“ಕಲೆಯ ಆಸಕ್ತಿ ಇರುವವ  ಮಾತ್ರ ಆಸ್ವಾದಿಸಬಲ್ಲ’


Team Udayavani, Jan 18, 2019, 12:30 AM IST

17ksde3.jpg

ವಿದ್ಯಾನಗರ: ಕಲೆಯ ಬಗ್ಗೆ ಆಸಕ್ತಿ ಹಾಗೂ ಕುತೂಹಲ ಇರುವ ಸಹೃದಯನಿಗೆ  ಮಾತ್ರ ರಸಾಸ್ವಾದನೆ ಸಾಧ್ಯ. ಕಲೆಯನ್ನು ವೀಕ್ಷಿಸುವ ಒಳಗಿನ ಕಣ್ಣು ಜಾಗೃತವಾದಾಗಲೇ ಕಲೆ ನಮ್ಮನ್ನು ಹೆಚ್ಚು ತಿಳಿಯುವಂತೆ ಮಾಡುತ್ತದೆ ಎಂದು ವಿದ್ವಾಂಸ ಡಾ| ಎಂ. ಪ್ರಭಾಕರ ಜೋಷಿ ಅಭಿಪ್ರಾಯಪಟ್ಟಿದ್ದಾರೆ.

ಕಣ್ಣೂರು ವಿಶ್ವವಿದ್ಯಾನಿಲಯದ ಭಾರ ತೀಯ ಭಾಷಾ ಅಧ್ಯಯನಾಂಗ ಹಾಗೂ ಕಾಸರ ಗೋಡು ಸರಕಾರಿ ಕಾಲೇಜಿನ ಯಕ್ಷಗಾನ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಚಾಲಾ ಕೇಂದ್ರದಲ್ಲಿ ನಡೆದ “ಯಕ್ಷಗಾನ ರಸಾಸ್ವಾದನೆ ಮತ್ತು ಪುಸ್ತಕ ವಿಮರ್ಶೆ’ ಕಾರ್ಯಕ್ರಮದಲ್ಲಿ ಅವರು “ಯಕ್ಷಗಾನ ರಸಾಸ್ವಾದನೆ’ ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ ನೀಡಿ ಮಾತನಾಡಿದರು.

ಪ್ರತಿಯೊಂದು ಕಲೆಯಲ್ಲೂ ಅಭಿವ್ಯಕ್ತಿ ವಿಧಾನಗಳು ವಿಭಿನ್ನವಾಗಿರುತ್ತವೆ. ಅದೇ ರೀತಿಯಲ್ಲಿ ರಸ, ಧ್ವನಿ, ಅಲಂಕಾರ. ಅಭಿನಯ ಇನ್ನಿತ್ಯಾಇತ್ಯಾದಿಗಳಲ್ಲೂ ವ್ಯತ್ಯಾಸಗಳಿರುತ್ತವೆ. ಆಸ್ವಾದನೆಯ ರೀತಿಯೂ ಕಲೆಯಿಂದ ಕಲೆಗೆ ವಿಭಿನ್ನವಾಗಿರುತ್ತದೆ. ಒಂದು ಕಲೆಯನ್ನು ಅರ್ಥಮಾಡುವುದೆಂದರೆ ಆ ಕಲೆಯ ಘಟನೆಗಳನ್ನು ಅರ್ಥಮಾಡುವು ದೆಂದರ್ಥಎಂದರು.

ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪರೀಕ್ಷಿತ್‌ ತೋಳ್ಪಾಡಿ ಅವರು ಡಾ| ಸುಂದರ ಕೇನಾಜೆ ಬರೆದ “ಜೋಶಿ ಆಳ ಮನದಾಳ’ ಎಂಬ ಕೃತಿಯ ಕುರಿತು ಮಾತನಾಡಿ, ವ್ಯಕ್ತಿಯ ಪರಿಚಯಾತ್ಮಕ ವಿವರಗಳನ್ನು  ನೀಸಿ ಯಕ್ಷಗಾನದ ಹಲವು ಚಿಂತನೆಗಳನ್ನು ಪಡಿಮೂಡಿಸುವುದರಲ್ಲಿ ಕೃತಿ ಯಶಸ್ವಿಯಾಗಿದೆ. ಬುದ್ಧಿ ಭಾವಗಳ ಸಮತೋಲನವನ್ನು ಕೇನಾಜೆಯವರು ಕೃತಿಯಲ್ಲಿ ಕಾಯ್ದುಕೊಂಡಿದ್ದಾರೆ ಎಂದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾ ಟಿಸಿದ ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಂಶುಪಾಲ   ಡಾ| ಅರವಿಂದ ಕೃಷ್ಣನ್‌ ಮಾತನಾಡಿದರು. ಕಣ್ಣೂರು ವಿಶ್ವವಿದ್ಯಾ ನಿಲಯದ ಸಿಂಡಿಕೇಟ್‌ ಸದಸ್ಯ ರಾಜು ಎಂ.ಸಿ, ಕನ್ನಡ ವಿಭಾಗದ ಮುಖ್ಯಸ್ಥೆ ಸುಜಾತಾ ಎಸ್‌. ಮುಖ್ಯ ಅತಿಥಿಗಳಾಗಿ ಭಾಗ ವಹಿಸಿ ದ್ದರು. ಭಾರತೀಯ ಭಾಷಾ ಅಧ್ಯಯನಾಂಗ ಕನ್ನಡ ವಿಭಾಗದ ನಿರ್ದೇಶಕ ಡಾ| ರಾಜೇಶ್‌ ಬೆಜ್ಜಂಗಳ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು. ಡಾ| ಸುಂದರ ಕೇನಾಜೆ, ಮೈಸೂರಿನ ಎಂ.ಸಿ. ಮನೋಹರ್‌ ಈ ಮುಂತಾದವರು ಮಾತನಾಡಿದರು.

ಸಂಶೋಧನ ಕೇಂದ್ರದ ಸಂಯೋಜನಾಧಿ ಕಾರಿ ಡಾ| ರತ್ನಾಕರ ಮಲ್ಲಮೂಲೆ ಸ್ವಾಗತಿಸಿ, ವಕ್ತಾರೆ ಸವಿತಾ ಬಿ. ವಂದಿಸಿದರು. ಪ್ರದೀಪ್‌ ಬಿ.ಎಸ್‌, ಸುಜಿತ್‌ ಉಪ್ಪಳ ಕಾರ್ಯಕ್ರಮ ನಿರೂಪಿಸಿದರು. ಬಿಎಡ್‌, ಎಂ.ಎ, ಎಂಫಿಲ್‌, ಪಿಎಚ್‌ಡಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.