆದು ಪಂಚನಾಮೆ ನಡೆಸಲಿದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.