ಈಗ 13.39 ಲಕ್ಷ ಮತದಾರರು


Team Udayavani, Jan 17, 2019, 9:08 AM IST

cta-4.jpg

ಚಿತ್ರದುರ್ಗ: ಜಿಲ್ಲೆಯ ಎಲ್ಲ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ವಿಶೇಷವಾಗಿ ಪರಿಷ್ಕರಣೆ ಮಾಡಲಾಗಿದೆ. ಅಂತಿಮವಾಗಿ ಜಿಲ್ಲೆಯಲ್ಲಿ 13,39,248 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, 2018ರ ಅಕ್ಟೋಬರ್‌ 10 ರಂದು ಪ್ರಕಟಿಸಿದ ಕರಡು ಪಟ್ಟಿ ಅನ್ವಯ 13,32,168 ಮತದಾರರಿದ್ದರು. ಪರಿಷ್ಕರಣೆ ಅವಧಿಯಲ್ಲಿ ಒಟ್ಟು 1648 ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ 26,433 ಮತದಾರರನ್ನು ಸೇರ್ಪಡೆ ಮಾಡಲಾಗಿದ್ದು, 20,594 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

ಪರಿಷ್ಕರಣೆ ನಂತರ ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರದ ಅನ್ವಯ ಮೊಳಕಾಲ್ಮೂರು 2,30,560, ಚಳ್ಳಕೆರೆ 2,09,814, ಚಿತ್ರದುರ್ಗ 2,51,312, ಹಿರಿಯೂರು 2,33,775, ಹೊಸದುರ್ಗ 1,87,654, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,26,133 ಮತದಾರರಿದ್ದಾರೆ. ಪರಿಷ್ಕರಣೆ ಅವಧಿಯಲ್ಲಿ ಹೊಸದಾಗಿ ನೋಂದಾಯಿಸಲು ನಮೂನೆ-6ರ ಅಡಿ 26,511 ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ 26,433 ಅನುಮೋದನೆಯಾಗಿ 78 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ 7ರಲ್ಲಿ ಪಟ್ಟಿಯಿಂದ ಕೈಬಿಡಲು ಸಲ್ಲಿಸಿದ 21,201 ಅರ್ಜಿಗಳಲ್ಲಿ 20,594 ಅರ್ಜಿಗಳಿಗೆ ಅನುಮೋದನೆ ನೀಡಿ 607 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ-8ರ ಅಡಿ ತಿದ್ದುಪಡಿಗಾಗಿ 8855 ಅರ್ಜಿಗಳು ಸಲ್ಲಿಕೆಯಾಗಿದ್ದು, 8830 ಅನುಮೋದನೆಯಾಗಿ 25 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ನಮೂನೆ-8 ಎ ಅಡಿ 1114 ಅರ್ಜಿಗಳನ್ನು ಸ್ವೀಕರಿಸಿ 1111 ಅನುಮೋದನೆಯಾಗಿ 3 ತಿರಸ್ಕರಿಸಲ್ಪಟ್ಟಿವೆ ಎಂದು ವಿವರಿಸಿದರು.

ಇಂಟರ್‌ನೆಟ್ ಮೂಲಕ ನಮೂನೆ-6 (1) ಅಡಿ 31, ನಮೂನೆ-7 (1) ಅಡಿ 22, ನಮೂನೆ-8 (1) ಅಡಿ 12 ಅರ್ಜಿಗಳು ಸ್ವೀಕೃತವಾಗಿ ಅನುಮೋದಿಸಲಾಗಿದೆ. ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್‌ ಮೂಲಕ ನಮೂನೆ-6 ರಲ್ಲಿ 94, ನಮೂನೆ-7 ರಲ್ಲಿ 18, 7ಎ ದಲ್ಲಿ 113 ಹಾಗೂ ನಮೂನೆ-8 ಎ ಅಡಿ 2 ಅರ್ಜಿಗಳು ಸ್ವೀಕೃತವಾಗಿದ್ದು ಅವೆಲ್ಲವನ್ನೂ ಅನುಮೋದಿಸಲಾಗಿದೆ. ಜಿಲ್ಲೆಯಲ್ಲಿ 17,87,580 ಜನಸಂಖ್ಯೆ ಇದ್ದು, ಇದರಲ್ಲಿ 13,39,248 ಮತದಾರರಿದ್ದಾರೆ.

ಇದು ಒಟ್ಟು ಜನಸಂಖ್ಯೆಯಲ್ಲಿ ಸರಾಸರಿ ಶೇ. 74.89 ಆಗುತ್ತದೆ. ಕರಡು ಪಟ್ಟಿಯಂತೆ 15,016 ಯುವ ಮತದಾರರಿದ್ದು ಪರಿಷ್ಕರಣೆ ಅವಧಿಯಲ್ಲಿ 12,817 ಯುವ ಮತದಾರರು ನೋಂದಾಯಿಸಿದ್ದರು. 18-19 ವರ್ಷದ ವಯೋಮಾನವುಳ್ಳ 27,833 ಯುವ ಮತದಾರರಿದ್ದಾರೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದುಕೊರತೆಯನ್ನು ಆಲಿಸಲು 1950 ಟೋಲ್‌ ಫ್ರೀ ಸಹಾಯವಾಣಿ ಸ್ಥಾಪಿಸಲಾಗಿದೆ. ಏನಾದರೂ ದೂರುಗಳಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು, ಮಾಹಿತಿ ನೀಡಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್‌, ಚುನಾವಣಾ ತಹಶೀಲ್ದಾರ್‌ ಪ್ರತಿಭಾ ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.