ಕೈ’ ಕೊಟ್ಟ ಶಾಸಕ ಜಾಧವ ಮನೆಗೆ ಬಿಗಿ ಭದ್ರತೆ
Team Udayavani, Jan 19, 2019, 12:55 AM IST
ಚಿಂಚೋಳಿ: ಮೀಸಲು ವಿಧಾನಸಭಾ ಮತಕ್ಷೇತ್ರದ ಶಾಸಕ ಡಾ| ಉಮೇಶ ಜಾಧವ ಅವರು ಶಾಸಕಾಂಗ ಸಭೆಗೆಅ ನಾರೋಗ್ಯದ ಹಿನ್ನೆಲೆಯಲ್ಲಿ ಗೈರಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಪಟ್ಟಣದ ಚಂದಾಪುರ ನಗರದಲ್ಲಿರುವ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಕರೆದಿದ್ದ ಶಾಸಕಾಂಗ ಸಭೆಯಲ್ಲಿ ಶಾಸಕರು ಹಾಜರಾಗಬೇಕಿತ್ತು. ಅನಾರೋಗ್ಯದ ನೆಪ ಹೇಳಿ, ಫ್ಯಾಕ್ಸ್ ಮೂಲಕ ತಿಳಿಸಿ, ಸಭೆಗೆ ಗೈರು ಆಗಿದ್ದರು. ಹೀಗಾಗಿ, ಶಾಸಕ ಡಾ.ಉಮೇಶ ಜಾಧವ ಅವರು ಬಿಜೆಪಿ ತೆಕ್ಕೆಗೆ ಜಾರಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡು ದಿನದ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರು ಬಿಜೆಪಿ ಕುದುರೆ ವ್ಯಾಪಾರಕ್ಕೆ 50 ಕೋಟಿ ರೂ.ಗೆ ಮಾರಾಟ ಆಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿನ ಶಾಸಕರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ, ಮುಂಬೈನಿಂದ ಹೈದ್ರಾಬಾದ್ಗೆ ವಿಮಾನದ ಮೂಲಕ ಆಗಮಿಸಿ, ಗಡಿಗ್ರಾಮ ಕುಂಚಾವರಂ ನಲ್ಲಿ ವಾಸ್ತವ್ಯ ಹೂಡಿ ಕಾರ್ಯಕರ್ತರೊಂದಿಗೆ ಬಿಜೆಪಿಗೆ ಸೇರ್ಪಡೆ ಕುರಿತು ಸಭೆ ನಡೆಸುವವರಿದ್ದರು. ಕಲಬುರಗಿಯಲ್ಲಿ ಪ್ರತಿಭಟನೆ ಸುದ್ದಿ ಕೇಳಿ ಪುನ: ಮುಂಬೈಗೆ ತೆರಳಿದ್ದರು. ಹೀಗಾಗಿ, ಚಂದಾಪುರ ನಿವಾಸಕ್ಕೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಈ ಕುರಿತು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನೀಲಕುಮಾರ ಜಮಾದಾರ “ಉದಯವಾಣಿ’ ಜತೆ ಮಾತನಾಡಿ, ನಮ್ಮ ಶಾಸಕರು ಎಲ್ಲಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲ. ನಮಗೆ ಪಕ್ಷ ಮುಖ್ಯ, ಶಾಸಕರಲ್ಲ. ಪಕ್ಷ ಸೂಚಿಸಿದಂತೆ ನಾವು ಕೆಲಸ ಮಾಡುತ್ತೇವೆ. ಶಾಸಕರು ಎಲ್ಲಿದ್ದಾರೆ ಎಂದು ನನ್ನನ್ನು ಕೇಳಬೇಡಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು