ಮಂಗನ ಕಾಯಿಲೆ : ಮತ್ತೆ 11 ಮಂದಿಗೆ ಜ್ವರ
Team Udayavani, Jan 18, 2019, 12:55 AM IST
ಸಾಗರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸುತ್ತಲೇ ಇದ್ದು, ಗುರುವಾರ ಅರಳಗೋಡಿನಲ್ಲಿ ಒಟ್ಟು 11 ಜ್ವರದ ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಆರು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅರಳಗೋಡಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಹಿತಿ ಪ್ರಕಾರ, ಈವರೆಗೆ ಇಲ್ಲಿಂದ 75 ಜನರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಪ್ರಸ್ತುತ ಈ ದಿನದ ಆರು ಪ್ರಕರಣಗಳು ಸೇರಿದಂತೆ ಒಟ್ಟು 28 ಜನ ಮಣಿಪಾಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಅರಳಗೋಡಿನ 7 ಜನ ಕೆಎಫ್ಡಿಗೆ ತುತ್ತಾಗಿ ಮೃತಪಟ್ಟಿರುವುದು ದೃಢಪಟ್ಟಿದೆ. ಗುರುವಾರ ಕೂಡ ಮಂಗಗಳ ಸಾವಿನ ಮಾಹಿತಿ ಲಭ್ಯವಾಗಿದ್ದು, ಹಿರೇನೆಲ್ಲೂರು ಹಾಗೂ ಬ್ಯಾಕೋಡು ಸಮೀಪದ ಮೂರುಕೈ ಎಂಬಲ್ಲಿ ತಲಾ ಒಂದು ಮಂಗ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಪರೀಕ್ಷಾ ವರದಿ ಪಾಸಿಟಿವ್
ಬೈಂದೂರಿನ ಶಿರೂರಿನಲ್ಲಿ ಮಂಗಗಳು ಮೃತಪಟ್ಟಿರುವುದು ಮಂಗನ ಕಾಯಿಲೆಯಿಂದ ಎನ್ನುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಉಡುಪಿ ಜಿಲ್ಲೆಯ ನೋಡಲ್ ಅಧಿಕಾರಿಗಳ ಮಾಹಿತಿ ಪ್ರಕಾರ ಒಟ್ಟು 12 ಮಂಗಗಳ ಪರೀಕ್ಷೆ ವರದಿ ಪುಣೆಯ ಪ್ರಯೋಗಾಲಯದಿಂದ ಬಂದಿದ್ದು, ಇವುಗಳಲ್ಲಿ
ಎಂಟರಲ್ಲಿ ಮಂಗನ ಕಾಯಿಲೆ ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ