ಕನ್ನಡದ ಉಳಿವಿಗೆ ಹೋಬಳಿಗೊಂದು ಮಾದರಿ ಶಾಲೆಯಾಗಲಿ
Team Udayavani, Jan 18, 2019, 10:24 AM IST
ಶಿರಸಿ: ಕನ್ನಡ ಶಾಲೆಯ ಉಳಿಸಲು ಹೋಬಳಿಗೊಂದು ಮಾದರಿ ಕನ್ನಡ ಶಾಲೆಯನ್ನು ಸರಕಾರ ಆರಂಭಿಸಬೇಕು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ| ಮೋಹನ್ ಆಳ್ವಾ ರಾಜ್ಯ ಸರಕಾರವನ್ನು ಆಗ್ರಹಿಸಿದರು.
ನಗರದ ವಿಕಾಸಾಶ್ರಮ ಬಯಲಿನಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಪ್ರಸ್ತುತಗೊಳಿಸುವ ವೈವಿಧ್ಯಮಯ ಆಳ್ವಾಸ್ ಸಾಂಸ್ಕೃತಿಕ ವೈಭವ ಸಂಭ್ರಮದಲ್ಲಿ ಅವರು ಮಾತನಾಡಿದರು. ಕನ್ನಡದ ಉಳಿವು ನಮ್ಮ ಕೈಲಿದೆ. ಯಾವುದೇ ಕಾರಣಕ್ಕೂ ಕನ್ನಡದ ಮೇಲೆ ನಿರ್ಲಕ್ಷ ಮಾಡುವುದು ಸರಿಯಲ್ಲ. ಕನ್ನಡ ಶಾಲೆಯ ಬದಲಿಗೆ ಆಂಗ್ಲ ಮಧ್ಯಮ ಶಾಲೆ ನಡೆಸುವುದು ಸರಿಯಲ್ಲ. ಮೊದಲು ಸರಕಾರ ಒಂದರಿಂದ ಏಳನೇ ತರಗತಿ ತನಕವಾದರೂ ಏಳು ಶಿಕ್ಷಕರನ್ನು ಶಾಲೆಯೊಂದಕ್ಕೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಯೊಬ್ಬರಿಗೂ ಸಾಂಸ್ಕೃತಿಕ ಪ್ರಜ್ಞೆ ಬೇಕು. ಇದರಿಂದಲೇ ಪ್ರೀತಿಯ ಬದುಕು ಕಟ್ಟಬೇಕು. ನಮ್ಮಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಹಗಊ ಕಲಾ ಸಂಪತ್ತು ಇದೆ. ಪ್ರಸ್ತುತ ಅಂಥ ಕಲಾ ಸಂಪತ್ತು ಮುಂದುವರಿಸಲು ಕಲಾಸಕ್ತರು ಜಾಗೃತರಾಗಬೇಕು ಎಂದ ಅವರು, ಶಿರಸಿಗೂ ನಮ್ಮಲ್ಲಿಗೂ ಸಂಬಂಧ ಗಟ್ಟಿಗೊಳ್ಳಬೇಕು. ಒಡಂಬಡಿಕೆಯಾಗಬೇಕು ಎಂದರು.
ಸಂಕಲ್ಪದ ಮುಖ್ಯಸ್ಥ ಪ್ರಮೋದ ಹೆಗಡೆ, ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆ ಭಾವೈಕ್ಯತೆ ನಮ್ಮ ಪರಂಪರೆ ವಿಶೇಷತೆಯಾಗಿದೆ ಎಂದರು.
ಸಹಾಯಕ ಆಯುಕ್ತ ರಾಜು ಮೊಗವೀರ, ನ್ಯಾಯಾಧೀಶ ಶಾಂತವೀರಪ್ಪ, ಸಹಕಾರಿ ರವೀಂದ್ರ ಹೆಗಡೆ ಹೀರೇಕೈ, ಬಸವರಾಜ್ ದೊಡ್ಮನಿ, ವೆಂಕಟೇಶ ನಾಯ್ಕ, ಶ್ರೀಲತಾ ಕಾಳೇರಮನೆ, ಪ್ರಕಾಶ ಭಾಗವತ್, ಡಾ| ಶಿವರಾಂ ಕೆವಿ, ದೀಪಕ ದೊಡ್ಡೂರು ಇತರರು ಇದ್ದರು. ವಿ. ವಿನಾಯಕ ಭಟ್ಟ ಗಾಳಿಮನೆ ನಿರ್ವಹಿಸಿದರು.
ಸಾಂಸ್ಕೃತಿಕ ಸಂಭ್ರಮ: ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುವ ಮೂನ್ನೂರೈವತ್ತಕ್ಕೂ ಅಧಿಕ ಮಕ್ಕಳು ಮೂರು ತಾಸುಗಳಿಗೂ ಅಧಿಕ ಕಾಲ ವೈವಿಧ್ಯಮಯ ಕಾರ್ಯಕ್ರಮ ಪ್ರಸ್ತುತಗೊಳಿಸಿ ಜನ ಮೆಚ್ಚುಗೆಗೆ ಕಾರಣರಾದರು.
ಯಕ್ಷಗಾನದಲ್ಲಿ ಶ್ರೀರಾಮ ಪಟ್ಟಾಭಿಷೇಕ, ಭರತನಾಟ್ಯದಲ್ಲಿ ನವದುರ್ಗೆಯರು, ಮಣಿಪುರಿಯ ಸಾಹಸಾತ್ಮಕ ನೃತ್ಯ, ಮಲ್ಲಕಂಬ ಪ್ರದರ್ಶನ, ಕಥಕಳಿ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನೆರೆದಿದ್ದ ನಾಲ್ಕು ಸಾವಿರಕ್ಕೂ ಅಧಿಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು