ಉಸಿರು ಕಟ್ಟಿಸುತ್ತಿದೆ ತ್ಯಾಜ್ಯದ ಹೊಗೆ


Team Udayavani, Jan 17, 2019, 10:31 AM IST

blore-01.jpg

ಬೆಂಗಳೂರು: ಋತುಮಾನ ಬದಲಾವಣೆ ಹಿನ್ನೆಲೆಯಲ್ಲಿ ನಗರದ ಉದ್ಯಾನವನಗಳು ಹಾಗೂ ರಸ್ತೆಬದಿ ಮರಗಳ ಎಲೆಗಳು ಉದುರಲಾರಂಭಿಸಿವೆ. ಎಲ್ಲೆಡೆ ತರಗು ರಾಶಿ ಬೀಳುತ್ತಿದೆ. ಆದರೆ, ಹೀಗೆ ಉದುರಿದ ಎಲೆಗಳ ವೈಜ್ಞಾನಿಕ ನಿರ್ವಹಣೆಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಜನ ತೊಂದರೆ ಅನುಭವಿಸುವಂತಾಗಿದೆ.

ಋತುಮಾನ ಬದಲಾದಂತೆ ಚಳಿ ಗಾಲದಲ್ಲಿ ಸಾಮಾನ್ಯವಾಗಿ ಹಳೆಯ ಎಲೆಗಳು ಉದುರಿ ಹೊಸ ಎಲೆಗಳು ಚಿಗುರಲಾರಂಭಿಸುತ್ತವೆೆ. ಅದ ರಂತೆ ತಿಂಗಳಿನಿಂದ ಈಚೆಗೆ ಎಲೆಗಳ ಉದುರುವಿಕೆ ಪ್ರಮಾಣ ಹೆಚ್ಚಾಗಿದ್ದು, ನಗರದಾದ್ಯಂತ ತರಗು ರಾಶಿಗೆ ಬೆಂಕಿ ಹಚ್ಚುವುದು, ದಟ್ಟ ಹೊಗೆ ಕಾಣಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿದೆ. ತರಗು ವಿಲೇವಾರಿಗೆ ಇದು ಸುಲಭ ಉಪಾಯ ವೆನಿಸಿದರೂ ಸಾರ್ವಜನಿಕರ ಆರೋಗ್ಯ ಮಾತ್ರವಲ್ಲದೆ ಪರಿಸರಕ್ಕೂ ಮಾರಕವಾಗಿ ಪರಿಣಮಿಸಿದೆ.

ಈಗಾಗಲೇ ನಗರದಲ್ಲಿನ ವಾಯು ಮಾಲಿನ್ಯದಿಂದ ಜನ ಹಲವು ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಇದೀಗ ಎಲ್ಲೆಂದರಲ್ಲಿ ಎಲೆಗಳ ರಾಶಿ ಹಾಗೂ ತ್ಯಾಜ್ಯ ರಾಶಿಗೆ ಬೆಂಕಿ ಹಚ್ಚುತ್ತಿರುವುದರಿಂದ ಉಂಟಾಗುತ್ತಿರುವ ದಟ್ಟ ಹೊಗೆ, ಕಮುಟು ವಾಸನೆ ಜನರನ್ನು ಕಾಡಲಾ ರಂಭಿಸಿದೆ. ನಗರದ ಪ್ರಮುಖ ಉದ್ಯಾನಗಳ ಬಳಿಯೂ ಎಲೆಗಳ ರಾಶಿಗೆ ಬೆಂಕಿ ಹಚ್ಚುತ್ತಿರುವುದರಿಂದ ವಾಯುವಿಹಾರಿಗಳು, ಶಾಲಾ ಮಕ್ಕಳು, ಸಾರ್ವ ಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ.

ಜತೆಗೆ ಪ್ರಮುಖ ರಸ್ತೆಗಳನ್ನು ಸ್ವಚ್ಛ ಗೊಳಿಸುತ್ತಿರುವ ಪೌರಕಾರ್ಮಿಕರು ಸಂಗ್ರಹವಾದ ಒಣ ತ್ಯಾಜ್ಯ ಹಾಗೂ ಎಲೆ ರಾಶಿಗೆ ಬೆಂಕಿ ಹಚ್ಚುವುದು ಅಲ್ಲಲ್ಲಿ ನಡೆದಿದೆ. ಕೆಲ ಬಡಾವಣೆಗಳಲ್ಲಿ ಸಾರ್ವಜನಿಕರು ಚಳಿ ಹಾಗೂ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ತ್ಯಾಜ್ಯಕ್ಕೆ ಬೆಂಕಿ ಹಚ್ಚುತ್ತಿದ್ದಾರೆ. ಇದರಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡು ಸಮಸ್ಯೆ ಸೃಷ್ಟಿಯಾಗುತ್ತಿದೆ. ಇನ್ನು ಸಾರ್ವಜನಿಕರಾಗಲಿ, ಪೌರಕಾರ್ಮಿಕರಾಗಲಿ ತ್ಯಾಜ್ಯಕ್ಕೆ ಬೆಂಕಿ ಹಾಕುವುದು ಕಂಡುಬಂದರೆ ಭಾರೀ ದಂಡ ವಿಧಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದರೂ, ತ್ಯಾಜ್ಯಕ್ಕೆ ಬೆಂಕಿ ಹಾಕುವ ಕೃತ್ಯಕ್ಕೆ ಕಡಿವಾಣ ಬಿದ್ದಿಲ್ಲ.

ಉದ್ಯಾನಗಳ ನಿರ್ವಹಣೆಯಿಲ್ಲ: ಬಿಬಿಎಂಪಿ ವ್ಯಾಪ್ತಿಯಲ್ಲಿ 1400ಕ್ಕೂ ಹೆಚ್ಚಿನ ಉದ್ಯಾನಗಳಿದ್ದರೂ, ಉದುರುವ ಎಲೆಗಳನ್ನು ಸಂಗ್ರಹಿಸಿ ಗೊಬ್ಬರವಾಗಿ ಪರಿವರ್ತಿಸುವ ಕಾರ್ಯ ನಡೆಯುತ್ತಿರುವುದು ಬೆರಳೆಣಿಕೆಯಷ್ಟು ಉದ್ಯಾನಗಳಲ್ಲಿ ಮಾತ್ರ. ಉಳಿದಂತೆ ಸಾವಿರಕ್ಕೂ ಹೆಚ್ಚಿನ ಉದ್ಯಾನಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಸಂಗ್ರಹವಾಗುವ ಒಣಗಿದ ಎಲೆಗಳ ವೈಜ್ಞಾನಿಕ ವಿಲೇವಾರಿಗೆ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಂಡಂತಿಲ್ಲ.

ಶ್ವಾಸಕೋಶ ಸುಡುತ್ತದೆ ಜೋಕೆ: ಎಲೆಗಳು ಹಾಗೂ ತ್ಯಾಜ್ಯಕ್ಕೆ ಬೆಂಕಿ ಹಾಕಿದರೆ ಅದರಿಂದ ಬರುವ ಹೊಗೆ, ಮನುಷ್ಯನ ಶ್ವಾಸಕೋಶಕ್ಕೆ ತೀವ್ರ ಹಾನಿಯುಂಟು ಮಾಡುತ್ತದೆ. ವಾತಾವರಣದಲ್ಲಿ ಈಗಾಗಲೇ ಧೂಳಿನ ಕಣಗಳು ಹೆಚ್ಚಾಗಿದ್ದು, ಅದರೊಂದಿಗೆ ಇಂಗಾಲ ಸೇರಿದರೆ ಮತ್ತಷ್ಟು ತೊಂದರೆಯಾಗುತ್ತದೆ. ಹೀಗಾಗಿ ಸಾರ್ವಜನಿಕರಾಗಲಿ, ಪೌರಕಾರ್ಮಿಕರಾಗಲಿ ಬೆಂಕಿ ಹಾಕಬಾರದು ಎಂದು ಪರಿಸರವಾದಿಗಳು ಹಾಗೂ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಎಲೆ ಸಂಗ್ರಹಕ್ಕೆ ಪ್ರತ್ಯೇಕ ಕಾಂಪ್ಯಾಕ್ಟರ್‌: ಪಾಲಿಕೆ ವ್ಯಾಪ್ತಿ ಯಲ್ಲಿ ಹೆಚ್ಚಿನ ಉದ್ಯಾನಗಳು ಹಾಗೂ ಮರಗಳಿರುವ ವಾರ್ಡ್‌ಗಳಿಗೆ ಎಲೆ ತ್ಯಾಜ್ಯ ಸಂಗ್ರಹಕ್ಕೆಂದೇ ಪ್ರತ್ಯೇಕ ಕಾಂಪ್ಯಾಕ್ಟರ್‌ ಹಾಗೂ ಆಟೋ ಟಿಪ್ಪರ್‌ಗಳನ್ನು ನೀಡಲಾಗಿದೆ. ಜತೆಗೆ ಎಲೆಗಳಿಗೆ ಬೆಂಕಿ ಹಾಕುವುದರಿಂದ ಆಗುವ ತೊಂದರೆಗಳ ಕುರಿತಂತೆ ಪೌರಕಾರ್ಮಿಕರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದ್ದು, ಟೀ ಅಂಗಡಿ, ಬೀದಿ ಬದಿ ವ್ಯಾಪಾರಿಗಳು ಬೆಂಕಿ ಹಾಕುತ್ತಿರುವುದು ಕಂಡು ಬಂದಿದೆ. ಹೀಗಾಗಿ ಅವರಿಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಘನ ತ್ಯಾಜ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತ ರಂದೀಪ್‌ ತಿಳಿಸಿದ್ದಾರೆ.

ಹತ್ತು ಸಿಗರೇಟು ಸೇದಿದಾಗ ಶ್ವಾಸಕೋಶದ ಮೇಲಾಗುವಷ್ಟು ಪರಿಣಾಮ, ಎಲೆ, ತ್ಯಾಜ್ಯಕ್ಕೆ ಬೆಂಕಿ ಹಾಕು ವುದರಿಂದ ಬರುವ ಹೊಗೆಯನ್ನು ಒಮ್ಮೆ ಸೇವಿಸುವುದರಿಂದ ಆಗುತ್ತದೆ. ಈ ಸಂಬಂಧ ಪೌರಕಾರ್ಮಿಕರಿಗೆ ಜಾಗೃತಿ ಮೂಡಿಸಬೇಕು. ನಾಗರಿಕರು ಸಹ ಎಲೆಗಳಿಗೆ ಬೆಂಕಿ ಹಾಕದೆ, ಗೊಬ್ಬರವಾಗಿ ಪರಿವರ್ತಿಸಬೇಕು.
 ಯಲ್ಲಪ್ಪರೆಡ್ಡಿ, ಪರಿಸರವಾದಿ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.