51 ಸ್ತ್ರೀಯರ ದೇಗುಲ ಪ್ರವೇಶ
Team Udayavani, Jan 19, 2019, 12:30 AM IST
ಹೊಸದಿಲ್ಲಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ 51 ಮಂದಿ ಮಹಿಳೆಯರು ಪ್ರವೇಶ ಮಾಡಿದ್ದಾರೆ ಎಂದು ಕೇರಳ ಸರಕಾರ ಸುಪ್ರೀಂಕೋರ್ಟ್ಗೆ ಶುಕ್ರವಾರ ಮಾಹಿತಿ ನೀಡಿದೆ. ದೇಗುಲಕ್ಕೆ ಎಷ್ಟು ಮಂದಿ ಮಹಿಳೆಯರು ಪ್ರವೇಶ ಮಾಡಿದ್ದಾರೆ ಎಂಬ ಬಗ್ಗೆ ಜಿಜ್ಞಾಸೆ ಮೂಡಿರುವಾಗಲೇ ಕೇರಳ ಸರಕಾರ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠಕ್ಕೆ ಈ ವಿವರಣೆ ನೀಡಿದೆ.
ಇದೇ ಸಂದರ್ಭದಲ್ಲಿ ದೇಗುಲ ಪ್ರವೇಶ ಮಾಡಿದ ಬಿಂದು ಮತ್ತು ಕನಕದುರ್ಗಾ ಅವರಿಗೆ ಕೇರಳ ಸರಕಾರ 24 ಗಂಟೆಗಳ ಕಾಲವೂ ರಕ್ಷಣೆ ನೀಡಬೇಕು ಎಂದು ಸಿಜೆಐ ಗೊಗೋಯ್, ನ್ಯಾ.ಎಲ್.ಎನ್ ರಾವ್ ಮತ್ತು ನ್ಯಾ.ದಿನೇಶ್ ಮಾಹೇಶ್ವರಿ ಅವರನ್ನೊಳಗೊಂಡ ಪೀಠ ನಿರ್ದೇಶನ ನೀಡಿದೆ.
ಕೇರಳ ಸರಕಾರದ ಪರ ವಾದಿಸಿದ ಹಿರಿಯ ನ್ಯಾಯವಾದಿ ವಿಜಯ ಹನ್ಸಾರಿಯಾ, 10-50ರ ವಯೋಮಿತಿಯ 51 ಮಹಿಳೆಯರು ದೇಗುಲ ಪ್ರವೇಶ ಮಾಡಿದ್ದಾರೆ. 7,564 ಮಂದಿ ದರ್ಶನ ಕೋರಿ ನೋಂದಣಿ ಮಾಡಿಸಿಕೊಂಡಿದ್ದರು ಎಂದು ಹೇಳಿದ್ದಾರೆ. ಕೇರಳ ಪೊಲೀಸ್ ಇಲಾಖೆ ಶುರು ಮಾಡಿದ ಡಿಜಿಟಲ್ ಕ್ಯೂ ವ್ಯವಸ್ಥೆಯಲ್ಲಿ ಈ ವರ್ಷ 16 ಲಕ್ಷ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಪೈಕಿ 8.2 ಲಕ್ಷ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಿದ್ದಾರೆ.
ಅದಕ್ಕೆ ಉತ್ತರಿಸಿದ ನ್ಯಾಯಪೀಠ “ನೀವು (ಕೇರಳ ಸರಕಾರ) ಕೋರ್ಟ್ ಆದೇಶ ನೀಡುವುದಕ್ಕೆ ಮೊದಲೇ ಬಿಂದು ಮತ್ತು ಕನಕದುರ್ಗಾ ಅವರಿಗೆ ರಕ್ಷಣೆ ನೀಡುತ್ತಿದ್ದರೆ ಸಮಸ್ಯೆ ಇಲ್ಲ. ಇನ್ನು ಮುಂದೆ 24 ಗಂಟೆಗಳ ಕಾಲ ಭದ್ರತೆ ನೀಡಬೇಕು ಆದೇಶಿಸುತ್ತೇವೆ. ಇದಕ್ಕಿಂತ ಹೆಚ್ಚು ಬೇರೆ ವಿಚಾರ ಅರಿಕೆ ಮಾಡಲು ಅವಕಾಶ ಇಲ್ಲ’ ಎಂದು ಹೇಳಿತು.
ಈ ನಡುವೆ, 51 ಮಹಿಳೆಯರು ದೇಗುಲ ಪ್ರವೇಶಿಸಿದ್ದಾರೆ ಎನ್ನುವ ಮೂಲಕ ಕೇರಳ ಸರಕಾರವು ಸುಳ್ಳು ಅಫಿಡವಿಟ್ ಸಲ್ಲಿಸಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಆರೋಪಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ