ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ
Team Udayavani, Jan 17, 2019, 6:55 AM IST
ಹರಿಹರ: ತಾಲೂಕಿನ ಹನಗವಾಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜಗದೀಶಪ್ಪ ಬಣಕಾರ್ ಅಧ್ಯಕ್ಷರಾಗಿ, ವೀರಮ್ಮ ಬಸವರಾಜಪ್ಪ ರಾಯಾಪುರದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿ ನಿವೇದಿತ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದ್ದು, ನಿರ್ದೇಶಕರಾಗಿ ಡಿ.ನಾಗರಾಜಪ್ಪ, ಕೆ.ವಿ ರುದ್ರಮುನಿ, ಎಸ್. ವೀರಪ್ಪ, ಕೆ. ಜಯಪ್ಪ, ಎಚ್.ವಿ ಗುರು, ಬಿ.ಜೆ ಬಸವನಗೌಡ, ಎಚ್.ಸಂತೋಷ್, ಬಿ.ಆರ್ ಮಂಜುಳಾ, ಬಸವಂತಪ್ಪ ಭೋವಿ, ಬಿ. ಪರಶುರಾಮ್ ನೇಮಕವಾದರು.
ನೂತನ ಅಧ್ಯಕ್ಷ ಜಗದೀಶಪ್ಪ ಮಾತನಾಡಿ, ಗ್ರಾಮದ ಪ್ರತಿಯೊಬ್ಬ ಹಾಲು ಉತ್ಪಾದಕರ ಸಹಕಾರದಿಂದ ಗ್ರಾಮದಲ್ಲಿ ಬಿ.ಎಂ.ಸಿ ನಿರ್ಮಾಣವಾಗಿದೆ. ಇದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕಿದೆ. ರಾಜ್ಯ ಒಕ್ಕೂಟದಿಂದ ರೈತರಿಗೆ ಸಿಗುವಂತಹ ಎಲ್ಲಾ ಸೌಲಭ್ಯ ಕೊಡಿಸುವಲ್ಲಿ ತಾವು ಪ್ರಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.
ಡೈರಿ ಕಾರ್ಯದರ್ಶಿ ಬಿ. ಸುಮಾ, ಹಾಲು ಪರೀಕ್ಷಕ ಬಿ. ದೇವೇಂದ್ರಪ್ಪ, ಸಿಬ್ಬಂದಿ ಡಿ. ಪವನ್, ಬಿ. ಮಂಜುನಾಥ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ