ಪಾಂಡೆ, ನಾಯರ್ ಸಾಹಸ: ರಣಜಿ ಉಪಾಂತ್ಯಕ್ಕೇರಿದ ಕರ್ನಾಟಕ
Team Udayavani, Jan 18, 2019, 6:35 AM IST
ಬೆಂಗಳೂರು: ನಾಯಕ ಮನೀಶ್ ಪಾಂಡೆ ಮತ್ತು ಕರುಣ್ ನಾಯರ್ ಬ್ಯಾಟಿಂಗ್ ಸಾಹಸದಿಂದ ಕರ್ನಾಟಕ ತಂಡ ರಣಜಿ ಟ್ರೋಫಿ ಸೆಮಿ ಫೈನಲ್ ಗೇರಿದೆ. ರಾಜಸ್ಥಾನ ವಿರುದ್ಧ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ 6 ವಿಕೆಟ್ ಗಳ ಜಯ ಸಾಧಿಸಿ ಉಪಾಂತ್ಯ ಸುತ್ತಿಗೇರಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗಾಗಿ 184 ರನ್ ಗಳ ಗುರಿ ಪಡೆದ ಕರ್ನಾಟಕ ತಂಡ ಮೂರನೇ ದಿನದ ಅಂತ್ಯಕ್ಕೆ 45 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು. ಶುಕ್ರವಾರಕ್ಕೆ ಕರುಣ್ ನಾಯರ್ ಜೊತೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ರೋನಿತ್ ಮೋರೆ ಬೆಳಗ್ಗೆ ಔಟ್ ಆಗುವ ಮೂಲಕ ಕರ್ನಾಟಕ ಪಾಳಯದಲ್ಲಿ ಆತಂಕ ಹೆಚ್ಚಾಗಿತ್ತು.
ಕಾಪಾಡಿದ ಕರುಣ್, ಪಾಂಡೆ: 56 ರನ್ ಗೆ 4 ವಿಕೆಟ್ ಕಳೆದುಕೊಂಡ ಕರ್ನಾಟಕಕ್ಕೆ ನೆರವಾಗಿದ್ದು ಹೊಸ ನಾಯಕ ಮನೀಶ್ ಪಾಂಡೆ ಮತ್ತು ಕರುಣ್ ನಾಯರ್. ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸಿದ ಪಾಂಡೆ ಕೇವಲ 75 ಎಸೆತಗಳಲ್ಲಿ ಅಜೇಯ 87 ರನ್ ಗಳಿಸಿದರು. ಪಾಂಡೆಗೆ ಉತ್ತಮ ಸಾಥ್ ನೀಡಿದ ನಾಯರ್ 61 ರನ್ ಗಳಿಸಿ ತಂಡಕ್ಕೆ ಜಯ ತಂದಿತ್ತರು.
ಪ್ರಥಮ ಇನ್ನಿಂಗ್ಸ್ ನಲ್ಲಿ ಅಜೇಯ 83 ರನ್ ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದ ವಿನಯ್ ಕುಮಾರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ